• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಸೆಲ್ ಮಾರುಕಟ್ಟೆಗೆ ಸ್ಮಾರ್ಟ್ ಲುಕ್ : ಆಧುನಿಕ ಸೌಲಭ್ಯಗಳೊಂದಿಗೆ ಹೊಸ ರೂಪ ನೀಡಲು ಮುಂದಾದ GBA

Teju Srinivas by Teju Srinivas
in ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ರಸೆಲ್ ಮಾರುಕಟ್ಟೆಗೆ ಸ್ಮಾರ್ಟ್ ಲುಕ್ : ಆಧುನಿಕ ಸೌಲಭ್ಯಗಳೊಂದಿಗೆ ಹೊಸ ರೂಪ ನೀಡಲು ಮುಂದಾದ GBA
0
SHARES
22
VIEWS
Share on FacebookShare on Twitter
  • ಐತಿಹಾಸಿಕ ರಸೆಲ್ ಮಾರುಕಟ್ಟೆ (gba gives smart look to market) ಪುನರ್ ಅಭಿವೃದ್ಧಿ
  • ಪರಂಪರೆ ಉಳಿಸಿಕೊಂಡೇ ಆಧುನಿಕ ಪುನರ್ ಅಭಿವೃದ್ಧಿಗೆ ಜಿಬಿಎ ಚಾಲನೆ
  • ಒಳಚರಂಡಿ, ಪಾರ್ಕಿಂಗ್, ಅಗ್ನಿ ಸುರಕ್ಷತೆ ಸೇರಿದಂತೆ ಮೂಲಸೌಕರ್ಯ ಬಲಪಡಿಸಲು ಡಿಪಿಆರ್ ಸಿದ್ಧ

Bengaluru: ಬೆಂಗಳೂರು ನಗರದ ಹೃದಯಭಾಗವಾದ ಶಿವಾಜಿನಗರ ವಿಧಾನಸಭಾ ಕ್ಷೇತ್ರದ (gba gives smart look to market) ವ್ಯಾಪ್ತಿಯಲ್ಲಿ ಇರುವ ರಸೆಲ್ ಮಾರುಕಟ್ಟೆ, ಇತಿಹಾಸ ಮತ್ತು ವ್ಯಾಪಾರದ ಸಂಗಮವಾಗಿರುವ ಪ್ರಮುಖ ಕೇಂದ್ರವಾಗಿದೆ.

ಈ ಶತಮಾನಗಳ ಹಳೆಯ ಮಾರುಕಟ್ಟೆಯನ್ನು ಪರಂಪರೆಯ ಸೊಗಡನ್ನು ಕಾಪಾಡಿಕೊಂಡೇ ಆಧುನಿಕ ಸೌಲಭ್ಯಗಳೊಂದಿಗೆ ಪುನರ್ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಮಹತ್ವದ ಹೆಜ್ಜೆ ಇಟ್ಟಿದೆ.

ನಗರದಲ್ಲಿ ಜನಸ್ನೇಹಿ, ದೀರ್ಘಕಾಲಿಕ ಮತ್ತು ಸುಸಜ್ಜಿತ ಮಾರುಕಟ್ಟೆಯಾಗಿ ರೂಪಿಸುವ ಗುರಿಯೊಂದಿಗೆ ಯೋಜನೆ ರೂಪಿಸಲಾಗಿದೆ.

gba gives smart look to market

ಈ ಪುನರ್ ಅಭಿವೃದ್ಧಿಯಿಂದ ವ್ಯಾಪಾರಿಗಳು, ಗ್ರಾಹಕರು ಹಾಗೂ ಸ್ಥಳೀಯ ನಿವಾಸಿಗಳಿಗೆ ಹೆಚ್ಚಿನ ಅನುಕೂಲ ದೊರಕಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಇತ್ತೀಚೆಗೆ ಶಿವಾಜಿನಗರ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ಸ್ಥಳ ಪರಿಶೀಲನೆ (gba gives smart look to market) ನಡೆಸಿದ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ (Maheshwar Rao) ಅವರು, ರಸೆಲ್ ಮಾರುಕಟ್ಟೆ ಪುನರ್ ಅಭಿವೃದ್ಧಿಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಈಗಾಗಲೇ ಮಾರುಕಟ್ಟೆ ಅಭಿವೃದ್ಧಿಗೆ ಸಂಬಂಧಿಸಿದ ವಿವರವಾದ ಯೋಜನಾ ವರದಿ (DPR) ಸಿದ್ಧಗೊಂಡಿದ್ದು, ಅದರ ಆಧಾರದಲ್ಲಿ ಕೂಡಲೇ ಟೆಂಡರ್ (Tender) ಪ್ರಕ್ರಿಯೆ ಆರಂಭಿಸಬೇಕೆಂದು ಅವರು ನಿರ್ದೇಶಿಸಿದರು.

