ಇನ್ಮುಂದೆ ಸರ್ಕಾರಿ ನೌಕರರು ಪ್ರತಿನಿತ್ಯ ಒಂದು ಗಂಟೆ ಹೆಚ್ಚುವರಿ ಕೆಲಸ ಮಾಡಿ : ಸಿಎಂ ಬೊಮ್ಮಾಯಿ

Bengaluru : ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Govt Employees Work More) ಅವರು ಗುರುವಾರ ರಾಜ್ಯ ಸರ್ಕಾರಿ ನೌಕರರು ಪ್ರತಿದಿನ ಒಂದು ಗಂಟೆ ಹೆಚ್ಚುವರಿ ಕೆಲಸ ಮಾಡಲು ಕರೆ ನೀಡಿದ್ದಾರೆ.

ಸರ್ಕಾರಿ ನೌಕರರ(Govt Employees Work More) ವೇತನ ಶ್ರೇಣಿಯನ್ನು ಪರಿಷ್ಕರಿಸಲು 7ನೇ ವೇತನ ಆಯೋಗವನ್ನು ರಚಿಸಿದ್ದಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಿಎಂ ಬೊಮ್ಮಾಯಿ ಅವರು ಈ ವಿಷಯವನ್ನು ಮುನ್ನೆಲೆಗೆ ತಂದರು.

ಗುರುವಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ‘ಪ್ರತಿದಿನವೂ ಒಂದು ಗಂಟೆ ಹೆಚ್ಚುವರಿಯಾಗಿ ದುಡಿಯುವ ಮನೋಭಾವನೆಯನ್ನು ಸರ್ಕಾರಿ ನೌಕರರು ಹೊಂದಬೇಕು’ ಎಂದರು.

ಸರ್ಕಾರಿ ನೌಕರರಿಗೆ ಸೂಕ್ತ ಸಂಭಾವನೆ ನೀಡುವುದಾಗಿ ಭರವಸೆ ನೀಡಿದ ಅವರು,

https://youtu.be/8MxYLwWvSys

‘ನೀವೆಲ್ಲರೂ ಪ್ರಾಮಾಣಿಕತೆ, ಸಮರ್ಪಣಾ ಭಾವ ಮತ್ತು ನಿಷ್ಠೆಯಿಂದ ಕೆಲಸ ಮಾಡಬೇಕು, ಉಳಿದದ್ದನ್ನು ನನಗೆ ಬಿಡಿ’ ಎಂದು ಹೇಳಿದರು.

ತಮ್ಮ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಶ್ಲಾಘಿಸಿದ ಅವರು, ಐದು ವರ್ಷ ಪೂರ್ಣಗೊಂಡ ನಂತರವೇ ವೇತನ ಆಯೋಗವನ್ನು ರಚಿಸಿದ ಮೊದಲ ಸರ್ಕಾರ ನಮ್ಮದಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದರು.

ನೌಕರರಿಗೆ ಕಿವಿಮಾತು ಹೇಳಿದ ಸಿಎಂ, ಬಡವರಿಗಾಗಿ ದುಡಿದರೆ ಕರ್ನಾಟಕ ಅಭಿವೃದ್ಧಿ(Devolpment Of Karnataka) ಹೊಂದುತ್ತದೆ,

ಈ ರಾಜ್ಯವನ್ನು ಅಭ್ಯುದಯಗೊಳಿಸೋಣ, ನವ ಕರ್ನಾಟಕದ ಮೂಲಕ ನವ ಭಾರತ ನಿರ್ಮಾಣಕ್ಕೆ ನಾವೆಲ್ಲರೂ ಶ್ರಮಿಸಬೇಕು ಎಂದರು. ಬೊಮ್ಮಾಯಿ ಅವರು ತಮ್ಮ ಸರ್ಕಾರದ ಆಕಾಂಕ್ಷೆಗಳು ಮತ್ತು ಯೋಜನೆಗಳನ್ನು ಪಟ್ಟಿ ಮಾಡಿದರು.

