ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಕಾಂಗ್ರೆಸ್ ಮುಖಂಡ

ಬೆಂಗಳೂರು, ಡಿ. 14: ಇತ್ತೀಚಿಗೆ ನಡೆದ ಉಪ ಚುನಾವಣೆಯಲ್ಲಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ತಟಸ್ಥವಾಗಿದ್ದ ಜೆಡಿಎಸ್ ಇದೀಗ ತನ್ನ ಕಾರ್ಯಚಟುವಟಿಕೆ ಆರಂಭಿಸಿದೆ.

ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟಿಸುವ ಚಿಂತನೆ ನಡೆಸಿರುವ ಜೆಡಿಎಸ್ ನಾಯಕರು, ರಾಜಕೀಯ ಕಸರತ್ತಿಗೆ ಮುಂದಾಗಿದ್ದಾರೆ. ಜೆಡಿಎಸ್​​​ನಲ್ಲೂ ಬದಲಾವಣೆ ಗಾಳಿ ಬೀಸುತ್ತಿದ್ದು, ಈ ಎಲ್ಲಾ ಬೆಳವಣಿಗೆಯ ಬೆನ್ನಲ್ಲೇ ಮಾಜಿ ಕೇಂದ್ರ ಸಚಿವ ಮತ್ತು ವಿಧಾನ ಪರಿಷತ್​​ ಕಾಂಗ್ರೆಸ್‌ ಸದಸ್ಯ ಸಿ.ಎಂ.ಇಬ್ರಾಹಿಂ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ಆಹ್ವಾನದ ಮೇರೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರ ನಿವಾಸದಲ್ಲಿ ಭೇಟಿಯಾದ ಇಬ್ರಾಹಿಂ, ಮಾತುಕತೆ ನಡೆಸಿದರು. ಜೊತೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ಇದ್ದರು.

Exit mobile version