• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ: 31 ವಿಧೇಯಕಗಳ ಮಂಡನೆ ಸಾಧ್ಯತೆ

Rashmitha Anish by Rashmitha Anish
in ಪ್ರಮುಖ ಸುದ್ದಿ, ರಾಜಕೀಯ
ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ: 31 ವಿಧೇಯಕಗಳ ಮಂಡನೆ ಸಾಧ್ಯತೆ
0
SHARES
45
VIEWS
Share on FacebookShare on Twitter

New Delhi (ಜುಲೈ 20, 2023): ಭಾರೀ ಕೋಲಾಹಲದ ನಿರೀಕ್ಷೆಯಲ್ಲಿರುವ ಸಂಸತ್ತಿನ ಮುಂಗಾರು ಅಧಿವೇಶನ (From today Monsoon session) ಇಂದಿನಿಂದ ( ಗುರುವಾರ) ಆರಂಭವಾಗಲಿದೆ.

ಅಧಿವೇಶನವು ಜುಲೈ 20 ರಿಂದ ಆಗಸ್ಟ್ 11 ರವರೆಗೆ ನಡೆಯಲಿದೆ. ಒಟ್ಟು 23 ದಿನಗಳು, ನಡೆಯಲಿರುವ ಈ ಅಧಿವೇಶನದಲ್ಲಿ 17 ದಿನಗಳು ಕಲಾಪಕ್ಕೆ ಲಭ್ಯವಿರಲಿದೆ. ಮುಂಬರುವ ವಿವಾದಾತ್ಮಕ ದೆಹಲಿ

(Delhi) ಸುಗ್ರೀವಾಜ್ಞೆ ಸೇರಿ 21 ಮಸೂದೆಗಳು ಮತ್ತು ಈಗಾಗಲೇ ಅನುಮೋದನೆಗೆ ಕಾಯುತ್ತಿರುವ 12 ಮಸೂದೆಗಳು ಸೇರಿದಂತೆ ಮೂವತ್ತೆರಡು ಮಸೂದೆಗಳನ್ನು

ಈ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು (From today Monsoon session) ನಿರೀಕ್ಷಿಸಲಾಗಿದೆ.

From today Monsoon session

ಈ ನಡುವೆ ಮಣಿಪುರದಲ್ಲಿ (Manipur) ಹಿಂಸಾಚಾರ ವಿಷಯವು ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ, ಈ ವಿಷಯದ ಬಗ್ಗೆ ಚರ್ಚಿಸಲು ಸಿದ್ಧ ಎಂದು ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದೆ.

ಇದೇ ವೇಳೆ ಟೊಮೇಟೊ(Tomato) ಸೇರಿದಂತೆ ವಿವಿಧ ಅಗತ್ಯ ವಸ್ತುಗಳ ಬೆಲೆಯೂ ಏರಿಕೆ ವಿಷಯ ಕೂಡ ಚರ್ಚೆಗೆ ಕಾರಣವಾಗಲಿದೆ.

ಮಹತ್ವದ ಮಸೂದೆ:
ಮುಂಗಾರು ಅಧಿವೇಶನದಲ್ಲಿ ದೆಹಲಿ ಸುಗ್ರೀವಾಜ್ಞೆಗೆ ಪರ್ಯಾಯವಾಗಿ ಮಸೂದೆ, ಡಿಜಿಟಲ್‌ (Digital) ವೈಯಕ್ತಿಕ ಮಾಹಿತಿ ರಕ್ಷಣಾ ಮಸೂದೆ, ಬಹುರಾಜ್ಯ ಸಹಕಾರ ಸಂಘಗಳ ಮಸೂದೆ,

ರಾಷ್ಟ್ರೀಯ ದಂತವೈದ್ಯ ಆಯೋಗ ಮಸೂದೆ, ಜೈವಿಕ ವೈವಿಧ್ಯತಾ ಮಸೂದೆ, ರಾಷ್ಟ್ರೀಯ ದಾದಿಯರ ಮಸೂದೆ, ಅರಣ್ಯ ಸಂರಕ್ಷಣಾ ತಿದ್ದುಪಡಿ ಮಸೂದೆ, ಜನ ವಿಶ್ವಾಸ್‌ ಮಸೂದೆ, ಮಧ್ಯಸ್ಥಿಕೆ ಮಸೂದೆ,

ಸಿನಿಮಟೋಗ್ರಾಫಿ (Cinematography) ತಿದ್ದುಪಡಿ ಮಸೂದೆ ಮೊದಲಾದವುಗಳನ್ನು ಮುಂಡಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

