ಸಿದ್ದರಾಮಯ್ಯ ಹುಣಸೂರಿನಿಂದ ಸ್ಪರ್ಧಿಸಿದ್ರೆ ಗೆಲ್ಲಿಸಿ ಕಳುಹಿಸುತ್ತೇವೆ : ಎಚ್. ವಿಶ್ವನಾಥ್!

siddaramaiah

ಮಾಜಿ(Former) ಸಿಎಂ(CM) ಸಿದ್ದರಾಮಯ್ಯ(Siddaramaiah) ಅವರು ನಮ್ಮ ಹುಣಸೂರು(Hunsuru) ವಿಧಾನಸಭಾ(Vidhansabha) ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಅವರನ್ನು ಗೆಲ್ಲಿಸಿ ಕಳುಹಿಸುತ್ತೇವೆ.

ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು ಎಂದು ಬಿಜೆಪಿ ಎಂ.ಎಲ್‍.ಸಿ ಎಚ್. ವಿಶ್ವನಾಥ್(H Vishwanath) ಹೇಳಿದರು. ಮೈಸೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಯಶಸ್ವಿಯಾಗಿ ಐದು ವರ್ಷ ಆಡಳಿತ ನಡೆಸಿದವರು. ಹೀಗಾಗಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಅವರನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸುತ್ತೇವೆ.

ಶೆಟ್ರ ಮಂಜನನ್ನೇ ನಾವು ಹುಣಸೂರಿನಲ್ಲಿ ಗೆಲ್ಲಿಸಿದ್ದೇವೆ. ಇನ್ನು ಸಿದ್ದರಾಮಯ್ಯ ಅವರನ್ನು ಗೆಲ್ಲಿಸುವುದಿಲ್ವಾ? ಎಂದು ಪ್ರಶ್ನಿಸಿದ್ರು. ಇನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡಬೇಡಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಬಿ.ಎಸ್ ಯಡಿಯೂರಪ್ಪನವರು ಪತ್ರ ಬರೆದಿರುವುದರ ಕುರಿತು ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಮ್ಮ ಹೆಸರು ಬೇಡ ಎಂದು ಯಡಿಯೂರಪ್ಪನವರು ಸರ್ಕಾರಕ್ಕೆ ಪತ್ರ ಬರೆದಿರುವುದು ಅವರ ದೊಡ್ಡ ಗುಣ. ಯಡಿಯೂರಪ್ಪನವರ ಹೆಸರಿಗಿಂತ ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನು ಅನೇಕ ಮಹಾನ್ ವ್ಯಕ್ತಿಗಳು ಹುಟ್ಟಿ ಬೆಳೆದಿದ್ದಾರೆ.

ಕುವೆಂಪು ಅವರಂತ ಮಹಾನ್ ಚೇತನ ಶಿವಮೊಗ್ಗ ಜಿಲ್ಲೆಯಲ್ಲಿಯೇ ಜನ್ಮ ತಳೆದದ್ದು, ಅವರ ಹೆಸರನ್ನು ಘೋಷಿಸದೆ ಸರ್ಕಾರ ಏನೇನೋ ಮಾಡ್ತಾ ಇದೆ. ಇಂತ ಗಿಮಿಕ್ ಮಾಡುವುದನ್ನ ನಿಲ್ಲಿಸಬೇಕು. ಬಿ.ಎಸ್ ಯಡಿಯೂರಪ್ಪ ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಟ್ಟರೆ ವೋಟ್ ಬರಲ್ಲ ಎಂದು ಬಿಜೆಪಿ ಸರ್ಕಾರದ ಕ್ರಮವನ್ನು ಖಂಡಿಸಿದರು.

Exit mobile version