• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಡಿ.ಕೆ ಸುರೇಶ್‌ ನೀಡಿದ ವಿವಾದಾತ್ಮಕ ಹೇಳಿಕೆ: ನೋ ಕಮೆಂಟ್ಸ್ ಎಂದ ಹೆಚ್.ಡಿ ದೇವೇಗೌಡ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಡಿ.ಕೆ ಸುರೇಶ್‌ ನೀಡಿದ ವಿವಾದಾತ್ಮಕ ಹೇಳಿಕೆ: ನೋ ಕಮೆಂಟ್ಸ್ ಎಂದ ಹೆಚ್.ಡಿ ದೇವೇಗೌಡ
0
SHARES
113
VIEWS
Share on FacebookShare on Twitter

Delhi: ಕೇಂದ್ರ ಸರ್ಕಾರ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪ ಮಾಡಿದ್ದರು ಅಲ್ಲದೆ, ಉತ್ತರ ಭಾರತ ಮಾತ್ರ ಹೆಚ್ಚಿನ ಅನುದಾನ ಪಡೆಯುತ್ತಿದೆ ಎಂದಿದ್ದರು. ದಕ್ಷಿಣ ಭಾರತದ ರಾಜ್ಯಗಳನ್ನೊಳಗೊಂಡ ಪ್ರತ್ಯೇಕ ದೇಶ ರಚನೆಯಾದರೆ ತಾರತಮ್ಯ ಸರಿ ಹೋಗಬಹುದು ಎಂದು ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D K Shivakumar) ಅವರ ಸಹೋದರ ಡಿ.ಕೆ.ಸುರೇಶ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರು.

JDS

ಸದ್ಯ ಈ ಕುರಿತಾಗಿ ಜೆಡಿಎಸ್ (JDS) ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ (HD Devegowda) ದೆಹಲಿಯಲ್ಲಿ ಮಾತನಾಡಿದ್ದು, ಯಾವ ಉದ್ದೇಶದಲ್ಲಿ ಮಾತನಾಡಿದ್ದಾರೆ ಗೊತ್ತಿಲ್ಲ. ಈ ವಿಷಯದ ಕುರಿತಾಗಿ ಮಾತನಾಡಲು ನನಗೆ ಇಷ್ಟವಿಲ್ಲ ಎಂದಿದ್ದಾರೆ. ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ ಪಕ್ಷ ಕಾಂಗ್ರೆಸ್​​. ದೇಶದಲ್ಲಿ ಸರ್ಕಾರ ನಡೆಸಿದೆ. ಅನ್ಯಾಯವಾದರೆ ನ್ಯಾಯ ಬಜೆಟ್ ಚರ್ಚೆ ವೇಳೆ ಮಾತನಾಡುತ್ತೇವೆ ಎಂದು ನುಡಿದಿದ್ದಾರೆ. ಈ ಹಿಂದೆ ಕೃಷಿ ನೀರಾವರಿಗೆಂದು ಹೆಚ್ಚು ಅನುದಾನ ಕೊಡಬೇಕು ಎಂದು ನಾನು ಮಾತನಾಡಿದ್ದೇನೆ. ಬಹಳಷ್ಟು ಕಠುವಾಗಿ ಮಾತನಾಡಿದ್ದೇನೆ. ಆದರೆ ಪ್ರತ್ಯೇಕ ದೇಶದ ಬಗ್ಗೆ ಮಾತನಾಡಿಲ್ಲ. ಒಂದು ರಾಷ್ಟ್ರೀಯ ಪಕ್ಷದ ಸದಸ್ಯರಾಗಿ ಅವರು ಯಾವ ಆಯಾಮದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಇದಕ್ಕಿಂತ ಹೆಚ್ಚು ನಾನು ಮಾತನಾಡಲಾರೆ ಎಂದಿದ್ದಾರೆ.

Bharat Jodo

ಅಖಂಡ ಭಾರತ ಇಬ್ಭಾಗ ಮಾಡುವ ಮಾತಿಲ್ಲ ಎಂದ ಸಚಿವ ದಿನೇಶ್ ಗುಂಡೂರಾವ್.
ಇನ್ನು ಈ ಕುರಿತಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಪ್ರತಿಕ್ರಿಯೆ ನೀಡಿದ್ದು, ಅಖಂಡ ಭಾರತ ಇರಬೇಕು, ಅದನ್ನು ಇಬ್ಭಾಗ ಮಾಡುವುದು ಸರಿಯಲ್ಲ. ಡಿ.ಕೆ.ಸುರೇಶ್ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಆದರೆ ದಕ್ಷಿಣ ಭಾರತ ರಾಜ್ಯಗಳಿಗೆ ಸರಿಯಾದ ಅನುದಾನ ಸಿಗುತ್ತಿಲ್ಲ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ತಾರತಮ್ಯ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತ್ ಜೋಡೋ ಇಲ್ಲವಾದ್ರೆ ಭಾರತ್ ತೋಡೋ ಎಂದ ವಿಧಾನಪರಿಷತ್ ಸದಸ್ಯ ರವಿಕುಮಾರ್
ಡಿಕೆ ಸುರೇಶ್ (D K Suresh) ನೀಡಿರುವ ವಿವಾದಾತ್ಮಕ ಹೇಳಿಕೆಗೆ ಬಾಗಲಕೋಟೆಯಲ್ಲಿ ವಿಧಾನಪರಿಷತ್ ಸದಸ್ಯ ರವಿಕುಮಾರ್​ ತಿರುಗೇಟು ನೀಡಿದ್ದು, ಕಾಂಗ್ರೆಸ್​​ ಪಕ್ಷದವರಿಗೆ ಬುದ್ಧಿಭ್ರಮಣೆ ಆಗಿದೆಯಾ ಅನಿಸುತ್ತಿದೆ. ಒಂದು ಕಡೆ ರಾಹುಲ್​​ ಗಾಂಧಿ ಭಾರತ ಜೋಡೋ ಅಂತಾ ಹೇಳುತ್ತಾರೆ. ಇನ್ನೊಂದು ಕಡೆ ಸಂಸದ ಡಿ.ಕೆ.ಸುರೇಶ್​​​ ಭಾರತ್​​​ ತೋಡೋ ಅಂತಾರೆ. ಭಾರತ್ ಜೋಡೋ (Bharat Jodo) ಇಲ್ಲದಿದ್ರೆ ಭಾರತ್ ತೋಡೋ ಎನ್ನುವುದು ಇವರ ಸಂಕಲ್ಪ ಎನಿಸುತ್ತದೆ ಎಂದು ಗೇಲಿ ಮಾಡಿದ್ದಾರೆ.

ಅಕ್ಷತಾ ಹೆಗ್ಡೆ

Tags: Bharat Jodo YatraD K SureshDinesh GunduraoH D Devegowda

Related News

ಪಹಲ್ಗಾಂ ದಾಳಿಗೆ ಒಂದು ವರ್ಷ: ಭಾರತೀಯ ಸೇನೆಯಿಂದ ಖಡಕ್ ಪೋಸ್ಟ್
ದೇಶ-ವಿದೇಶ

ಪಹಲ್ಗಾಂ ದಾಳಿಗೆ ಒಂದು ವರ್ಷ: ಭಾರತೀಯ ಸೇನೆಯಿಂದ ಖಡಕ್ ಪೋಸ್ಟ್

April 22, 2026
ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು
ಪ್ರಮುಖ ಸುದ್ದಿ

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು

April 22, 2026
ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್
ದೇಶ-ವಿದೇಶ

ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್

April 22, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.