ಡಬಲ್ ಇಂಜಿನ್‌ ಸರ್ಕಾರ ಬಂದರೆ ಮಾತ್ರ ಕರ್ನಾಟಕ ಅಭಿವೃದ್ಧಿಯಾಗುತ್ತದೆ ಎಂದ ಗೋವಾ ಸಿಎಂ ಪ್ರಮೋದ್ ಸಾವಂತ್.

Mandya: ಕರ್ನಾಟಕದಲ್ಲಿ (Karnataka) ಈಗಾಗಲೇ ಸೂಪರ್ ಸಿಎಂ, ಶಾಡೋ ಸಿಎಂ ರೀತಿ ಐದೈದು ಜನ ಸಿಎಂಗಳಿದ್ದಾರೆ.ಆದರೆ ರಾಜ್ಯದಲ್ಲಿ ಅಭಿವೃದ್ಧಿ ಮಾತ್ರ ಸ್ಥಗಿತಗೊಂಡಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ (Pramod Savanth) ಗುರುವಾರ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಜೆಡಿಎಸ್-ಬಿಜೆಪಿ ಬಹಿರಂಗ ಸಮಾವೇಶ ಉದ್ಘಾಟಿಸಿ ಮಾತನಾಡಿ, ಗೋವಾದಲ್ಲೂ ಡಬಲ್ ಇಂಜಿನ್ (Dubble Engine) ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಅಭಿವೃದ್ಧಿಯಾಗಿದೆ.

ಮುಂದಿನ ದಿನಗಳಲ್ಲಿ ಇಲ್ಲಿಯೂ ಸಹ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಾತ್ರ ಅಭಿವೃದ್ದಿ ಕಾರ್ಯಗಳು ನಡೆಯುತ್ತವೆ ಎಂದಿದ್ದಾರೆ. ಇನ್ನು ಈಗಿರುವ ಕಾಂಗ್ರೆಸ್ ಸರ್ಕಾರ ಜಾತಿ ಧರ್ಮ ದ ಆಧಾರದ ಮೇಲೆ ರಾಜಕಾರಣ ಮಾಡಿದರೆ, ಬಿಜೆಪಿ ವಿಕಾಸದ ಮೇಲೆ ರಾಜಕಾರಣ ಮಾಡುತ್ತಿದೆ. ರಾಜ್ಯದ ಕಾಂಗ್ರೆಸ್ (Congress) ಸರ್ಕಾರ ಭ್ರಷ್ಟ ಸರ್ಕಾರವಾಗಿದೆ ಎಂದ ಅವರು, ನಾರಿ ಶಕ್ತಿ, ಯುವ ಶಕ್ತಿ, ಕಿಸಾನ್ ಶಕ್ತಿ ಮತ್ತು ಗರೀಬ್ ಕಲ್ಯಾಣ್ ಎಂಬ ನಾಲ್ಕು ಸ್ಥಂಭಗಳ ಸರ್ಕಾರ ಮುನ್ನಡೆಯಲು ಜನರು ಬೆಂಬಲ ನೀಡಬೇಕು ಎಂದು ಕೋರಿದ್ದಾರೆ.

ಬಿಜೆಪಿ -ಜೆಡಿಎಸ್ (BJP-JDS) ಮೈತ್ರಿ ವಿಧಾನಸಭಾ ಚುನಾವಣೆಗೆ ಮುಂಚೆ ಆಗಿದ್ದಿದ್ದರೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುತ್ತಿದ್ದರು. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ರಚನೆಯಾಗುತ್ತಿತ್ತುಕರ್ನಾಟಕ ಉತ್ತಮ ಬೆಳವಣಿಗೆ ಹೊಂದುತ್ತಿತ್ತು ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಕಳೆದ ಐವತ್ತು ವರ್ಷ ಮಾಡದೇ ಇರುವ ಕೆಲಸವನ್ನು ಮೋದಿ ಸರ್ಕಾರ (Modi Government) ಹತ್ತು ವರ್ಷಗಳಲ್ಲಿ ಮಾಡಿದೆ. ಈ ಬಗ್ಗೆ ಯಾರೂ ಕೂಡ ಮಾತನಾಡುವುದಿಲ್ಲ ಈ ವಿಷಯವಾಗಿ ರಾಹುಲ್ ಗಾಂಧಿ ಅವರು ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬೇಕಾದರೂ ಬರಲಿ ನಾನು ಉದಾಹರಣೆ ಸಹಿತ ಉತ್ತರಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಒಂದು ವೇಳೆ ಕರ್ನಾಟಕದ 28 ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದೇ ಆದರೆ ದೇಶಾದ್ಯಂತ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ (NDA) ಮೈತ್ರಿಕೂಟ ಜಯಗಳಿಸಲಿದೆ. ಕುಮಾರಸ್ವಾಮಿ (Kumaraswamy) ಅವರನ್ನು ಲೋಕಸಭೆಯಲ್ಲಿ ನೋಡಬಹುದು.ರೈತರ ಅಭಿವೃದ್ಧಿಗೆ ಸ್ಪಂದಿಸುವ ಅವರ ಮನೋಭಾವ ಮೆಚ್ಚಬೇಕು ಹಾಗೂ ಮತ್ತೊಮ್ಮೆ ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ನುಡಿದಿದ್ದಾರೆ.

Exit mobile version