• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಮತ್ತೆ ಕಸದ ಸಂಕಷ್ಟ : ಕಸ ಸಂಗ್ರಹ ನಿಲ್ಲಿಸಿ ಸರ್ಕಾರದ ವಿರುದ್ಧ ಆಟೋ, ಲಾರಿ ಚಾಲಕರ ಧರಣಿ

Shwetha Mohan by Shwetha Mohan
in ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌
ಬೆಂಗಳೂರಿನಲ್ಲಿ ಮತ್ತೆ ಕಸದ ಸಂಕಷ್ಟ : ಕಸ ಸಂಗ್ರಹ ನಿಲ್ಲಿಸಿ ಸರ್ಕಾರದ ವಿರುದ್ಧ ಆಟೋ, ಲಾರಿ ಚಾಲಕರ ಧರಣಿ
0
SHARES
13
VIEWS
Share on FacebookShare on Twitter
  • ಮತ್ತೆ ಮುನ್ನಲೆಗೆ ಬಂದ ಕಸದ ಸಮಸ್ಯೆ
  • ಕಾಯಂ ಉದ್ಯೋಗ, ನೇರ ವೇತನ ನೀಡುವಂತೆ ಸರ್ಕಾರದ ವಿರುದ್ಧ ಸ್ಟ್ರೈಕ್
  • ಫ್ರೀಡಂ ಪಾರ್ಕ್‌ ನಲ್ಲಿ ಅನುಮತಿ ನೀಡದ ಕಾರಣ ಗಾಂಧಿನಗರದಲ್ಲಿ ತೀವ್ರ ಪ್ರತಿಭಟನೆ (Garbage problem in Bengaluru)

Bengaluru: ಬೆಂಗಳೂರು ನಗರವು ಮತ್ತೊಮ್ಮೆ ಕಸದ ಸಂಕಷ್ಟ ಎದುರಿಸುವ ಪರಿಸ್ಥಿತಿಯಲ್ಲಿದೆ. ಗಾಂಧಿನಗರ(Gandhinagar) ವಿಧಾನಸಭಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ

ಕಸದ ಆಟೋ ಮತ್ತು ಲಾರಿ ಚಾಲಕರು ಆಕಸ್ಮಿಕವಾಗಿ ಪ್ರತಿಭಟನೆಗೆ ಇಳಿದಿದ್ದು, ಕಸ ಸಂಗ್ರಹ ಕಾರ್ಯವನ್ನು ಸಂಪೂರ್ಣ ನಿಲ್ಲಿಸಿದ್ದಾರೆ.

ಇದರಿಂದ ನಗರದ ಹಲವು ಭಾಗಗಳಲ್ಲಿ ಈಗಾಗಲೇ ಕಸದ ದಿಬ್ಬಗಳು ಜಮಾಯಿಸುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ. ಇನ್ನು ಈ ಪ್ರತಿಭಟನೆಯ ಮೂಲ ಕಾರಣವೇ

ಚಾಲಕರು ಮತ್ತು ಕಾರ್ಮಿಕರ ಕಾಯಂ ಉದ್ಯೋಗ(Permanent employment) ಹಾಗೂ ನೇರ ವೇತನದ ಬೇಡಿಕೆ. ಸುಮಾರು 5,300 ಆಟೋ ಟಿಪ್ಪರ್‌ಗಳು ಮತ್ತು 700 ಲಾರಿಗಳು

ನಗರದಲ್ಲಿ ಪ್ರತಿದಿನ ಕಸ ಸಂಗ್ರಹಣೆ(Garbage collection) ನಡೆಸುತ್ತಿವೆ. ಇವುಗಳ ಚಾಲಕರು ಹಾಗೂ ಸಿಬ್ಬಂದಿ ಕಳೆದ ಹಲವು ವರ್ಷಗಳಿಂದಲೇ ಕಾಂಟ್ರಾಕ್ಟ್ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಅನೇಕ ಬಾರಿ ಸರ್ಕಾರದ ಮುಂದಾಳತ್ವದಲ್ಲಿ ಮಾತುಕತೆ ನಡೆದಿದ್ದರೂ, ಭರವಸೆಗಳಷ್ಟೇ ದೊರೆತು ಫಲಿತಾಂಶ ಕೈಗೂಡಿಲ್ಲ.

ಅಲ್ಲದೆ 2025ರ ಮೇ ತಿಂಗಳಲ್ಲಿ ಕಾರ್ಮಿಕ ದಿನಾಚರಣೆಯ ಸಂದರ್ಭದಲ್ಲಿ, ಸರ್ಕಾರವು ಚಾಲಕರಿಗೆ ಮತ್ತು ಕಾರ್ಮಿಕರಿಗೆ ಕಾಯಂ ಉದ್ಯೋಗ ನೀಡುವ ಭರವಸೆ ನೀಡಿತ್ತು.

Garbage problem  in Bengaluru
ಆದರೆ, ಅದರ ಅನುಷ್ಠಾನವಾಗದೆ ಉಳಿದಿರುವುದರಿಂದ, ಜೊತೆಗೆ ವೇತನ ವಿತರಣೆಯಲ್ಲಿಯೂ ವಿಳಂಬ ಕಂಡುಬಂದಿರುವುದರಿಂದ, ಕಾರ್ಮಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಪ್ರತಿಭಟನೆ ನಡೆಸಲು ಫ್ರೀಡಂ ಪಾರ್ಕ್‌ನಲ್ಲಿ(Freedom Park) ಅನುಮತಿ ನೀಡದಿರುವುದು ಚಾಲಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿತು.

