• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಸ ಸಂಗ್ರಹ ವಾಹನಗಳಿಗೆ GPS ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಬಿಲ್ ಪಾವತಿ ಇಲ್ಲ!

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಕಸ ಸಂಗ್ರಹ ವಾಹನಗಳಿಗೆ GPS ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಬಿಲ್ ಪಾವತಿ ಇಲ್ಲ!
0
SHARES
7
VIEWS
Share on FacebookShare on Twitter

ಬೆಂಗಳೂರು ನಗರದ ಕಸ ನಿರ್ವಹಣೆಯನ್ನು ಸುಗಮಗೊಳಿಸಲು (GPS tracking in garbage vehicles) ಮತ್ತು ಕಸ ಮಾಫಿಯಾದ ಅಕ್ರಮಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ.

ನಗರದಲ್ಲಿ ಇತ್ತೀಚೆಗೆ ಕಸದ ಸಮಸ್ಯೆ ಹೆಚ್ಚಾಗುತ್ತಿರುವುದನ್ನು ತಡೆಗಟ್ಟಲು, ಪ್ರತಿಯೊಂದು ಕಸ ಸಂಗ್ರಹಣಾ ವಾಹನಕ್ಕೂ ಜಿಪಿಎಸ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ.

ಕಸ ಸಾಗಣೆ ವಾಹನಗಳಿಗೆ ಜಿಪಿಎಸ್ ಅಳವಡಿಸಬೇಕು ಎಂದು ಹೈಕೋರ್ಟ್ (High Court) ಈಗಾಗಲೇ ನಿರ್ದೇಶನ ನೀಡಿದ್ದರೂ, ಪ್ರಸ್ತುತ ಅದನ್ನು ಸಮರ್ಪಕವಾಗಿ ಪಾಲಿಸುತ್ತಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

GPS tracking in garbage vehicles

ಇನ್ನು ಮುಂದೆ ಈ ನಿಯಮವನ್ನು ಉಲ್ಲಂಘಿಸುವ ವಾಹನಗಳ ಗುತ್ತಿಗೆದಾರರಿಗೆ ಬಿಲ್ ಪಾವತಿಯನ್ನು ಮಾಡಲಾಗುವುದಿಲ್ಲ ಎಂದು ಅವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ಲಿಮಿಟೆಡ್ (BSWML) ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಮಾತನಾಡಿದ ಸಚಿವರು, ನಗರದ ಕಸದ ಸಮಸ್ಯೆಗೆ ಶೇ. 10 ರಷ್ಟು ಸಾರ್ವಜನಿಕರ ಬೇಜವಾಬ್ದಾರಿತನ ಕಾರಣವಾದರೆ, ಇನ್ನು ಶೇ. 20 ರಷ್ಟು ಲೋಪದೋಷಗಳು ಪಾಲಿಕೆಯ ವ್ಯವಸ್ಥೆಯಲ್ಲೇ ಇವೆ ಎಂದು ಒಪ್ಪಿಕೊಂಡಿದ್ದಾರೆ.

ವಾಹನಗಳು ಸರಿಯಾದ ಸಮಯಕ್ಕೆ ತಲುಪದ ಕಾರಣ ಜನರು ರಸ್ತೆ ಬದಿಯಲ್ಲಿ (GPS tracking in garbage vehicles) ಕಸ ಸುರಿಯುತ್ತಿದ್ದು, ಇದು ಸಾರ್ವಜನಿಕರ ಆರೋಗ್ಯಕ್ಕೆ ಹಾನಿಕಾರಕವಾಗುವುದರ ಜೊತೆಗೆ ನಗರದ ಸೌಂದರ್ಯಕ್ಕೂ ಧಕ್ಕೆ ತರುತ್ತಿದೆ.

ಈ ಸಮಸ್ಯೆಯನ್ನು ತಡೆಗಟ್ಟಲು ಕಸದ ವಾಹನಗಳು ನಿಗದಿತ ಸಮಯಕ್ಕೆ ಮನೆ ಮನೆಗೆ ಹೋಗಿ ಕಸ ಸಂಗ್ರಹಿಸದಿದ್ದರೆ, ಸಂಬಂಧಪಟ್ಟ ಅಧಿಕಾರಿಗಳ ಮೇಲೆಯೇ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಇದೇ ವೇಳೆ ಸಾರ್ವಜನಿಕರ ಜವಾಬ್ದಾರಿಯನ್ನು ನೆನಪಿಸಿದ ಸಚಿವರು, ಕಸ ನಿರ್ವಹಣೆ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ, ಅದಕ್ಕೆ ನಾಗರಿಕರ ಸಹಕಾರವೂ ಅಷ್ಟೇ ಮುಖ್ಯ

ಎಂದಿದ್ದಾರೆ. ವಾಹನಗಳು ಬರುವ ನಿರ್ದಿಷ್ಟ ಸಮಯವನ್ನು ಮುಂಚಿತವಾಗಿಯೇ ತಿಳಿಸಲಾಗುತ್ತದೆಯಾದ್ದರಿಂದ, ಸಾರ್ವಜನಿಕರು ಆ ಸಮಯಕ್ಕೆ ಸರಿಯಾಗಿ ಕಸವನ್ನು ನೀಡಬೇಕು.

