• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ವೀಡಿಯೊ ಸಿಟಿಜನ್ ಜರ್ನಲಿಸ್ಟ್

ಅಪಾಯದಲ್ಲಿದೆ ಹಾಸನದ ಸರ್ಕಾರಿ ಶಾಲೆ ! ಅರಕಲಗೂಡಿನ ಸರ್ಕಾರಿ ಶಾಲೆ ಛಾವಣಿ ಕುಸಿಯುತ್ತಿದೆ. ದೂರು ಕೊಟ್ರೂ ಕ್ಯಾರೇ ಅಂತಿಲ್ಲ ಶಿಕ್ಷಣ ಅಧಿಕಾರಿಗಳು. ಮಕ್ಕಳ ಬಲಿಗಾಗಿ ಕಾಯುತ್ತಿದೆಯಾ ಶಿಕ್ಷಣ ಇಲಾಖೆ? ದಲಿತ ಮಕ್ಕಳಿಗೇಕೆ ಈ ಶಿಕ್ಷೆ ?

Sharadhi by Sharadhi
in ಸಿಟಿಜನ್ ಜರ್ನಲಿಸ್ಟ್
Featured Video Play Icon
0
SHARES
0
VIEWS
Share on FacebookShare on Twitter

ಮಾಜಿ ಪ್ರಧಾನಿ ದೇವೇಗೌಡರ ತವರ ಜಿಲ್ಲೆ ಹಾಸನದ ಅರಕಲಗೂಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳ ಬಲಿಗಾಗಿ ಕಾಯುತ್ತಿದೆ. ಈ ಶಾಲೆಗೆ ಮಕ್ಕಳನ್ನು ಕಳುಹಿಸಲು ಹೆತ್ತವರು ಭಯ ಬೀಳುತ್ತಿದ್ದಾರೆ. ಯಾಕಂದ್ರೆ ಈ ಶಾಲೆಯ  ಮೇಲ್ಛಾವಣಿಯೇ ಕೆಳಗೆ ಬೀಳೋ ಹಂತದಲ್ಲಿದೆ. ಗೋಡೆಗಳು ಬಿರುಕು ಬಿಟ್ಟಿದ್ದು ಯಾವಾಗ ಬೇಕಾದ ಗೋಡೆ ಕುಸಿದು ಬೀಳಬಹುದು.

ಮಕ್ಕಳ ಪ್ರಾಣ ಕುತ್ತು ತರುವ ಶಾಲೆ ಇರೋದು, ಅರಕಲಗೂಡು ತಾಲ್ಲೂಕಿನ ಇಬ್ಬಡಿಯಲ್ಲಿ. ಈ ಶಾಲೆಯಲ್ಲಿ ಓದುತ್ತಿರುವ ಹೆಚ್ಚಿನ ಮಕ್ಕಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು. ಬಡ ಕುಟುಂಬಕ್ಕೆ ಸೇರಿರುವ ಈ ಮಕ್ಕಳಿಕೆ ಕಲಿಯುವ ಮನಸ್ಸಿದ್ದರೂ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ಶಿಕ್ಷಣ ಇಲಾಖೆ ಸಂಪೂರ್ಣವಾಗಿ ಸೋತಿದೆ ಅನ್ನೋದು ಗ್ರಾಮಸ್ಥರ ಆರೋಪ.

ದೊಡ್ಡಮಗ್ಗೆ ಹೋಬಳಿ ಇಬ್ಬಡಿ ಗ್ರಾಮದಲ್ಲಿರುವ ಈ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 7 ನೇ ತರಗತಿಯವರೆಗೆ ಪ್ರಸ್ತುತ 61ಕ್ಕೂ ಹೆಚ್ಚು ಮಕ್ಕಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಮುಖ್ಯಶಿಕ್ಷಕರು ಸೇರಿ 4 ಜನ  ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ.ಇಲ್ಲಿ ಒಟ್ಟು 5 ಕೊಠಡಿಗಳು ಇದ್ದು, ಅದರಲ್ಲಿ ಒಂದು ಕೊಠಡಿ ಪೂರ್ಣ ಹದಗೆಟ್ಟಿದ್ದು, ಪಿಡಬ್ಲ್ಯೂ ಡಿ ಯವರಿಗೆ ತೆರವು ಗೊಳಿಸಲು ಮನವಿ ಮಾಡಲಾಗಿದೆ. ಯೋಗ್ಯವಾಗಿರುವ ನಾಲ್ಕೂ ಕೊಠಡಿಗಳ ಒಂದನ್ನು ಮುಖ್ಯಶಿಕ್ಷಕರು ಬಳಸಿಕೊಂಡರೆ ಉಳಿದ  ಕೊಠಡಿಯಲ್ಲಿ ಒಂದರಲ್ಲಿ ನಲಿ-ಕಲಿ ಮಕ್ಕಳು 1ರಿಂದ 5ನೇ ತರಗತಿಯಲ್ಲಿ 39 ಮಕ್ಕಳು ಒಂದೇ ಕೊಠಡಿಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಉಳಿದ ಎರಡು ಕೊಠಡಿಗಳು ಬಿರುಕು ಬಂದು ಯಾವಾಗ ಬೇಕಾದ್ರೂ ಕುಸಿದು ಮಕ್ಕಳನ್ನು ಬಲಿ ಪಡೀ ಬಹುದು ಅನ್ನೋದು ಸಾರ್ವಜನಿಕರ ಆತಂಕ. ಹಾಗಾಗಿ ಈ ಶಾಲೆಗೆ ಮಕ್ಕಳನ್ನು ದಾಖಲಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಒಂದೇಡೆ ಕೊರೊನಾ ಬೀತಿ ಇನ್ನೊಂದು ಕಡೆ ಕೊಠಡಿ ಭೀತಿ ಇದರಿಂದ ಈ ಗ್ರಾಮದ ಬಡವರ್ಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಭೀತಿ ಎದುರಾಗಿದೆ. ಅದಕ್ಕಾಗಿ ಗ್ರಾಮಸ್ಥರೇ ಸೇರಿ ಕೊಠಡಿ ನಿರ್ಮಿಸಲು ಮುಂದಾಗಿದ್ದಾರೆ. ಆದ್ರೆ ಇವರಿಗೆ ಶಿಕ್ಷಣ ಇಲಾಖೆ ಒಂದು ರೂಪಾಯಿ ಅನುದಾನವನ್ನೂ ಕೊಡುತ್ತಿಲ್ಲ ಅನ್ನೋದು ಗ್ರಾಮದ ಜನರ ಆರೋಪ. ಸರ್ಕಾರ ಮಕ್ಕಳಿಗೆ ಶಿಕ್ಷಣ ನೀಡಲು  ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಹಲವು ಸೌಲಭ್ಯ ಕಲ್ಪಿಸುತ್ತಿದೆ.  ಆದ್ರೆ ಕೆಲ ಸರ್ಕಾರಿ ಶಾಲೆಗಳು ಮೂಲಭೂತ ಸೌಲಭ್ಯದಿಂದ ವಂಚಿತವಾಗಿ ಗುಣಮಟ್ಟ ಶಿಕ್ಷಣಕ್ಕೆ ಅಡ್ಡಿಯಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಸರ್ಕಾರಿ ಶಾಲೆಗೆ ಹೆಚ್ಚಾಗಿ ಹಿಂದುಳಿದ ಎಸ್ಸಿ-ಎಸ್ಟಿ ಮಕ್ಕಳೇ ಹೆಚ್ಚು ದಾಖಲಾತಿ ಪಡೆಯುತ್ತಿದ್ದಾರೆ. ಸರ್ಕಾರ ಎಲ್ಲಾ ರೀತಿಯಲ್ಲಿ  ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅವರಿಗೆ ಪ್ರೋತ್ಸಾಹಿಸಬೇಕು. ಈಗಲಾದ್ರೂ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡು ಈ ಶಾಲೆಗೆ ಸುಸಜ್ಜಿತ ಕಟ್ಟಡ ನಿರ್ಮಿಸಲಿ ಅನ್ನೋದು ವಿಜಯಟೈಮ್ಸ್‌ ಆಶಯ.

Related News

basket story
ಸಿಟಿಜನ್ ಜರ್ನಲಿಸ್ಟ್

ಬುಟ್ಟಿ ಬದುಕು ಕಷ್ಟ..ಕಷ್ಟ ; ಇವರ ಜೊತೆ ಚೌಕಾಸಿ ಮಾಡೋ ಮುನ್ನ ಒಮ್ಮೆ ಯೋಚಿಸಿ!

March 23, 2022
krushi ilakhe
ಸಿಟಿಜನ್ ಜರ್ನಲಿಸ್ಟ್

ಕೃಷಿ ಇಲಾಖೆಯಲ್ಲಿ ಮಹಾ ಮೋಸ !

January 20, 2022
Featured Video Play Icon
ಸಿಟಿಜನ್ ಜರ್ನಲಿಸ್ಟ್

ಹದ್ದು ಮೀರಿ ವರ್ತಿಸುತ್ತಿರುವ ಸರ್ಕಾರಿ ಅಧಿಕಾರಿ

October 10, 2022
ರಸ್ತೆ ಇಲ್ಲದೆ ಸುಸ್ತು ! ಸರ್ಕಾರ ಆಶ್ರಯ ಮನೆ ಕಟ್ಟಿದೆ, ಆದ್ರೆ ರಸ್ತೆಯೇ ಮಾಡ್ಲಿಲ್ಲ. ರಸ್ತೆ ಇಲ್ಲದೆ 17 ವರ್ಷಗಳಿಂದ ಒದ್ದಾಡುತ್ತಿರುವ ಬಡ ಜನತೆ. ಇದು ಚೆನ್ನಪಟ್ಟಣದ ಲಾಳಘಟ್ಟದ ತಮಿಳು ಕಾಲೋನಿಯ ದುರಂತದ ಕಥೆ ಇದು
ಸಿಟಿಜನ್ ಜರ್ನಲಿಸ್ಟ್

ರಸ್ತೆ ಇಲ್ಲದೆ ಸುಸ್ತು ! ಸರ್ಕಾರ ಆಶ್ರಯ ಮನೆ ಕಟ್ಟಿದೆ, ಆದ್ರೆ ರಸ್ತೆಯೇ ಮಾಡ್ಲಿಲ್ಲ. ರಸ್ತೆ ಇಲ್ಲದೆ 17 ವರ್ಷಗಳಿಂದ ಒದ್ದಾಡುತ್ತಿರುವ ಬಡ ಜನತೆ. ಇದು ಚೆನ್ನಪಟ್ಟಣದ ಲಾಳಘಟ್ಟದ ತಮಿಳು ಕಾಲೋನಿಯ ದುರಂತದ ಕಥೆ ಇದು

January 4, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.