ಈ ಹಿನ್ನೆಲೆಯಲ್ಲಿ ಗಾಂಧಿನಗರದ ಮುಖ್ಯರಸ್ತೆಗಳಲ್ಲಿ ಆಟೋ ಮತ್ತು ಲಾರಿಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ಪ್ರತಿಭಟನೆ ನಡೆಸಿದ ಕಾರಣ ಸಂಚಾರ ವ್ಯವಸ್ಥೆಗೆ ಗೊಂದಲ ಉಂಟಾಯಿತು.

ಪೊಲೀಸರು ತಕ್ಷಣವೇ ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಿಎಂಟಿಸಿ ಬಸ್‌ಗಳಲ್ಲಿ ಕರೆದೊಯ್ದರು.

ಆದರೆ ಬಿಬಿಎಂಪಿ(BBMP) ಕಾರ್ಮಿಕರು ಸರ್ಕಾರವು ಭರವಸೆ ಈಡೇರಿಸುವವರೆಗೆ ನಾವು ಕೆಲಸಕ್ಕೆ ಹಿಂತಿರುಗುವುದಿಲ್ಲ ಎಂದು ಘೋಷಿಸಿದ್ದಾರೆ.

ಪ್ರತಿಭಟನೆಗೆ ಜಾಗ ಕೊಡದೇ ಸರ್ಕಾರ ದೌರ್ಜನ್ಯ ಮಾಡುತ್ತಿದೆ ಎಂಬ ಆರೋಪವೂ ಪ್ರತಿಭಟನೆಯಲ್ಲಿ ಕೇಳಿಬಂದಿದೆ. ಇನ್ನು ಈ ಪ್ರತಿಭಟನೆಯ ಪರಿಣಾಮವಾಗಿ ನಗರದ ಹಲವೆಡೆ ಕಸ ಎಸೆಯದಿದ್ದರೂ ಜಮಾಯಿಸುತ್ತಿದ್ದು,

ಸಾರ್ವಜನಿಕರಲ್ಲಿ ಆರೋಗ್ಯ ಸಂಬಂಧಿ ಭೀತಿ ಉಂಟಾಗಿದೆ. ಈಗಾಗಲೇ ಮಳೆಗಾಲ ಪ್ರಾರಂಭವಾಗಿರುವುದರಿಂದ, ಕಸದ ಸರಿಯಾದ ನಿರ್ವಹಣೆ ನಡೆಯದಿದ್ದರೆ ರೋಗ ವ್ಯಾಪಕವಾಗುವ ಆತಂಕ ವ್ಯಕ್ತವಾಗಿದೆ.

ಈ ಪ್ರತಿಭಟನೆ ಹೊಸದಲ್ಲ. 2025ರ ಮಾರ್ಚ್ ತಿಂಗಳಲ್ಲೇ ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‌ಮೆಂಟ್ ಲಿಮಿಟೆಡ್ (BSWML) ಕಾರ್ಮಿಕರು ಇದೇ ರೀತಿಯ ಬೇಡಿಕೆಗಳಿಗಾಗಿ ಧರಣಿ ನಡೆಸಿದ್ದರು.

ಆಗ IPD ಸಲಪ್ಪಾ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಲಾಗಿತ್ತು. ವಿಶೇಷವಾಗಿ ಕಾಂಟ್ರಾಕ್ಟ್ ವ್ಯವಸ್ಥೆಯನ್ನು ರದ್ದುಪಡಿಸಿ, ನೇರವಾಗಿ ಸರ್ಕಾರದಿಂದಲೇ ಉದ್ಯೋಗ ಮತ್ತು ವೇತನ

ನೀಡಬೇಕೆಂಬುದು ಕಾರ್ಮಿಕರ ಪ್ರಮುಖ ಬೇಡಿಕೆಯಾಗಿದೆ.ಆಗಲೂ ಸುಮಾರು 5,000 ಕಾರ್ಮಿಕರು ಬಿಬಿಎಂಪಿ ಕಚೇರಿಯ ಮುಂದೆ ಕೂತು ಪ್ರತಿಭಟನೆ ನಡೆಸಿದ್ದರು. ಆದಾಗ ಸರ್ಕಾರದಿಂದ ಮಾತುಕತೆ ನಡೆದರೂ,

ಇದನ್ನು ಓದಿ :  ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವದನ್ನು ತಡೆಯಲು ಮುಂದಾದ ಜಿಬಿಎ : ಭಾರಿ ದಂಡ ವಿಧಿಸಲು ಪ್ಲಾನ್

ಇಂದಿಗೂ ಆ ಬೇಡಿಕೆಗಳಿಗೆ ಸ್ಪಂದನೆ ದೊರೆತಿಲ್ಲ. ಹಾಗಾಗಿ ಮತ್ತೊಮ್ಮೆ ಪ್ರತಿಭಟನೆ ಮಾಡುವ ಮೂಲಕ ತಮ್ಮ ಬೇಡಿಕೆಗಳಿಗೆ ಸ್ಪಂದಿಸುವಂತೆ ಕಾರ್ಮಿಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. (Garbage problem in Bengaluru)

Tags: BBMPbengalurufreedom parkGandhinagarGarbage problemPermanent employment

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.