ಗನ್​ಮ್ಯಾನ್​ನಿಂದ ಶೂ ಹಾಕಿಸಿಕೊಂಡ ಮಹದೇವಪ್ಪ; ಸಂವಿಧಾನದ ಪೀಠಿಕೆಯನ್ನು ದಿನವೂ ಓದಿ ಎಂದ ಯತ್ನಾಳ್

Bengaluru : ಸಚಿವ ಎಚ್.ಸಿ.ಮಹದೇವಪ್ಪ ಅವರು ಗನ್ಮ್ಯಾನ್ನಿಂದ ಶೂ ಹಾಕಿಸಿಕೊಂಡಿರುವ ಘಟನೆಯನ್ನು ಟೀಕಿಸಿರುವ (HCMahadevappa vs Basanagouda Patil) ಬಿಜೆಪಿ ಶಾಸಕ

ಬಸವನಗೌಡ ಪಾಟೀಲ್ ಯತ್ನಾಳ್ ಅವರು, ವ್ಯಕ್ತಿ ಗೌರವಕ್ಕೆ ಧಕ್ಕೆ ತರುವ ನಿಮ್ಮ ಈ ಕಾರ್ಯವನ್ನು ನಾನಲ್ಲ ನಾಗರಿಕ ಸಮಾಜ ಎಂದಿಗೂ ಕ್ಷಮಿಸುವುದಿಲ್ಲ. ಎಲ್ಲರಿಗೂ ಸಂವಿಧಾನದ ಪಾಠ

ಮಾಡುವ ತಾವು ಸಂವಿಧಾನದ ಪೀಠಿಕೆಯನ್ನು ದಿನವೂ ತಾವು ಒಮ್ಮೆ ಓದಬೇಕಾಗಿ ತಮ್ಮಲ್ಲಿ “ಕಳ-ಕಳಿಯ” ವಿನಂತಿ. ವಿಪಕ್ಷ ನಾಯಕನ ಸ್ಥಾನಕ್ಕೂ ಈ ನಿಮ್ಮ ಕಾರ್ಯಕ್ಕೂ ಯಾವುದೇ ಸಂಬಂಧವಿಲ್ಲ,

ನಿಮ್ಮ ಈ ತಪ್ಪನ್ನು ತೇಪೆ ಹಚ್ಚಲು ಪ್ರಯತ್ನ ಪಡಬೇಡಿ. ಸಂವಿಧಾನದ ಆಶಯಗಳ ವಿರುದ್ದ ಈ (HCMahadevappa vs Basanagouda Patil) ನಿಮ್ಮ ಕಾರ್ಯದ ಬಗ್ಗೆ ಕ್ಷಮೆ ಯಾಚಿಸಿ ಎಂದಿದ್ದಾರೆ.

ಇನ್ನೊಂದು ಟ್ವೀಟ್ನಲ್ಲಿ, ಮಾನ್ಯ ಶ್ರೀ ಮಹದೇವಪ್ಪನವರೇ. ಇಷ್ಟು ಆರೋಗ್ಯ ಸಮಸ್ಯೆ ಇರುವವರು ಮನೆಯಲ್ಲಿ ವಿಶ್ರಾಂತಿ ಪಡೆಯಿರಿ. ಯಾವ ವ್ಯಕ್ತಿ ಗೌರವದ ಬಗ್ಗೆ ಮಾತನಾಡುತ್ತಿದ್ದಿರಿ? ವಿವಾದವಾಗಿದ್ದು

ದುರದೃಷ್ಟಕರವಲ್ಲ ನಿಮ್ಮಂತಹ ನಾಟಕೀಯ ಮಜವಾದಿಗಳು ಸಮಾಜವಾದದ ಬಗ್ಗೆ ಮಾತನಾಡುವುದು ದುರದೃಷ್ಟಕರ ಎಂದು ಲೇವಡಿ ಮಾಡಿದ್ದಾರೆ.