ಯೋಜನೆಯ ಅನುಷ್ಠಾನ ವಿಳಂಬವಾಗದಂತೆ ಎಲ್ಲಾ ಹಂತಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಈ ಯೋಜನೆಯು ಬೆಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ಪ್ರಮುಖ ಮೈಲಿಗಲ್ಲಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ರಸೆಲ್ ಮಾರುಕಟ್ಟೆ ಕೇವಲ ವ್ಯಾಪಾರ ಕೇಂದ್ರವಲ್ಲ, ಅದು ಬೆಂಗಳೂರಿನ ಐತಿಹಾಸಿಕ ಗುರುತುಗಳಲ್ಲಿ ಒಂದಾಗಿದೆ.

ಹೀಗಾಗಿ ಪುನರ್ ಅಭಿವೃದ್ಧಿ ಕಾರ್ಯದಲ್ಲಿ ಮಾರುಕಟ್ಟೆಯ ಮೂಲ ವಾಸ್ತುಶಿಲ್ಪ, ಪರಂಪರೆಯ ವಿನ್ಯಾಸ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಹಾನಿಗೊಳಿಸದಂತೆ ವಿಶೇಷ ಗಮನ ಹರಿಸುವಂತೆ ಸೂಚಿಸಲಾಗಿದೆ.

ಹಳೆಯ ಕಟ್ಟಡದ ವೈಶಿಷ್ಟ್ಯತೆ ಉಳಿಸಿಕೊಂಡೇ, ಹೊಸ ತಂತ್ರಜ್ಞಾನ ಮತ್ತು ಆಧುನಿಕ ಸೌಲಭ್ಯಗಳನ್ನು ಅಳವಡಿಸುವ ಮೂಲಕ ಮಾರುಕಟ್ಟೆಗೆ ಹೊಸ ರೂಪ ನೀಡುವ ಯೋಜನೆ ರೂಪಿಸಲಾಗಿದೆ.

ಇದರಿಂದ ಹಳೆಯ ಸೊಗಡಿನೊಂದಿಗೆ ಹೊಸ ತಲೆಮಾರಿಗೂ ಆಕರ್ಷಕವಾಗುವ ಮಾರುಕಟ್ಟೆ ಸೃಷ್ಟಿಯಾಗಲಿದೆ.

ಪುನರ್ ಅಭಿವೃದ್ಧಿ ಕಾಮಗಾರಿಯ ವೇಳೆ ವ್ಯಾಪಾರಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗಬಾರದು ಎಂಬುದು ಜಿಬಿಎಯ ಪ್ರಮುಖ ಆದ್ಯತೆಯಾಗಿದೆ. ಕಾಮಗಾರಿ ಆರಂಭಿಸುವ ಮುನ್ನವೇ ವ್ಯಾಪಾರಿಗಳಿಗೆ ತಾತ್ಕಾಲಿಕ ವ್ಯವಸ್ಥೆಗಳನ್ನು ಕಲ್ಪಿಸಿ, ಅವರ ವ್ಯಾಪಾರ ಚಟುವಟಿಕೆ ನಿರಂತರವಾಗಿ ನಡೆಯುವಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಜೊತೆಗೆ ಮಾರುಕಟ್ಟೆಯೊಳಗಿನ ಒಳಚರಂಡಿ ವ್ಯವಸ್ಥೆ, ಮಳೆ ನೀರು ಸರಾಗವಾಗಿ ಹರಿಯುವ ವ್ಯವಸ್ಥೆ, ವಾಹನ ನಿಲುಗಡೆ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಸೂಕ್ತ ತಾಂತ್ರಿಕ ಪರಿಹಾರಗಳನ್ನು ಅಳವಡಿಸುವಂತೆ ಸೂಚನೆ ನೀಡಲಾಗಿದೆ.

ಅಗ್ನಿ ಸುರಕ್ಷತಾ ವ್ಯವಸ್ಥೆ, ಸ್ವಚ್ಛ ಶೌಚಾಲಯಗಳು, ಪಾದಚಾರಿಗಳಿಗೆ ಅನುಕೂಲಕರವಾದ ಗ್ರಾನೈಟ್ ನೆಲಹಾಸು ಸೇರಿದಂತೆ ಎಲ್ಲಾ ಮೂಲಸೌಕರ್ಯ ಕಾಮಗಾರಿಗಳನ್ನು ಉನ್ನತ ಗುಣಮಟ್ಟದಲ್ಲಿ ನಿರ್ವಹಿಸಬೇಕೆಂದು ತಿಳಿಸಲಾಗಿದೆ.

