• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಜಿ-20 ಶೃಂಗಸಭೆ : ಭದ್ರತೆಗೆ AI ಕ್ಯಾಮರಾ ; ಎಲ್ಲೆಡೆ ಸ್ನೈಪರ್ಸ್ ; ಭದ್ರಕೋಟೆಯಾದ ದೆಹಲಿ..!

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಜಿ-20 ಶೃಂಗಸಭೆ : ಭದ್ರತೆಗೆ AI ಕ್ಯಾಮರಾ ; ಎಲ್ಲೆಡೆ ಸ್ನೈಪರ್ಸ್ ; ಭದ್ರಕೋಟೆಯಾದ ದೆಹಲಿ..!
0
SHARES
134
VIEWS
Share on FacebookShare on Twitter

New Delhi: ಈ ಬಾರಿಯ ಜಿ-20 (G-20) ಒಕ್ಕೂಟದ ಅಧ್ಯಕ್ಷ ಸ್ಥಾನ ಹೊಂದಿರುವ ಭಾರತದಲ್ಲಿ ಸೆಪ್ಟೆಂಬರ್ (G20 Summit 2023 in Delhi) 9 ಮತ್ತು 10ರಂದು ಜಿ-20 ಶೃಂಗಸಭೆ

ನಡೆಯಲಿದ್ದು, ಈ ಸಭೆಗೆ ಅನೇಕ ದೇಶಗಳ ಅಧ್ಯಕ್ಷರ, ಪ್ರಧಾನಿಗಳು, ಸಚಿವರು ಸೇರಿದಂತೆ ಗಣ್ಯರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ನವದೆಹಲಿಯಲ್ಲಿ ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಈಗಾಗಲೇ ದೆಹಲಿ ಪೊಲೀಸರು, ಅರೆಸೈನಿಕ ಪಡೆಗಳು ಮತ್ತು ಇತರ ಭದ್ರತಾ ಸಂಸ್ಥೆಗಳು ದೆಹಲಿ (G20 Summit 2023 in Delhi) ನಗರದಾದ್ಯಂತ ಭಾರೀ ಭದ್ರತಾ ವ್ಯವಸ್ಥೆಗಳನ್ನು ಮಾಡಿವೆ.

G20 summit

ಭದ್ರತೆಯನ್ನು ಬಿಗಿಗೊಳಿಸುವ ದೃಷ್ಟಿಯಿಂದ ಇದೇ ಮೊದಲ ಬಾರಿಗೆ ನಗರದಲ್ಲಿ ನಡೆಯುವ ಎಲ್ಲ ಘಟನೆಗಳ ಮೇಲೆ ಕಣ್ಣಿಡಲು ಕೃತಕ ಬುದ್ದಿಮತ್ತೆಯನ್ನು ಬಳಸಿಕೊಳ್ಳಲಾಗುತ್ತಿದೆ. ಅದಕ್ಕಾಗಿಯೇ

ಕೃತಕ ಬುದ್ದಿಮತ್ತೆ ಆಧಾರಿತ ಕ್ಯಾಮರಾಗಳನ್ನು (Camera) ಎಲ್ಲೆಡೆ ಹಾಕಲಾಗಿದೆ. ಇದರಿಂದ ಸಾಫ್ಟ್ ವೇರ್ ಅಲಾರಂಗಳನ್ನು (Software Alarm) ಬಳಸಿಕೊಂಡು ಅನುಮಾನಾಸ್ಪದ ಚಟುವಟಿಕೆಗಳನ್ನು

ಗುರುತಿಸಿ ಫಿಲ್ಟರ್ (Filter) ಮಾಡಲು ಸಾಧ್ಯವಾಗುತ್ತದೆ. ಈ ಕೃತಕ ಬುದ್ದಿಮತ್ತೆ ಆಧಾರಿಯ ಕ್ಯಾಮರಾಗಳು, ಅನುಮಾನಾಸ್ಪದ ಚಲನೆಗಳನ್ನು ಮಾಡುವುದು ಕಂಡುಬಂದರೆ, ತಕ್ಷಣ ಭದ್ರತಾ

ಸಿಬ್ಬಂದಿಯನ್ನು ಎಚ್ಚರಿಸುತ್ತವೆ.

ಸ್ನೈಪರ್ (Sniper) ನಿಯೋಜನೆ :
ಜಿ-20 (G-20) ಶೃಂಗಸಭೆಗೆ ವಿಶ್ವದ ಪ್ರಮುಖ ಗಣ್ಯರು ಆಗಮಿಸುವ ಹಿನ್ನಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಗಣ್ಯರ ಭದ್ರತೆಗಾಗಿ ಗಣ್ಯರು ಸಂಚರಿಸುವ ಮಾರ್ಗಗಳಲ್ಲಿರುವ ಕಟ್ಟಡಗಳ ಮೇಲೆ

