ಪಾದಯಾತ್ರೆಯಿಂದ ಸಮಸ್ಯೆ ಪರಿಹಾರವಾಗುವುದಾದರೆ ನಾನೇ ಮುಂಚೂಣಿಯಲ್ಲಿರುತ್ತೇನೆ – ಹೆಚ್‌ಡಿಕೆ

ಬೆಂಗಳೂರು : ಪಾದಯಾತ್ರೆಯಿಂದಾಗಿ ಮೇಕೆದಾಟು ಸನಸ್ಯೆ ಪರಿಹಾರವಾಗುತ್ತದೆ ಎಂದಾದರೆ ನಾನೇ ಎಲ್ಲರಿಗಿಂತ ಮುಂಚೆ ಪಾದಯಾತ್ರೆಗೆ ಭಾಗವಹಿಸುತ್ತೇನೆ ಎಂದು ಹೆಚ್‌ಡಿಕೆ ತಿಳಿಸಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಜನತಾ ಜಲಧಾರೆ” ಕಾರ್ಯಕ್ರಮದಲ್ಲಿ ರಾಜ್ಯವ್ಯಾಪಿ ಜಲ ಸಂಗ್ರಹಕ್ಕೆ ತೆರಳಲಿರುವ ಗಂಗಾ ರಥಯಾತ್ರೆ’ಗೆ ಸಿದ್ಧಪಡಿಸಲಾಗಿದ್ದ ವಾಹನವನ್ನು ಮಾಧ್ಯಮಗಳ ಮುಂದೆ ಅನಾವರಣಗೊಳಿಸಿದ ನಂತರ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಮೇಕೆದಾಟು ಪಾದಯಾತ್ರೆ ಮೂಲಕ ಆ ಯೋಜನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡುತ್ತದೆ ಎಂದು ಕಾಂಗ್ರೆಸ್ಸಿಗರು ನನಗೆ ಗ್ಯಾರಂಟಿ ಕೊಟ್ಟರೆ ನಾನು ಕೂಡ ಎಲ್ಲರಿಗಿಂತ ಮೊದಲೇ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ಪಕ್ಷದ್ದು ಪಾದಯಾತ್ರೆ ಅಲ್ಲ, ಅದು ಮತಯಾತ್ರೆ ಮಾತ್ರ. ಕೇವಲ ಮುಂದಿನ ಚುನಾವಣೆಯಲ್ಲಿ ಮತ ಪಡೆಯುವ ಏಕೈಕ ಉದ್ದೇಶದಿಂದ ಆ ಪಕ್ಷ ಜನರಿಗೆ ಪಾದಯಾತ್ರೆ ಹೆಸರಿನಲ್ಲಿ ಮಂಕುಬೂದಿ ಎರಚುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Exit mobile version