ಶಾಸಕ ಯತ್ನಾಳ್ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಸಚಿವ ಎಚ್.ಸಿ.ಮಹದೇವಪ್ಪ ಅವರು, ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗ ರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ

ಪಡೆದಿರುವುದು ದುರದೃಷ್ಟಕರ ಬೆಳವಣಿಗೆ. ವೈಯಕ್ತಿಕವಾಗಿ ವ್ಯಕ್ತಿ ಗೌರವ ಮತ್ತು ಘನತೆಯಲ್ಲಿ ನಂಬಿಕೆ ಇಟ್ಟಿರುವ ನನಗೆ ಒಬ್ಬರಿಂದ ಶೂ ಹಾಕಿಸಿಕೊಳ್ಳಬೇಕೆಂಬ ದರ್ಪದ ಇರಾದೆ ಇಲ್ಲ. ಆದರೆ ಹಿಂದೆ

Hip joint knee ತೊಂದರೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ಸಂದರ್ಭದಿಂದ ಬಾಗುವುದು ಕಷ್ಟವಾಗಿದ್ದ ಕಾರಣ ನಮ್ಮ ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ ಬಹು ವರ್ಷಗಳ ಕಾಲ ನನ್ನೊಡನೆಯೇ

ಒಂದು ಕುಟುಂಬದಂತೆ ಇರುವ ನಮ್ಮ ಕೆಲ ಸಿಬ್ಬಂದಿಗಳ ಬಳಿ ಕಾಲಿನ ಸಮಸ್ಯೆಯ ಹಿನ್ನಲೆಯಲ್ಲಿ ಪಡೆದುಕೊಂಡಿರುವ ಈ ಸಹಾಯಕ್ಕೆ ಮಾನವೀಯ ನೆಲೆ ಇದೆ ಸಹಾಯಕ್ಕೆ ಅಂಹಕಾರ, ಅಧಿಕಾರದ

ಅಮಲು ಎಂಬ ಶಬ್ದಗಳನ್ನು ಬಳಸುವುದು ಸರಿಯಾದ ಕ್ರಮವಲ್ಲ. ಇನ್ನು ನನ್ನನ್ನು ಬಲ್ಲ ಎಲ್ಲರಿಗೂ ವ್ಯಕ್ತಿ ಗೌರವಕ್ಕೆ ಸಂಬಂಧಿಸಿದ ನನ್ನ ನಿಲುವುಗಳ ಬಗ್ಗೆ ಚೆನ್ನಾಗಿಯೇ ತಿಳಿದಿರುವ ಕಾರಣ ಇಂತಹ ಸಣ್ಣಪುಟ್ಟ

ವಿವಾದಗಳಿಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ. ಸಹಾಯಕ್ಕಾಗಿ ನನ್ನ ಅಂಗರಕ್ಷಕನಿಗೆ ಧನ್ಯವಾದಗಳು ಯತ್ನಾಳ್ ಅವರೇ, ಮಾನವೀಯ ಸಹಾಯದ ವಿಷಯದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ.

ನಿಮ್ಮ ಈ ರೋಷಾವೇಷವನ್ನು, ನಿಮ್ಮ ಹೈಕಮಾಂಡ್ ಮುಂದೆ ರಾಜ್ಯಕ್ಕೊಬ್ಬ ವಿಪಕ್ಷೀಯ ನಾಯಕನ ಸ್ಥಾನವನ್ನು ಆರಿಸುವುದಕ್ಕಾಗಿ ಬಳಸಿಕೊಳ್ಳಿ. ಇಲ್ಲವೇ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ

ತೆರಿಗೆ ಪಾಲನ್ನು ಕೇಳುವುದಕ್ಕಾದರೂ ಬಳಸಿ. ಸುಮ್ಮನೇ ಕಾಲಹರಣ ಮಾಡಬೇಡಿ ಎಂದಿದ್ದಾರೆ.

ಇದನ್ನು ಓದಿ: ಜನಸಂಖ್ಯೆ ನಿಯಂತ್ರಣ ಕುರಿತು ಬಿಹಾರ ಸಿ.ಎಂ ಅಸಂಸ್ಕೃತ ಹೇಳಿಕೆ: ಕ್ಷಮೆಯಾಚಿಸಿದ ನಿತೀಶ್ ಕುಮಾರ್

Exit mobile version