ರೇವಣ್ಣಗೆ ಜಾಮೀನು: ಇದು ಸಂಭ್ರಮ ಪಡುವ ಸಮಯವಲ್ಲ – ಹೆಚ್​ಡಿ ಕುಮಾಸ್ವಾಮಿ!

Bangalore: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣವು ದೇಶದೆಲ್ಲೆಡೆ ಭಾರಿ ಸಂಚಲನ ಮೂಡಿಸಿದ್ದು, ಮತ್ತೊಂದೆಡೆ ಜೆಡಿಎಸ್ (JDS) ಶಾಸಕ ಹೆಚ್​ಡಿ ರೇವಣ್ಣ (HD Revanna) ವಿರುದ್ಧದ ಲೈಂಗಿಕ ದೌರ್ಜನ್ಯ (Sexual assault) , ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರೇವಣ್ಣಗೆ ಜಾಮೀನು (Bail) ದೊರೆತಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ. ಆದರೆ, ರೇವಣ್ಣಗೆ ಜಾಮೀನು ದೊರೆತಿರುವುದರಿಂದ ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದಲ್ಲಿ ಅತ್ಯಂತ ಹೀನಾಯ ಘಟನೆ ನಡೆದಿದೆ. ರೇವಣ್ಣಗೆ (Revanna) ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಬೇಡ. ನಾನು ಸಂತೋಷ ಪಡುತ್ತೇನೆ ಎಂದು ಭಾವಿಸಬೇಡಿ. ಕಾರ್ಯಕರ್ತರು ಸಂಭ್ರಮಿಸುವ ಸಮಯ ಇದಲ್ಲ. ಇದು ರಾಜ್ಯವೇ ತಲೆ ತಗ್ಗಿಸುವ ಘಟನೆ ಎಂದು ಅವರು ಬೆಂಗಳೂರಿನಲ್ಲಿ ಮಾತನಾಡಿದ್ದಾರೆ.

ನಿಮಗೆ ಜನ್ಮಕೊಟ್ಟ ತಂದೆ-ತಾಯಿ (Mother -Father) ಇದ್ದಾರೆ, ಒಡಹುಟ್ಟಿದವರಿದ್ದಾರೆ. ಪೆನ್​​ಡ್ರೈವ್​ ಹಂಚಿದವರ ವಿರುದ್ಧ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಎಸ್​ಐಟಿ ಅಧಿಕಾರಿಗಳಿಗೆ ಹೇಳಲು ಬಯಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ಏಪ್ರಿಲ್ 22ರಂದು ದಾಖಲಾದ ಎಫ್​ಐಆರ್​ಗೆ ಸಂಬಂಧಿಸಿ ಒಬ್ಬರನ್ನೂ ಬಂಧಿಸಿಲ್ಲ. ಎಸ್​ಐಟಿ (SIT) ತನಿಖೆ ವರದಿ ಶಾಸಕರಿಗೆ ಸರಬರಾಜಾಗುತ್ತಿದೆಯಾ? ನಮ್ಮ ರಾಜ್ಯದಲ್ಲಿ ದೊಡ್ಡ ತಿಮಿಂಗಿಲ ಇದೆ. ಆ ತಿಮಿಂಗಲ ಯಾರೆಂದು ರಾಜ್ಯದ ಜನರಿಗೂ ಗೊತ್ತಿದೆ. ನವೀನ್​ ಗೌಡ (Naveen Gowda) ನಮ್ಮ ಪಕ್ಷದವರಿಗೆ ಕೊಟ್ಟೆ ಅಂದಿದ್ದಾನೆ. ನಮ್ಮ ಪಕ್ಷದವರಿಗೆ ಪೆನ್​ಡ್ರೈವ್​ ಕೊಟ್ಟಿದ್ದೆ ಎಂದು ಹೇಳಿದ್ದಾನೆ. ಪ್ರಕರಣದ ತನಿಖೆ (Investigation) ಯಾವ ದಿಕ್ಕಿನಲ್ಲಿ ಹೋಗುತ್ತಿದೆ ನೋಡಿ ಎಂದು ಕುಮಾರಸ್ವಾಮಿ (Kumar Swamy) ಆಕ್ರೋಶ ವ್ಯಕ್ತಪಡಿಸಿದರು.

ರೇವಣ್ಣ (Revanna) ಕುಟುಂಬ ಮುಗಿಸಲು ಪ್ಲ್ಯಾನ್​ ಮಾಡ್ತಿದ್ದೇನಂತೆ. ಹಲವರು ಈ ಬಗ್ಗೆ ಮಾತನಾಡಿಕೊಳ್ತಿದ್ದಾರೆ. ನಾನು ನ್ಯಾಯದ ಪರವಾಗಿ ಇದ್ದೇನೆ. ಇಂತಹ ಘಟನೆ ಮತ್ತೆ ಪುನರಾವರ್ತನೆಯಾಗಬಾರದು. ಯಾವುದೇ ಮುಲಾಜಿಗೆ ಒಳಗಾಗದೇ ತನಿಖೆ ಆಗಬೇಕು. ಮಹಿಳಾ ಸಂತ್ರಸ್ತೆಯರ (female victims) ಪರ ಹೋರಾಟ ಮಾಡುತ್ತೇನೆ. ಪೆನ್​​ಡ್ರೈವ್ ಪ್ರಕರಣ ದೊಡ್ಡಮಟ್ಟದಲ್ಲಿ ನಡೆದಿದೆ. ಇನ್ನೂ ಸಮಯ ಇದೆ, ನಾನು ದುಡುಕಲ್ಲ ಎಂದು ಅವರು ಹೇಳಿದ್ದಾರೆ.

Exit mobile version