Bengaluru: ಕಳೆದ ಕೆಲ ದಿನಗಳಿಂದ ಕೋವಿಡ್ ಹಗರಣ (Covid scam) ವಿಚಾರ ಕರ್ನಾಟಕ ರಾಜಕೀಯದಲ್ಲಿ ಭಾರಿ ಚರ್ಚೆಗೆ ಒಳಗಾಗಿತ್ತು.ಬಿಜೆಪಿ ಸರ್ಕಾರದ (BJP Govt) ಅಧಿಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕೋವಿಡ್ ಹಗರಣದ ತನಿಖೆ (Investigating the covid scam) ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ (State Congress Govt) ಇದೀಗ ಸಿಐಡಿಗೆ (CID) ವಹಿಸಿದೆ. ಪ್ರಕರಣ ಸಂಬಂಧ ಎಫ್ಐಆರ್ (FIR) ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ (CID to investigate) ಆದೇಶಿಸಲಾಗಿದೆ. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ (DSP) ಗಳನ್ನು ಒಳಗೊಂಡ ತಂಡ ಹಗರಣದ ತನಿಖೆ ನಡೆಸಲಿದೆ.

ಡಿಸೆಂಬರ್ 13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ (Vidhana Soudha Police Station) ಪ್ರಕರಣ ದಾಖಲಾಗಿತ್ತು.ವೈದ್ಯಕೀಯ ಶಿಕ್ಷಣ ಇಲಾಖೆ (Department of Medical Education) ನಿರ್ದೇಶಕ ಡಾ. ಪಿಜಿ ಗಿರೀಶ್, ಲೆಕ್ಕಪತ್ರ ಇಲಾಖೆ ಜಂಟಿ ನಿಯಂತ್ರಕ (Joint Controller of Accounts Department) ಜೆಪಿ ರಘು, ಚುನಾಯಿತ ಪ್ರತಿನಿಧಿಗಳು ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.ಅಗಲೇ ಕೋವಿಡ್ ಹಗರಣ ಸಂಬಂಧ ವಿಶೇಷ ತನಿಖಾ ತಂಡ (Special Investigation Team) ರಚಿಸಲು ಮುಂದಾಗಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ (Special Investigation Team), ಐಪಿಎಸ್ ಅಧಿಕಾರಿಗಳು (IPS officers) ಹಿಂದೇಟು ಹಾಕಿದ್ದರಿಂದ ಸ್ವಲ್ಪ ಹಿನ್ನಡೆಯಾಗಿತ್ತು. ಆದರೆ ಇದೀಗ, ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿ ಎರಡು ತಿಂಗಳ ಬಳಿಕ ರಾಜ್ಯ ಸರ್ಕಾರ (State Govt) ಕೋವಿಡ್ ಹಗರಣದ ತನಿಖೆಯನ್ನು (Investigating the covid scam) ಸಿಐಡಿಗೆ (CID) ವಹಿಸಿ ಆದೇಶಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ವಿರುದ್ಧದ ಮುಡಾ ಹಗರಣ (Muda Scam), ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation) ನಡೆದಿದೆ ಎನ್ನಲಾದ ಹಗರಣ ಇತ್ಯಾದಿಗಳ ವಿರುದ್ಧ ಪ್ರತಿಪಕ್ಷ ಬಿಜೆಪಿ (Opposition BJP) ಪ್ರತಿಭಟನೆ ತೀವ್ರಗೊಳಿಸುತ್ತಿದ್ದಂತೆಯೇ, ಹಿಂದಿನ ಬಿಜೆಪಿ ಸರ್ಕಾರದ (BJP Govt) ಅವಧಿ ಹಗರಣದ ಬಗ್ಗೆ ತನಿಖೆಗೆ ಕಾಂಗ್ರೆಸ್ (Congress) ಮುಂದಾಗಿತ್ತು.ಬಳಿಕ ಕೋವಿಡ್ ಅಕ್ರಮದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವ ಬಗ್ಗೆ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಆದರೆ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳ (IAS officers) ಹೆಸರು ಪ್ರಸ್ತಾಪವಾಗಿರುವುದರಿಂದ ಎಸ್ಐಟಿ (SIT) ನೇತೃತ್ವ ವಹಿಸಲು ಐಪಿಎಸ್ ಅಧಿಕಾರಿಗಳು (IPS officers) ಹಿಂದೇಟು ಹಾಕಿದ್ದರು. ಹೀಗಾಗಿ ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ (CID) ವಹಿಸಿ ರಾಜ್ಯ ಸರ್ಕಾರ (State Govt) ಆದೇಶಿಸಿದೆ.