• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸರ್ಕಾರ ದೇಶದ ಜನರಿಗೆ ಮಾನಸಿಕವಾಗಿ ಧೈರ್ಯ ತುಂಬಿ, ಆರ್ಥಿಕವಾಗಿ ಶಕ್ತಿ ತುಂಬಬೇಕು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಅವರಂತೆ ಕಲ್ಲು, ಮೊಟ್ಟೆ ಹೊಡೆಯೋದು ಬೇಡ: ನಾವು ಶಾಂತಿಯುತವಾಗಿ ಚುನಾವಣೆ ಎದುರಿಸೋಣ: ಡಿಕೆಶಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಏ. 22: ದೇಶದೆಲ್ಲೆಡೆ ಉಲ್ಬಣಿಸಿರುವ ಕೊರೊನಾ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ಸರ್ಕಾರ ಮೊದಲು ದೇಶದ ಜನರಿಗೆ ಮಾನಸಿಕವಾಗಿ ಧೈರ್ಯ ತುಂಬಿ, ಆರ್ಥಿಕವಾಗಿ ಶಕ್ತಿ ತುಂಬಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತಾಂತ್ರಿಕ ಸಮಿತಿ ಸಲಹೆಯಂತೆ ನಿರ್ಧಾರ ಕೈಗೊಳ್ಳಬೇಕು ಎಂದು ನಾವು ಸರ್ಕಾರಕ್ಕೆ ತಿಳಿಸಿದ್ದೇವೆ. ಮಾಧ್ಯಮಗಳ ವರದಿ ಪ್ರಕಾರ ಸರ್ಕಾರಕ್ಕೆ ಲಾಕ್ ಡೌನ್ ಬಗ್ಗೆ ಆಸಕ್ತಿ ಇತ್ತು ಅನಿಸುತ್ತದೆ. ಆದರೆ ನಿನ್ನೆ ಪ್ರಧಾನಮಂತ್ರಿಗಳ ಸಂದೇಶ ಮೇರೆಗೆ ಕೆಲವು ಬದಲಾವಣೆ ಮಾಡಿಕೊಂಡಿದ್ದಾರೆ.

ಸರ್ಕಾರ ಈಗ ಮಾರ್ಗಸೂಚಿ ಹೊರಡಿಸಿದ್ದು, ಎಲ್ಲ ವರ್ಗದ ಜನ ಈಗ ಸಹಕಾರ ನೀಡಬೇಕಾದ ಅವಶ್ಯಕತೆ ಇದೆ. ಸರ್ಕಾರದ ವೈಫಲ್ಯದ ಬಗ್ಗೆ ರಾಜ್ಯಪಾಲರ ಸಭೆಯಲ್ಲಿ ಹೇಳಿದ್ದೇವೆ. ವಿವರವಾಗಿ ಹೇಳಲು ಸಾಧ್ಯವಾಗದಿದ್ದರೂ ಕಳೆದ ಒಂದು ವರ್ಷದಿಂದ ಸರ್ಕಾರದ ವೈಫಲ್ಯ ತಿಳಿಸಿದ್ದೇವೆ. ಅವರು ಈ ವಿಚಾರದಲ್ಲಿ ವಿಫಲರಾಗಿದ್ದಾರೆ ಎಂಬುದಕ್ಕೆ ಸೋಂಕಿನ ಸಂಖ್ಯೆಗಳೇ ಸಾಕ್ಷಿಯಾಗಿದೆ.

ಅಲ್ಲದೇ, ನಿನ್ನೆ ಪ್ರಧಾನಮಂತ್ರಿಗಳ ಭಾಷಣವನ್ನು ಖರ್ಗೆ ಅವರು ಪ್ರವಚನ ಎಂದು ಹೇಳಿದ್ದಾರೆ. ಪ್ರಧಾನ ಮಂತ್ರಿಗಳು ಲಸಿಕೆ ವಿಚಾರವಾಗಿ ಹೇಳಿದ ತೀರ್ಮಾನಗಳನ್ನು ಯಾಕೆ ಮುಂಚಿತವಾಗಿ ಮಾಡಿರಲಿಲ್ಲ? ಇದೆಲ್ಲವೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ಸಾಬೀತುಪಡಿಸುತ್ತಿವೆ.

