‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್

ಬೆಂಗಳೂರು, ಫೆ. 02: ರಾಜ್ಯದಲ್ಲಿ ಕೋವಿಡ್-19ನಿಂದಾಗಿ ಪರಿಸ್ಥಿತಿಯನ್ನು ನಿಭಾಯಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ 2020-21ನೇ ಸಾಲಿನ ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ತಡೆ ಹಿಡಿಯಲಾಗಿತ್ತು. ಆದ್ರೇ ಇದೀಗ ದಿನಾಂಕ 06-07-2020ರ ಸುತ್ತೋಲೆಯಿಂದ ವಿನಾಯಿತಿ ನೀಡಿದ್ದು, ಕೆಲವು ಇಲಾಖೆಗಳಿಗೆ ನೇಮಕಾತಿಗಾಗಿ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದೆ.

ದಿನಾಂಕ 12-01-2021ರ ಸುತ್ತೋಲೆಯಲ್ಲಿ ಅನುಕಂಪನದ ಆಧಾರದ ಮೇಲೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ವಿವಿಧ ಇಲಾಖೆಗಳಿಗೆ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ನೇಮಕಾತಿ ಪೂರ್ವ ಪ್ರಕ್ರಿಯೆಗಳನ್ನು ಮುಂದುವರೆಸಲು ಸಹಮತಿ ನೀಡಿದೆ.

Exit mobile version