ಸರ್ಕಾರ ಎಷ್ಟು ಬಾರಿ ಜಾಗೃತಿ ಮೂಡಿಸಿದರೂ ಇಂದಿಗೂ ಶೇ. 40 ರಷ್ಟು ಜನ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸದೆ ಹಾಗೆಯೇ ನೀಡುತ್ತಿದ್ದಾರೆ. ಸದ್ಯ ನಗರದ ಕೆಲವು ಭಾಗಗಳಲ್ಲಿ ಕಸ ವಿಂಗಡಣೆ ಪ್ರಮಾಣ ಶೇ. 65 ರಿಂದ ಶೇ. 80 ರಷ್ಟಿದ್ದರೆ, ಇನ್ನು ಕೆಲವು ಕಡೆ ಅದು ಕೇವಲ ಶೇ. 45 ರಷ್ಟು ಮಾತ್ರ ಇದೆ.

ಇನ್ನು ಮುಂದೆ ನಿಯಮ ಮೀರಿ ವಿಂಗಡಿಸದ ಕಸವನ್ನು ಸಂಗ್ರಹಿಸಿದರೆ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಕೊನೆಯದಾಗಿ, ಬೆಂಗಳೂರಿನ ಕಸದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವರು, ಶೀಘ್ರದಲ್ಲೇ ತಾವೇ ಸ್ವತಃ ನಗರದ ವಿವಿಧ ಪ್ರದೇಶಗಳಲ್ಲಿ ಪರಿಶೀಲನೆ

ನಡೆಸಲಿದ್ದಾರೆ. ಎಲ್ಲಿ ಕಸ ಸಂಗ್ರಹಣೆ ಸರಿಯಾಗಿ ನಡೆಯುತ್ತಿಲ್ಲವೋ ಅಲ್ಲಿನ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಕಸ ಸಂಗ್ರಹಣೆಯಲ್ಲಿ ಯಾವುದೇ ರೀತಿಯ ಅನಿಯಮಿತತೆ ಕಂಡುಬಂದರೂ ಬಿಎಸ್‌ಡಬ್ಲ್ಯುಎಂಎಲ್ (BSWML) ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು

ಎಚ್ಚರಿಸಿರುವ ಸಚಿವರು, ಸಾರ್ವಜನಿಕರೂ ಸಹ ತಮ್ಮ ಭಾಗದಲ್ಲಿ ಇಂತಹ ಸಮಸ್ಯೆಗಳಿದ್ದರೆ ಅದನ್ನು ಅಧಿಕಾರಿಗಳ ಗಮನಕ್ಕೆ ತಂದು ವರದಿ ಮಾಡಬೇಕೆಂದು ವಿನಂತಿಸಿದ್ದಾರೆ.

ಇದನ್ನು ಓದಿ : https://vijayatimes.com/telegram-ban-till-neet-exam/

Tags: garbageGPSgps trackingstategovernmentvehicle

Related News

ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್‌ಗಳಿಗೆ ಬ್ರೇಕ್‌: ಕಠಿಣ ಕಾನೂನು ಜಾರಿ, 1 ವರ್ಷ ಜಾಮೀನು ರಹಿತ ಜೈಲು
ಪ್ರಮುಖ ಸುದ್ದಿ

ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್‌ಗಳಿಗೆ ಬ್ರೇಕ್‌: ಕಠಿಣ ಕಾನೂನು ಜಾರಿ, 1 ವರ್ಷ ಜಾಮೀನು ರಹಿತ ಜೈಲು

July 16, 2026
ಭೂಮಿ ಬಲವಂತವಾಗಿ ಪಡೆಯುವುದಿಲ್ಲ ಎನ್ನುವುದಷ್ಟೇ ಸಾಕಾಗುವುದಿಲ್ಲ: ಬಿಡದಿ ಟೌನ್‌ಶಿಪ್ ಯೋಜನೆ ರದ್ದುಗೊಳಿಸುವಂತೆ ರೈತರ ಒತ್ತಾಯ
ಪ್ರಮುಖ ಸುದ್ದಿ

ಭೂಮಿ ಬಲವಂತವಾಗಿ ಪಡೆಯುವುದಿಲ್ಲ ಎನ್ನುವುದಷ್ಟೇ ಸಾಕಾಗುವುದಿಲ್ಲ: ಬಿಡದಿ ಟೌನ್‌ಶಿಪ್ ಯೋಜನೆ ರದ್ದುಗೊಳಿಸುವಂತೆ ರೈತರ ಒತ್ತಾಯ

July 16, 2026
ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ
ಪ್ರಮುಖ ಸುದ್ದಿ

ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ

July 15, 2026
ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ
Sports

ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

July 15, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.