ಇದೇ ವೇಳೆ, ಮಾರುಕಟ್ಟೆಯನ್ನು ಸದಾ ಸ್ವಚ್ಛವಾಗಿರಿಸಲು ಕಸ ವಿಂಗಡಣೆ ಮತ್ತು ಕಾಂಪೋಸ್ಟಿಂಗ್ ವ್ಯವಸ್ಥೆಯನ್ನು ಸಮಗ್ರವಾಗಿ ಅಳವಡಿಸುವ ಯೋಜನೆಯೂ ಸೇರಿದೆ.

ಗಡಿಯಾರ ಗೋಪುರದ ವಿನ್ಯಾಸ ಸೇರಿದಂತೆ ಮಾರುಕಟ್ಟೆಯ ಸೌಂದರ್ಯವರ್ಧನೆಗೆ ವಿಶೇಷ ಒತ್ತು ನೀಡಲಾಗುತ್ತಿದೆ. ರಸೆಲ್ ಮಾರುಕಟ್ಟೆ ಸುತ್ತಮುತ್ತಲ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಅಲ್ಲದೆ, ಮಾರುಕಟ್ಟೆ ಮತ್ತು ಅದರ ಸುತ್ತಲಿನ ಆಸ್ತಿ ತೆರಿಗೆ ಮರುಪರಿಶೀಲನೆ ನಡೆಸಿ, ತೆರಿಗೆ ಸಂಗ್ರಹ ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಈ ಪರಿಶೀಲನಾ ಸಂದರ್ಭದಲ್ಲಿ ಜಿಬಿಎಯ ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಎಂಜಿನಿಯರ್‌ಗಳು ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ತಮ್ಮ ಸಹಕಾರ ನೀಡಿದರು.

ಇದನ್ನು ಓದಿ : https://vijayatimes.com/trade-agreement-between-india-oman/

Related News

ಇನ್ಮುಂದೆ ದಿನದ 24 ಗಂಟೆಯೂ ಅಂಚೆ ಕಚೇರಿ ಸೇವೆ: ಕೆಲ ಆಯ್ದ ಶಾಖೆಗಳಲ್ಲಿ ಮಾತ್ರವೇ ಈ ಸೇವೆ ಲಭ್ಯ
ದೇಶ-ವಿದೇಶ

ಇನ್ಮುಂದೆ ದಿನದ 24 ಗಂಟೆಯೂ ಅಂಚೆ ಕಚೇರಿ ಸೇವೆ: ಕೆಲ ಆಯ್ದ ಶಾಖೆಗಳಲ್ಲಿ ಮಾತ್ರವೇ ಈ ಸೇವೆ ಲಭ್ಯ

January 24, 2026
ಇನ್ಮುಂದೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರಿಗೆ ಲ್ಯಾಪ್‌ಟಾಪ್‌ ಬದಲು ನಗದು ಬಹುಮಾನ
ಪ್ರಮುಖ ಸುದ್ದಿ

ಇನ್ಮುಂದೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರಿಗೆ ಲ್ಯಾಪ್‌ಟಾಪ್‌ ಬದಲು ನಗದು ಬಹುಮಾನ

January 24, 2026
ಬಳ್ಳಾರಿ ಮಾಡೆಲ್ ಹೌಸ್ ಬೆಂಕಿ ಪ್ರಕರಣ: ಎಂಟು ಮಂದಿಯ ವಶ, ತನಿಖೆ ತೀವ್ರ
ಪ್ರಮುಖ ಸುದ್ದಿ

ಬಳ್ಳಾರಿ ಮಾಡೆಲ್ ಹೌಸ್ ಬೆಂಕಿ ಪ್ರಕರಣ: ಎಂಟು ಮಂದಿಯ ವಶ, ತನಿಖೆ ತೀವ್ರ

January 24, 2026
ಜ.24ರಿಂದ ನಾಲ್ಕು ದಿನ ಬ್ಯಾಂಕ್ ಶಾಖೆಗಳು ಬಂದ್: ಡಿಜಿಟಲ್ ಸೇವೆಗಳು ಮಾತ್ರ ಲಭ್ಯ
ದೇಶ-ವಿದೇಶ

ಜ.24ರಿಂದ ನಾಲ್ಕು ದಿನ ಬ್ಯಾಂಕ್ ಶಾಖೆಗಳು ಬಂದ್: ಡಿಜಿಟಲ್ ಸೇವೆಗಳು ಮಾತ್ರ ಲಭ್ಯ

January 23, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.