From today Monsoon session

ವಿಪಕ್ಷ ಪಕ್ಷಗಳು ಮುಗಿಬೀಳಲು ಸಿದ್ದವಾಗಿವೆ

ದೆಹಲಿಯಲ್ಲಿ ಸೇವಾ ಅಧಿಕಾರ ಕಾಪಾಡಲು ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆ, ಮಣಿಪುರ ಹಿಂಸಾಚಾರ, ವಿವಿಧ ರಾಜ್ಯಗಳಲ್ಲಿ ವಿಪಕ್ಷ ನಾಯಕರ ಮೇಲೆ ಕೇಂದ್ರ ತನಿಖಾ ಸಂಸ್ಥೆ ದಾಳಿ,

ಟೊಮೇಟೊ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ವಿವಿಧ ವಿಷಯಗಳ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಪ್ರತಿಪಕ್ಷಗಳು ಸಿದ್ಧತೆ ನಡೆಸಿವೆ. ಮತ್ತೊಂದೆಡೆ,

ಭಾರತೀಯ ಜನತಾ ಪಕ್ಷದ (BJP) ನೇತೃತ್ವದ ಎನ್‌ಡಿಎ (NDA) ಸರ್ಕಾರವು ಪುನರಾಗಮನಕ್ಕೆ ತಯಾರಿ ನಡೆಸುತ್ತಿದೆ. ಆದ್ದರಿಂದ ಮಾನ್ಸೂನ್ ಸಭೆಯು “NDA” ಒಕ್ಕೂಟ ಮತ್ತು ಹೊಸದಾಗಿ

ರಚನೆಯಾದ “I.N.D.I.A” ಒಕ್ಕೂಟದ ನಡುವಿನ ಮೊದಲ ಸದನದ ಕದನಕ್ಕೆ ವೇದಿಕೆಯಾಗುವ ಸಾಧ್ಯತೆಯಿದೆ.

ಕೇಂದ್ರ ಸರ್ಕಾರದಿಂದ 70 ರೂ. ಗೆ ಟೊಮ್ಯಾಟೋ ಮಾರಾಟ : ದರ ಇಳಿಕೆಗೆ ಕಸರತ್ತು

ಸರ್ವಪಕ್ಷ ಸಭೆ:
ಮುಂಬರುವ ಸಭೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಬುಧವಾರ ಸರ್ವಪಕ್ಷಗಳ ಸಭೆಯನ್ನು ಆಯೋಜಿಸಿದೆ. ಮಣಿಪುರ ರಾಜ್ಯದಲ್ಲಿ 100 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ

ಇತ್ತೀಚಿನ ಕೋಮು ಹಿಂಸಾಚಾರದ ಬಗ್ಗೆ ಅನೇಕ ವಿರೋಧ ಪಕ್ಷಗಳು ತೀವ್ರ ಕಳವಳ ವ್ಯಕ್ತಪಡಿಸಿದವು ಮತ್ತು ಚರ್ಚೆಯನ್ನು ವಿಸ್ತರಿಸಲು ಒತ್ತಾಯಿಸಿದವು. ಸರಕಾರವೂ ಸ್ಪಂದಿಸಿದ್ದು, ಸಂಸದೀಯ

ವ್ಯವಹಾರಗಳ ಸಚಿವ ಪ್ರಲ್ಲಾದ ಜೋಶಿ(Prahlad Joshi) ಚರ್ಚೆಗೆ ಸಮಯಾವಕಾಶ ನೀಡುವ ಭರವಸೆ ನೀಡಿದ್ದಾರೆ.

ಇಂದು “ಇಂಡಿಯಾ” ಮೈತ್ರಿಕೂಟದ ಮೊದಲ ಸಭೆ
ಮಂಗಳವಾರ ಬೆಂಗಳೂರಿನಲ್ಲಿ(Bengaluru) ನಡೆದ ಸಭೆಯಲ್ಲಿ, 26 ವಿರೋಧ ಪಕ್ಷಗಳು I.N.D.I.A (ಇಂಡಿಯಾ ನ್ಯಾಷನಲ್‌ ಡೆವಲಪ್‌ಮೆಂಟಲ್‌ ಇನ್‌ಕ್ಲೂಸಿವ್‌ ಅಲಯನ್ಸ್‌) ಎಂಬ ಒಕ್ಕೂಟವನ್ನು

ರಚಿಸಿದವು ಮತ್ತು ಗುರುವಾರ ದೆಹಲಿಯಲ್ಲಿ ತನ್ನ ಮೊದಲ ಸಭೆ ನಡೆಸಲಿವೆ.

ರಶ್ಮಿತಾ ಅನೀಶ್

Tags: monsoon sessionNarendra ModiNew Delhi

Related News

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.