ಬೆಂಗಳೂರು ನ 1 : ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯ 18 ಮಂದಿಯ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ನ್ಯಾಯಾಲಯದ ಮುಂದೆ ಅವರ ವಕೀಲರ ಸಮ್ಮುಖದಲ್ಲಿ ಆರೋಪಿಗಳಿಗೆ ಮರಾಠಿ ಮತ್ತು ಕನ್ನಡದಲ್ಲಿ ಆರೋಪಗಳನ್ನು ಓದಿ ವಿವರಿಸಲಾಯಿತು.
ಆರೋಪಿಗಳಾದ ಅಮೋಲ್ ಕಾಳೆ, ಅಮಿತ್ ಬದ್ದಿ, ಪರಶುರಾಮ್ ವಾಸ್ಕೋರೆ, ಗಣೇಶ್ ಮಿಸ್ಕಿನ್, ಅಮಿತ್ ದೆಸ್ವೀಕರ್, ಭರತ್ ಕುರಾಣೆ, ರಾಜೇಶ್ ಡಿ. ಬಂಗೇರ, ಸುಧನ್ವ ಗೊಂದಲೇಕರ್, ಮೋಹನ್ ನಾಯಕ್ ಎನ್, ಸುರೇಶ್ ಎಚ್ ಎಲ್, ಶರದ್ ಬಿ ಕಲಾಸ್ಕರ್, ವಾಸುದೇವ್ ಬಿ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ್ ಯಡವೆ, ಶ್ರೀಕಾಂತ್ ಜೆ ಪಂಗರ್ಕರ್, ಕೆ.ಟಿ ನವೀನ್ ಕುಮಾರ್ ಮತ್ತು ಋಷಿಕೇಶ್ ದೇವಡೇಕರ್ ಸೇರಿ 18 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 5, 2017 ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ಮನೆಯ ಮುಂದೆಯೇ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು