Bengaluru: ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ (Graduated primary teachers strike) ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ನೇಮಕಾತಿ ಆದೇಶ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ
ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಕುಳಿತಿದ್ದಾರೆ.ರಾಜ್ಯದ ಮೂಲೆ ಮಲೆಗಳಿಂದ ಆಗಮಿಸಿರುವ ಶಿಕ್ಷಕರು ಸರ್ಕಾರದ ವಿರುದ್ಧ ವಿಧಾನಸಭೆ ಕಲಾಪ ಆರಂಭವಾಗುತ್ತಿರುವ ಸಂದರ್ಭದಲ್ಲಿಯೇ ಘೋಷಣೆ ಕೂಗುತ್ತಿದ್ದಾರೆ.
ಇನ್ನೂ ಕೂಡ ಸ್ಥಳ ನಿಯುಕ್ತಿ ಮತ್ತು ನೇಮಕಾತಿ ಆದೇಶ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ನೇಮಕವಾದ ಅಭ್ಯರ್ಥಿಗಳಿಗೆ ಸಿಕ್ಕಿಲ್ಲ.

2022ರ ಮೇ ತಿಂಗಳಿನಲ್ಲಿ ಸುಮಾರು 70 ಸಾವಿರ ಅಭ್ಯರ್ಥಿಗಳು ನಡೆದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಪರೀಕ್ಷೆಯನ್ನು ಬರೆದಿದ್ದರು. 13352 ಅಭ್ಯರ್ಥಿಗಳು ಅದರಲ್ಲಿ ಆಯ್ಕೆಯಾಗಿದ್ದಾರೆ.
ಆದರೆ ನೇಮಕದ ವಿಷಯದ ಆಧಾರದಲ್ಲಿ ಕೆಲವು ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗಿದ್ದರ ಪರಿಣಾಮ ಉಳಿದವರ ನೇಮಕಾತಿ ವಿಳಂಬವಾಗುತ್ತಿದೆ. ನೇಮಕಗೊಂಡಿರುವ 13 ಸಾವಿರ ಅಭ್ಯರ್ಥಿಗಳಿಗೆ
ಯಾವುದೇ ಕಾನೂನು ತೊಡಕು ಇಲ್ಲದಿದ್ದರೂ ತೊಂದರೆಯಾಗುತ್ತಿದ್ದು ಈ ಕೂಡಲೇ ನೇಮಕದ ಪ್ರಕ್ರಿಯೆ ವುರುಕುಗೊಳಿಸಬೇಕು ಎನ್ನುವ ಬೇಡಿಕೆ ಮುಂದಿಟ್ಟಿದ್ದಾರೆ.
ಇತ್ತ ಖಾಸಗಿ ಸಂಸ್ಥೆಗಳಲ್ಲಿಯೂ ಕೆಲಸ ಇಲ್ಲ
ಹಲವಾರು ಸಮಸ್ಯೆಗಳನ್ನು ಈ ನೇಮಕಾತಿ ವಿಳಂಬದಿಂದ ಎದುರಿಸಬೇಕಾಗಿದೆ. ಖಾಸಗಿ ಸಂಸ್ಥೆಗಳಲ್ಲಿ ಬಹುಪಾಲು ಅಭ್ಯರ್ಥಿಗಳು ಕೆಲಸ ಮಾಡುತ್ತಿದ್ದಾರೆ.ಖಾಸಗಿ ಸಂಸ್ಥೆಗಳು ನೇಮಕಾತಿ ಪಟ್ಟಿಯಲ್ಲಿ ನಮ್ಮ
ಹೆರಿಸುವುದರಿಂದ ಕೆಲಸದಿಂದ ಕೈಬಿಡುತ್ತಿದ್ದಾರೆ ಆದ್ದರಿಂದ ನಮ್ಮ ಪರಿಸ್ಥಿತಿ ಅಂತ್ರರಾಗುವ ಸ್ಥಿತಿ ಇದೆ ಎಂದು ಪ್ರತಿಭಟನಾನಿರತ ಶಿಕ್ಷಕರು ಈ ಬಗ್ಗೆ ನೋವು ತೋಡಿಕೊಂಡರು

ದಾಖಲಾತಿಗಳ ಪರಿಶೀಲನೆ ಕಾರಣಕ್ಕೆ ಮೂಲ
ಬೇರೆ ಕಡೆ ಉದ್ಯೋಗ ಹುಡುಕಲು ಈಗಾಗಲೇ ಇಲಾಖೆಗೆ ಎಲ್ಲಾ ದಾಖಲಾತಿಗಳನ್ನು ಕೊಟ್ಟಿರುವುದರಿಂದ ಸಾಧ್ಯವಾಗುತ್ತಿಲ್ಲ. ಅಷ್ಟೇ ಅಲ್ಲದೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಚುನಾವಣೆ ಹತ್ತಿರದಲ್ಲಿದ್ದು
ಮತ್ತು ನೀತಿ ಸಂಹಿತೆ ಜಾರಿಯಾಗುವ ಆತಂಕವೂ ಕೂಡ ನಮ್ಮನ್ನು ಕಾಡುತ್ತಿದೆ (Graduated primary teachers strike) ಎಂದರು.
ಕಲಾಪದ ಸಂದರ್ಭದಲ್ಲಿಯೇ ಮುಷ್ಕರ
ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಸರ್ಕಾರ ವಿಧಾನಸಭೆ ಚುನಾವಣಾ ಫಲಿತಾಂಶದ ನಂತರ ಅಸ್ತಿತ್ವಕ್ಕೆ ಬಂದಿದ್ದು ವಿಧಾನಸಭೆ ಕಲಾಪ ಆರಂಭವಾಗಿದೆ. ಸರ್ಕಾರದ ಮೇಲೆ ಒತ್ತಡ ಹೇರಲು
ಶಿಕ್ಷಕರು ಇದೇ ಸಂದರ್ಭದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಕುಳಿತಿದ್ದಾರೆ
ಜಾತಿ ಸಿಂಧುತ್ವ ಸಾಮಾನ್ಯ ವರ್ಗದವರಿಗೂ ಸಹ ಬೇಕೆ?
ಜಾತಿ ಮತ್ತು ಆದಾಯ ಸಿಂಧುತ್ವವನ್ನು ಸಾಮಾನ್ಯ ವರ್ಗದಲ್ಲಿ ಆಯ್ಕೆಯಾದವರಿಗೂ ಕೇಳುತ್ತಿರುವುದು ಯಾವ ನ್ಯಾಯ? ನಮ್ಮ ಮಕ್ಕಳ ಶಿಕ್ಷಣಕ್ಕೂ ಕೂಡ ವಿಳಂಬವಾಗಿ ನೇಮಕಾತಿ ಆದೇಶ ನೀಡಿದರೆ
ಸಮನಸ್ಯೆಯಾಗುತ್ತಿದ್ದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಈ ಕೂಡಲೇ ಪರಿಹಾರ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.
ರಶ್ಮಿತಾ ಅನೀಶ್