ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarakiholi) ಅವರು ತಮ್ಮ ವಿರುದ್ಧ (HC against Kar Govt) ಎದುರಾಗಿರುವ ಬ್ಯಾಂಕ್ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ
ದಾಖಲಾಗಿರುವ ದೂರು ಮತ್ತು ಎಫ್ಐಆರ್ ರದ್ದುಗೊಳಿಸಲು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ #KarnatakaHighcourt ರಾಜ್ಯ ಸರ್ಕಾರಕ್ಕೆ ಶುಕ್ರವಾರ
(ಜ.19) ನೋಟಿಸ್ ಜಾರಿ ಮಾಡಿದೆ ಎಂದು (HC against Kar Govt) ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.
ರಮೇಶ್ ಜಾರಕಿಹೊಳಿ ಅವರು ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಬಡ್ಡಿಯ ಹಣ ಸೇರಿ ಬರೋಬ್ಬರಿ ₹439 ಕೋಟಿ ರೂಪಾಯಿ ಪಾವತಿಸದೇ ವಂಚಿಸಿರುವ ಆರೋಪವನ್ನು
ಎದುರಿಸುತ್ತಿದ್ದಾರೆ.
ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ (Krishna S Dikshith) ಅವರ ನೇತೃತ್ವದಲ್ಲಿ ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ಗೆ ₹439 ಕೋಟಿ ಸಾಲ ಪಾವತಿಸದೇ
ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ (Soubhagya Sugars Limited) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್ ಜಾರಕಿಹೊಳಿ, ಮತ್ತಿಬ್ಬರು ನಿರ್ದೇಶಕರಾಗಿದ್ದ
ವಸಂತ್ ಪಾಟೀಲ್ ಮತ್ತು ಶಂಕರ್ ಪವಾಡೆ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಏಕಸದಸ್ಯ ಪೀಠ ನಡೆಸಿತು.
ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ (Bank Limited) ಮತ್ತು ರಾಜ್ಯ ಸರ್ಕಾರಕ್ಕೆ ವಾದ ಆಲಿಸಿದ ನ್ಯಾಯ ಏಕ ಸದಸ್ಯ ಪೀಠವು ನೋಟಿಸ್ ಜಾರಿ ಮಾಡಿದೆ.
ಏನಿದು ಪ್ರಕರಣ?
ಬೆಳಗಾವಿಯ (Belgaum) ಗೋಕಾಕ್ನಲ್ಲಿರುವ ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್ನಲ್ಲಿ ಯಂತ್ರೋಪಕರಣ ಅಳವಡಿಕೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್
ಬ್ಯಾಂಕ್ ಲಿಮಿಟೆಡ್ ಮತ್ತು ಅದರ ಸಮೂಹದ ಬ್ಯಾಂಕ್ಗಳಲ್ಲಿ ಅವಧಿ ಸಾಲ, ದುಡಿಯುವ ಬಂಡವಾಳದ ರೂಪದಲ್ಲಿ 12.07.2013 ರಿಂದ 31.03.2017ರ ಅವಧಿಯಲ್ಲಿ ₹232.88 ಕೋಟಿ ಸಾಲ
ಪಡೆಯಲಾಗಿತ್ತು. ಇದು ಬಡ್ಡಿ ಸೇರಿ ₹439.7 ಕೋಟಿಗೆ ಏರಿಕೆಯಾಗಿದ್ದರೂ ಪಾವತಿಸಿರಲಿಲ್ಲ.
ಸಾಲ ಪಡೆಯುವ ಸಂದರ್ಭದಲ್ಲಿ ಶುಗರ್ ಕಂಪೆನಿಯಲ್ಲಿ ರಮೇಶ್ ಜಾರಕಿಹೊಳಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ವಸಂತ್ ಮತ್ತು ಶಂಕರ್ (Vasanth and Shankar) ಅವರು ನಿರ್ದೇಶಕರಾಗಿದ್ದರು.
ಸಾಲ ಇರುವ ಸಂದರ್ಭದಲ್ಲಿ ನಿರ್ದೇಶಕರನ್ನು ಬದಲಿಸುವಂತಿಲ್ಲ ಎಂಬ ಷರತ್ತು ವಿಧಿಸಲಾಗಿತ್ತು. ಆದರೆ, ಅರ್ಜಿದಾರರು ಕಂಪೆನಿಯ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದು, ಸಂಬಂಧಪಡದ ವ್ಯಕ್ತಿಗಳನ್ನು
ಆ ಹುದ್ದೆಗಳಿಗೆ ನೇಮಿಸಲಾಗಿದೆ.
ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ನ (Apex Bank Limited) ವ್ಯವಸ್ಥಾಪಕ ನಿರ್ದೇಶಕರು ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿಲ್ಲ ಎಂದು ಜನವರಿ 5ರಂದು ನೀಡಿದ
ದೂರಿನ ಅನ್ವಯ ಬೆಂಗಳೂರಿನ ವಿ ವಿ ಪುರಂ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ (IPC Section)ಗಳಾದ 406,420&34ರ ಅಡಿ ಪ್ರಕರಣ ದಾಖಲಾಗಿದೆ.
- ಭವ್ಯಶ್ರೀ ಆರ್ ಜೆ