ವಾಹನ ಸವಾರರಿಗೆ ಗುಡ್ ನ್ಯೂಸ್: ಇನ್ಮುಂದೆ ಸ್ಪಾಟ್ ಫೈನ್ ಗೆ ಬೀಳಲಿದೆ ಕಡಿವಾಣ

ಬೆಂಗಳೂರು, ಆ. 10: ಆರಗ ಜ್ಞಾನೇಂದ್ರ ನೂತನ ಗೃಹ ಸಚಿವರಾದ ಬೆನ್ನಲೆ ವಾಹನ ಸವಾರರಿಗೆ ಸಂತಸದ ಸುದ್ದಿಯೊಂದನ್ನುನೀಡಿದ್ದು ವಾಹನ ಸವಾರರು ಇನ್ನು ಮುಂದೆ ಸ್ಪಾಟ್ ಫೈನ್ ಕಟ್ಟುವ ಅವಶ್ಯಕತೆ ಇಲ್ಲಎಂದು ಸ್ಪಷ್ಟ ಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸ್ಥಳದಲ್ಲೇ ದಂಡ ಪಾವತಿಯನ್ನು ರದ್ದು ಗೊಳಿಸುವಂತೆ ಅವರು ಆದೇಶಿಸಿದ್ದಾರೆ. ಜೊತೆಗೆ ಟ್ರಾಫಿಕ್ ಪೊಲೀಸರು ಬಳಸುತ್ತಿರುವ ಪಿಡಿಎ ದಂಡ ಪಾವತಿಯ ಯಂತ್ರವನ್ನು ಆಯಾ ಠಾಣೆಗೆ ಹಿಂದಿರುಗಿಸುವಂತೆ ಅವರು ತಿಳಿಸಿದ್ದಾರೆ.

ಒಂದೆಡೆ ಪೆಟ್ರೋಲ್ ಡಿಸೈಲ್ ದರ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂತಹ ಕಾನೂನು ಜಾರಿಗೊಳಿಸಿದ್ದು ಸಾರ್ವಜನಿಕರಿಗೆ ಸಂತಸವಾಗಿದೆ.

Exit mobile version