ಉತ್ತರಾಖಂಡ್, ಏ. 06: ದೇಶದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ಹರಸಾಹಸ ನಡೆಸುತ್ತಿದೆ. ಈ ನಡುವೆ ಸೋಂಕಿನ ಹರಡುವಿಕೆಗೆ ಕುಂಭ ಮೇಳವು ಕಾರಣವಾಗುವ ಸಾಧ್ಯತೆ ಇದೆ ಎಂದು ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳ ತಂಡ ತಿಳಿಸಿದೆ. ಉತ್ತರಾಖಂಡದ ಹರಿದ್ವಾರದಲ್ಲಿ ಏಪ್ರಿಲ್ 1ರಿಂದ ಕುಂಭ ಮೇಳ ನಡೆಯುತ್ತಿದ್ದು, ಇದು ಕೊರೋನಾ ಮತ್ತಷ್ಟು ಹರಡುವಿಕೆಗೆ ಕಾರಣವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕುಂಭ ಮೇಳವೂ ಕೊರೋನಾ ಸೂಪರ್ ಸ್ಪ್ರೆಡರ್ ಆಗಬಹುದಾಗಿದೆ. ಈ ಹಿನ್ನಲೆ ನಿಗದಿಗೂ ಮೊದಲೇ ಕಾರ್ಯಕ್ರಮವನ್ನು ಮುಗಿಸುವುದು ಒಳಿತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಧಿಕಾರಿಗಳು ಎಂದು ಎಎನ್ಐ ವರದಿ ಮಾಡಿದೆ. ಇನ್ನು ಏಪ್ರಿಲ್ 1 ರಿಂದ ಆರಂಭವಾಗಿರುವ ಈ ಕುಂಭಮೇಳ ಇದೇ ಏಪ್ರಿಲ್ 30ರವರೆಗೆ ನಡೆಯಲಿದೆ.