ನಾಳೆ ಮಧ್ಯಾಹ್ನ 12 ರಿಂದ 3  ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿ ಬಂದ್: ಬಡಗಲಪುರ ನಾಗೇಂದ್ರ

ಮೈಸೂರು, ಫೆ. 05: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಸಂಯುಕ್ತ ಹೋರಾಟ ಸಮಿತಿ ವತಿಯಿಂದ ಕರೆ ನೀಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ‌ ನಾಗೇಂದ್ರ, ನಾಳೆ ಮಧ್ಯಾಹ್ನ 12 ರಿಂದ 3  ಗಂಟೆವರೆಗೆ ದೇಶಾದ್ಯಂತ ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಸಂಯುಕ್ತ ಕಿಸಾನ್ ಮಂಚ್ ಕರೆ ಕೊಟ್ಟಿದ್ದು, ಸಂಯುಕ್ತ ಕಿಸಾನ್ ಮಂಚ್ ನ ಪ್ರತಿಭಟನೆಗೆ ರಾಜ್ಯ ರೈತ ಸಂಘ ಬೆಂಬಲ ನೀಡಿದೆ.  ಹೀಗಾಗಿ ನಾಳೆ ರಾಜ್ಯದಲ್ಲೂ ರೈತಮುಖಂಡರು ರಾಷ್ಟ್ರೀಯ, ರಾಜ್ಯ ಹೆದ್ಧಾರಿ ತಡೆದು ಪ್ರತಿಭಟನೆ ನಡೆಸಲಿದ್ದಾರೆ.

ಈ ನಡುವೆ ಮೈಸೂರು- ಬೆಂಗಳೂರು ಹೆದ್ದಾರಿಯ ಕೊಲಂಬಿಯಾ ಏಷಿಯಾ ಸರ್ಕಲ್,  ಮೈಸೂರು- ಊಟಿ ಬಂಡಿಪಾಳ್ಯ, ಬೆಂಗಳೂರು- ಹಾಸನ ಹೆದ್ದಾರಿಯ ಚನ್ನರಾಯಪಟ್ಟಣ, ಮಂಡ್ಯದ ವಿ.ಸಿ.ಫಾರಂ, ಚಿತ್ರದುರ್ಗ, ಗುಬ್ಬಿ, ರಾಯಚೂರು, ಕೋಲಾರ ಸೇರಿದಂತೆ ಹಲವು ಕಡೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

Exit mobile version