ಬೆಂಗಳೂರು, ಡಿ. 12: ರಾಜ್ಯದಲ್ಲಿ ಎರಡು ದಿನಗಳಿಂದ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಹಾಗಾದರೆ ನೀವು ಏನ್ ಮಾಡ್ತಾ ಇದ್ದೀರಿ? ಎಂಬುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ವಿರುದ್ಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗರಂ ಆಗಿದ್ದಾರೆ.
ಸಾರಿಗೆ ನೌಕರರ ಪ್ರತಿಭಟನೆ ಹಿನ್ನಲೆಯಲ್ಲಿ ತಮ್ಮ ನಿವಾಸಕ್ಕೆ ಕರೆಸಿಕೊಂಡ ಅವರು, ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಇಂದು ಕೂಡ ಮುಂದುವರೆದಿದೆ. ಇಂತಹ ನೌಕರರೊಂದಿಗೆ ಮಾತುಕತೆ ನಡೆಸಿ, ಮುಷ್ಕರ ಕೈಬಿಡುವತ್ತ ಕ್ರಮ ಕೈಗೊಳ್ಳುವ ಬದಲು, ನೀವ್ ಏನ್ ಮಾಡ್ತಾ ಇದ್ದೀರಿ ಎಂಬುದಾಗಿ ಗರಂ ಆಗಿ ಹೇಳಿದ್ದಾರೆ. ಅಲ್ಲದೇ ಶೀಘ್ರವೇ ಮುಷ್ಕರ ನಿರತರೊಂದಿಗೆ ಮಾತಕತೆ ನಡೆಸಿ, ಸರಿ ಪಡಿಸುವಂತೆಯೂ ಸೂಚಿಸಿದ್ದಾರೆ.