ಸ್ನೈಪರ್ಗಳನ್ನು ನಿಯೋಜನೆ ಮಾಡಲಾಗಿದೆ. ಹೆಚ್ಚುವರಿ ಭದ್ರತೆಗಾಗಿ ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ಜಿ) ಕಮಾಂಡೋಗಳು ಕೂಡಾ ನಿಯೋಜಿಸಲಾಗಿದೆ. ಇನ್ನು ಜಿ-20 ಶೃಂಗಸಭೆ ಕಾರ್ಯಕ್ರಮ

ಪ್ರಾರಂಭವಾಗುವ ಮೊದಲು, ಅಮೆರಿಕದ (America) CIA, ಇಂಗ್ಲೆಂಡ್ನ MI-6 ಮತ್ತು ಚೀನಾದ (China) MSS ಸೇರಿದಂತೆ ಅಂತರರಾಷ್ಟ್ರೀಯ ಗುಪ್ತಚರ ಸಂಸ್ಥೆಗಳ ತಂಡಗಳ ಜೊತೆಗೆ

ಭಾರತದ ಗುಪ್ತಚರ ಇಲಾಖೆ ಸಭೆ ನಡೆಸಿದ್ದು, ಭದ್ರತೆಯ ಕುರಿತು ಪರಿಶೀಲನೆ ನಡೆಸಲಾಗಿದೆ. ಗುಪ್ತಚರ ಸಹಕಾರದ ಮೂಲಕ ಉತ್ತಮ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗುತ್ತದೆ.

camera

ಇನ್ನು ಭಾರತೀಯ ವಾಯುಪಡೆ ದೆಹಲಿಯ ಮೇಲಿನ ಆಕಾಶದಲ್ಲಿ ನಿರಂತರವಾಗಿ ಗಸ್ತು ತಿರುಗಲಿದ್ದು, ಯಾವುದೇ ಸಂಭಾವ್ಯ ದಾಳಿಗಳನ್ನು ಎದುರಿಸಲು ಡ್ರೋನ್ (Drone) ವಿರೋಧಿ ವ್ಯವಸ್ಥೆಗಳನ್ನು

ನಿಯೋಜಿಸಲಾಗಿದೆ. ಸುಮಾರು 1000 ಭದ್ರತಾ ಸಿಬ್ಬಂದಿಯನ್ನು ಒಳಗೊಂಡ “ವಿಶೇಷ 50” ತಂಡವನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿದ್ಧಪಡಿಸಿದೆ. ಈ ತಂಡ ವಿದೇಶಿ

ಗಣ್ಯರಿಗೆ ಭದ್ರತೆ ನೀಡಲಿದೆ.

KSET 2023 ಪರೀಕ್ಷೆ ಕುರಿತು ಕೆಇಎ ಪ್ರಕಟಣೆ: ಇಲ್ಲಿದೆ ಪ್ರಮುಖ ಮಾಹಿತಿ

ವಿದೇಶಿ ಗಣ್ಯರ ವಾಸ್ತವ್ಯ ಎಲ್ಲೆ..?
ಐಟಿಸಿ (ITC) ಮೌರ್ಯ ಹೋಟೆಲ್ನಲ್ಲಿ ಅಮೇರಿಕಾದ ಅಧ್ಯಕ್ಷ ಜೋ ಬೈಡನ್ (Joe Biden) ತಂಗಲಿದ್ದಾರೆ. ಈಗಾಗಲೇ 400 ರೂಮ್ಗಳನ್ನು ಬುಕ್ ಮಾಡಲಾಗಿದೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್

ಮ್ಯಾಕ್ರೋನ್ (Emmanuel Macron) ಕ್ಲಾರಿಡ್ಜ್ ಹೋಟೆಲ್ನಲ್ಲಿ, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ (Xi Jinping) ತಾಜ್ ಪ್ಯಾಲೇಸ್ ಹೋಟೆಲ್ನಲ್ಲಿ ತಂಗಿದರೆ, ಬ್ರಿಟನ್ ಪ್ರಧಾನಿ ರಿಷಿ ಸುನಕ್ (Rishi Sunak)

ಶಾಂಗ್ರಿ-ಲಾ ಹೋಟೆಲ್ನಲ್ಲಿ ತಂಗಲಿದ್ದಾರೆ. ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಇಂಪೀರಿಯಲ್ ಹೋಟೆಲ್ನಲ್ಲಿ ತಂಗಲಿದ್ದಾರೆ. ಇಟಲಿ (Italy) ಮತ್ತು ಸಿಂಗಾಪುರದ (Singapura)

ಪ್ರತಿನಿಧಿಗಳು ಹಯಾತ್ ರೆಸಿಡೆನ್ಸಿಯಲ್ಲಿ ತಂಗಲಿದ್ದಾರೆ. ಹೀಗೆ ದೆಹಲಿಯ ವಿವಿಧ ಹೊಟೇಲ್ಗಳಲ್ಲಿ ವಿದೇಶಿ ಗಣ್ಯರಿಗೆ ವಾಸ್ತವ್ಯ ವ್ಯವಸ್ಥೆ ಕಲ್ಪಿಸಲಾಗಿದೆ.

Tags: americacameraChinaG20G20 summititaliNewdelhipoliticssecurity

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.