• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

`ಸಾಲ್ಟ್’ ರುಚಿ ನೋಡಲು ಸಿದ್ಧರಾಗಿ!

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ
`ಸಾಲ್ಟ್’ ರುಚಿ ನೋಡಲು ಸಿದ್ಧರಾಗಿ!
0
SHARES
0
VIEWS
Share on FacebookShare on Twitter

`ಸಾಲ್ಟ್’ ಎನ್ನುವುದು ಹೊಸಬರ ತಂಡದ ಹೊಸ ಸಿನಿಮಾ. ಇತ್ತೀಚೆಗೆ ಸಿನಿಮಾದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಚಿತ್ರ ನೋಡಿದ ನಾದಬ್ರಹ್ಮ ಹಂಸಲೇಖಾ ಅವರು ಚಿತ್ರವನ್ನು ಅಪಾರವಾಗಿ ಮೆಚ್ಚಿದ್ದು ಇದು ಪೈಸಾ ವಸೂಲ್ ಆಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಚಿತ್ರದ ನಿರ್ದೇಶಕ ಭರತ್ ನಂದ ಮಾಧ್ಯಮದವರ ಜೊತೆಗೆ ಮಾತನಾಡಿ, ಚಿತ್ರ ತಂಡದ ಪ್ರತಿಯೊಬ್ಬರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಚಿತ್ರದಲ್ಲಿ ಬಲ ರಾಜ್ ವಾಡಿಯವರು ಒಂದು ಪ್ರಧಾನ ಪಾತ್ರ ಮಾಡುತ್ತಿದ್ದು ಅವರು ತಮ್ಮದು ಹೊಸಬರ ತಮಡವಾದರೂ ನಿಗದಿತ ಸಮಯಕ್ಕಿಂತ ಮೊದಲೇ ಬಂದು ಚಿತ್ರೀಕರಣದ ಸೆಟ್‌ನಲ್ಲಿ ಇರುತ್ತಿದ್ದರು ಎಂದು ಪ್ರಶಂಸಿಸಿದರು. ಬಳಿಕ ಮಾತನಾಡಿದ ಬಲ ರಾಜ್ ವಾಡಿಯವರು “ಸಿನಿಮಾ ಅಚ್ಚುಕಟ್ಟಾಗಿ ಮಾಡಿದ್ದಾರೆ. ಸ್ವೀಟಿ ಎನ್ನುವ ಚಿತ್ರದ ನಾಯಕಿಯ ಪಾತ್ರಕ್ಕೆ ನಾನು ತಂದೆಯಾಗಿ ನಟಿಸಿದ್ದೇನೆ” ಎಂದರು. ಚಿತ್ರದ ನಾಲ್ಕು ಪ್ರಧಾನ ಪಾತ್ರಗಳಲ್ಲಿ ಒಂದನ್ನು ಸ್ವತಃ ನಿರ್ದೇಶಕ ಭರತ್ ನಂದ ಅಭಿನಯಿಸಿದ್ದಾರೆ. ಅಕುಲ್ ಶೆಟ್ಟಿ ಎನ್ನುವ ಮತ್ತೊಂದು ಪಾತ್ರವನ್ನು ನವನಟ ಚಂದು ಛತ್ರಪತಿ ನಿಭಾಯಿಸಿದ್ದಾರೆ. ಬಾಣಸವಾಡಿ ಚೇತನ್, ಸಹನಿರ್ದೇಶಕ ರವೀಂದ್ರ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಮಾತನಾಡಿದರು.

ಸದ್ಯದಲ್ಲೇ ತೆರೆಗೆ ಬರಲಿರುವ ಈ ಚಿತ್ರದ ತಾರಾಗಣದಲ್ಲಿ ಸಂದೀಪ್, ವಿಜಯಶ್ರೀ ಕಲಬುರ್ಗಿ, ಯಶಸ್ವಿನಿ ಶೆಟ್ಟಿ, ರಶ್ಮಿತಾ ಗೌಡ, ಚಕ್ರವರ್ತಿ ದಾವಣಗೆರೆ, ಹರ್ಷ ಮೊದಲಾದವರು ಬಣ್ಣ ಹಚ್ಚಿದ್ದಾರೆ. ರಾಘವೇಂದ್ರ ಕಾಮತ್ ಸಾಹಿತ್ಯದ ನಾಲ್ಕು ಹಾಡುಗಳಿಗೆ ಎಲ್‌ಸ್ಟಿನ್-ಯದುನಂದನ್ ಜಂಟಿಯಾಗಿ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಸಂತೋಷ್‌ದಯಾಳನ್, ಸಂಕಲನ ವಿನಯ್‌ ಕುಮಾರ, ನೃತ್ಯ ಮಧುಸೂದನ್, ಸಂಭಾಷಣೆ ಸತೀಶ್‌ ಮಳವಳ್ಳಿ ಅವರದ್ದಾಗಿದೆ. ಬೆಂಗಳೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗಿದೆ. ಶಾಲಿನಿ ಎಂ ಅವರು ರಾಜರತ್ನ ಸ್ಟುಡಿಯೋ ಮೂಲಕ `ಸಾಲ್ಟ್’ ನಿರ್ಮಿಸಿದ್ದಾರೆ.

Related News

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 5, 2023
ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ
Sports

ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ

June 5, 2023
ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
ದೇಶ-ವಿದೇಶ

ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

June 5, 2023
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..
ಆರೋಗ್ಯ

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.