ಪರಿಸ್ಥಿತಿ ಕೈತಪ್ಪಿದಾಗ ಲಸಿಕೆ ಹೆಚ್ಚಿನ ಉತ್ಪಾದನೆಗೆ ಅವಕಾಶ ಕೊಟ್ಟಿದ್ದೇನೆ, ತೆರಿಗೆ ವಿನಾಯಿತಿ ಕೊಟ್ಟಿದ್ದೇನೆ ಎಂದು ಹೇಳುತ್ತಿದ್ದಾರೆ. ಲಸಿಕೆಗಳನ್ನು ಬೇರೆ ದೇಶಗಳಿಗೆ ಕಳುಹಿಸಿ ದೊಡ್ಡ ಮನುಷ್ಯ ಎಂದು ಕರೆಸಿಕೊಳ್ಳುವ ಬದಲು, ನಿಮಗೆ ಮತ ಹಾಕಿ ಆಶೀರ್ವಾದ ಮಾಡಿ ಅಧಿಕಾರಕ್ಕೆ ತಂದ ಜನರಿಗೆ ಔಷಧಿ ನೀಡಬಹುದಿತ್ತು. ತಮ್ಮ ದೊಡ್ಡಸ್ಥಿಕೆ ತೋರಿಸಿಕೊಳ್ಳಲು ಲಸಿಕೆಗಳನ್ನು ಬೇರೆ ದೇಶಗಳಿಗೆ ಹಂಚಿದ್ದಾರೆ.

ಸರ್ಕಾರ ಮೊದಲು ದೇಶದ ಜನರಿಗೆ ಮಾನಸಿಕವಾಗಿ ಧೈರ್ಯ ತುಂಬಿ, ಆರ್ಥಿಕವಾಗಿ ಶಕ್ತಿ ತುಂಬಬೇಕು. ಇಷ್ಟು ದಿನಗಳಿಂದ ಆರೋಗ್ಯ, ಕಂದಾಯ ಹಾಗೂ ಗೃಹ ಸಚಿವರು ಮಾತನಾಡುತ್ತಿದ್ದರು. ಈಗ ಜನರ ಆಕ್ರೋಶಕ್ಕೆ ಮುಖ್ಯಕಾರ್ಯದರ್ಶಿಗಳ ಮೂಲಕ ಹೇಳಿಕೆ ಕೊಡಿಸುತ್ತಿದ್ದಾರೆ. ಇದು ಸರ್ಕಾರ ವಿಫಲವಾಗಿದೆ ಎಂಬುದನ್ನು ತೋರಿಸುತ್ತದೆ.
ಡಬಲ್ ಇಂಜಿನ್ ಸರ್ಕಾರದಲ್ಲಿ ಏನಾಗುತ್ತಿದೆ. ಔಷಧಿ ತಯಾರಿಕೆಗೆ ಎಲ್ಲರಿಗೂ ಅವಕಾಶ ಕೊಟ್ಟು ನೀವೇ ಪರಿಶೀಲಿಸಿದ್ದರೆ ಏನಾಗುತ್ತಿತ್ತು? ನಮ್ಮ ರಾಜ್ಯದಲ್ಲೇ ನವೆಂಬರ್ 20ರಂದು ಮುನ್ನಚ್ಚರಿಕೆ ನೀಡಲಾಗಿದ್ದರೂ ಯಾಕೆ ಯಾವುದೇ ಕ್ರಮಕೈಗೊಳ್ಳಲಿಲ್ಲ. ಇದು ಕರ್ನಾಟಕ ಸರ್ಕಾರದ ವೈಫಲ್ಯ ಎಂದು ಟೀಕಿಸಿದರು.

ರಾಜ್ಯದಲ್ಲಿ ಮೊದಲ ಲಸಿಕೆ ಹಾಕಿಸಿಕೊಂಡವರಿಗೆ ಎರಡನೇ ಲಸಿಕೆ ನೀಡಿಲ್ಲ. ಪ್ರಧಾನಿಗಳು ಭಾಷಣ ಮಾಡಿ ಎಲ್ಲವನ್ನು ಮಾಡಿದ್ದೇವೆ ಎನ್ನುತ್ತಾರೆ. ಈಗಲೂ ನಮಗೆ ಹಾಸಿಗೆ, ಆಕ್ಸಿಜನ್ ಬೇಕೆಂದು ನೂರಾರು ಕರೆ ಬರುತ್ತಿದೆ. ಮಾಧ್ಯಮಗಳು ಕೂಡ ಜನರಲ್ಲಿ ಭಯ ಹುಟ್ಟಿಸುವುದು ಬೇಡ. ನೀವು ವಾಸ್ತವದ ಸ್ಥಿತಿ ತೋರಿಸುತ್ತಿದ್ದೀರಿ, ಅದರ ಜತೆಗೆ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿ ಎಂದು ಹೇಳಿದರು.

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

May 31, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.