ಭಾರತದ ಉದ್ದೇಶಿತ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯಲ್ಲಿ, ಕರ್ನಾಟಕದ ಕೊಡುಗೆ ಒಂದು ಟ್ರಿಲಿಯನ್ ಡಾಲರ್ ಆಗಿರಬೇಕು ಎಂದು ಹೇಳಿದರು.

7ನೇ ವೇತನ ಆಯೋಗದ ಅಧ್ಯಕ್ಷ ಡಾ.ಸುಧಾಕರ ರಾವ್ ಅವರನ್ನು ಶ್ಲಾಘಿಸಿದ ಬೊಮ್ಮಾಯಿ, ‘ಅವರು ಪ್ರಾಮಾಣಿಕ ಅಧಿಕಾರಿಯಾಗಿದ್ದು, ಯಾರ ಪ್ರಭಾವಕ್ಕೂ ಒಳಗಾಗದೆ ಕೆಲಸ ಮಾಡಿದ್ದಾರೆ.

2023 ರಲ್ಲಿ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದ್ದು, ರಾಜ್ಯದಲ್ಲಿ 7ನೇ ವೇತನ ಆಯೋಗದ ವರದಿಯನ್ನು ಮಾತ್ರ ಜಾರಿಗೊಳಿಸುತ್ತೇವೆ ಎಂದರು.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ದಣಿವರಿಯಿಲ್ಲದೆ ಕೆಲಸ ಮಾಡಿದ ಸರ್ಕಾರಿ ನೌಕರರು, ವಿಶೇಷವಾಗಿ ಆರೋಗ್ಯ, ಪೊಲೀಸ್, ಗ್ರಾಮೀಣಾಭಿವೃದ್ಧಿ ಮತ್ತು ಆದಾಯಕ್ಕೆ ಸಂಬಂಧಿಸಿದವರನ್ನು ಸಿಎಂ ಶ್ಲಾಘಿಸಿದರು.

ಇದನ್ನೂ ಓದಿ : https://vijayatimes.com/i-wont-act-in-bollywood/

ಸರ್ಕಾರಿ ಅಧಿಕಾರಿಗಳನ್ನು ಹೊಗಳಿ, ತಾವು ಸಿಎಂ ಆಗಿ ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂ. ಆದಾಯ ಕೊರತೆ ಉಂಟಾಗಿದ್ದರೂ, ವಿವಿಧ ಇಲಾಖೆಗಳ ಅಧಿಕಾರಿಗಳು ಶ್ರಮಿಸಿ ಖಜಾನೆ ತುಂಬಿಸಿದ್ದಾರೆ ಎಂಬುದನ್ನು ನೆನಪಿಸಿದರು.

ಪ್ರಸಕ್ತ ಹಣಕಾಸು ವರ್ಷದಲ್ಲಿ ರಾಜ್ಯದ ಖಜಾನೆಗೆ ಹೆಚ್ಚುವರಿಯಾಗಿ 13 ಸಾವಿರ ಕೋಟಿ ರೂ. ಜಮೆಯಾಗಿದೆ.

ರಾಜ್ಯದ ಮುಖ್ಯಸ್ಥರಾಗಿ ನೌಕರರ ಸೇವೆಯನ್ನು ಗುರುತಿಸಿ ಅವರ ಬೇಡಿಕೆಗಳನ್ನು ಈಡೇರಿಸುವ ಜವಾಬ್ದಾರಿ ನನ್ನ ಮೇಲಿದೆ. ಅದನ್ನು ಈಡೇರಿಸುವತ್ತ ನಾನು ಮುಖಮಾಡಿದ್ದೇನೆ,

ಮುಂದಿನ 2023ರ ಚುನಾವಣೆಯಲ್ಲಿ ನಮ್ಮ ಸರ್ಕಾರ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಭರವಸೆ ಮಾತುಗಳನ್ನು ನುಡಿದರು.

Exit mobile version