ಬೆಂಗಳೂರು ನ 25 : ನನ್ನ ಹೇಳಿಕೆಯಲ್ಲಿ ಯಾವ ಉದ್ದೇಶವು ಇರಲಿಲ್ಲ. ಮಾತನಾಡುವ ಬರದಲ್ಲಿ ಹಾಗೆ ಹೇಳಿಬಿಟ್ಟೆ. ಯಾಕೆ ಹಾಗೆ ಹೇಳಿದೆನೋ ಗೊತ್ತೆ ಆಗಲಿಲ್ಲ ಎಂದು ಹಂಸಲೇಖ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.
ಪೇಜಾವರ ಶ್ರೀಗಳ ವಿರುದ್ಧ ಹೇಳಿಕೆ ನೀಡಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಇಂದು ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಈ ವೇಳೆ ನನ್ನ ಹೇಳಿಕೆಗೆ ನನ್ನ ಹೆಂಡತಿಯೇ ಬೇಸರ ವ್ಯಕ್ತಿಪಡಿಸಿದರು. ನನ್ನ 70 ವರ್ಷದ ಜೀವನದಲ್ಲಿ ಎಂದಿಗೂ ಹೀಗೆ ಮಾಡಿಕೊಂಡಿರಲಿಲ್ಲ. ತಪ್ಪಾಗಿದೆ ತನ್ನ ಹೇಳಿಕೆಯಿಂದ. ಯಾವ ಧರ್ಮ, ಜಾತಿಯನ್ನು ನಿಂದಿಸುವ ಉದ್ದೇಶ ಇರಲಿಲ್ಲ. ಈ ಘಟನೆಯಿಂದ ನನಗೆ ತುಂಬಾ ನೋವಾಗಿದೆ.
ನನ್ನ ಕೆಲಸದಲ್ಲಿಯೂ ನನಗೆ ಸೆಟ್ಬ್ಯಾಕ್ ಆಗಿದೆ. ನಾನು ಈ ಘಟನೆಯಿಂದ ತುಂಬಾ ನೋವು ಅನುಭವಿಸಿದ್ದೇನೆ ಎಂದು ತನಿಖಾಧಿಕಾರಿ ಮುಂದೆ ಬೇಸರ ವ್ಯಕ್ತಪಡಿಸಿದ್ದಾರೆ.