Hassan: ಲೋಕಸಭಾ ಚುನಾವಣೆಯ ಹಿನ್ನೆಲೆ ಎಲ್ಲ ಪಕ್ಷಗಳ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ವಿಪಕ್ಷಗಳ ನಡುವಿನ ಸೆಣಸಾಟ ಕೂಡಾ ಜೋರಾಗಿದ್ದು ಜೆಡಿಎಸ್ (JDS) ಅನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (D.K Shivakumar) ವಿರುದ್ದ ಜೆಡಿಎಸ್ ಪಕ್ಷದ ವರಿಷ್ಠ ಹೆಚ್ಡಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.
ಸಕಲೇಶಪುರ (Sakaleshpura) ತಾಲೂಕಿನ ಚಂಗಡಿಹಳ್ಳಿಯಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು ಮುಂದೆ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಕಷ್ಟ. ವಿರೋಧ ಪಕ್ಷಗಳ ಪರಿಸ್ಥಿತಿ ಈಗಾಗಲೇ ಕೆಟ್ಟದಾಗಿದ್ದು, ರಾಜ್ಯ ಕಾಂಗ್ರೆಸ್ ನಾಯಕರಿಗೆ ವಿಪಕ್ಷಗಳನ್ನು ತಮ್ಮದೇ ಪಕ್ಷವೆಂದು ಪರಿಗಣಿಸುವ ನೈತಿಕ ಹಕ್ಕಿಲ್ಲ ಲೋಕಸಭೆ ಚುನಾವಣೆಯಲ್ಲಿ (Loksabha Election) ವಿವಿಧ ರಾಜ್ಯಗಳಲ್ಲಿ ಮುಖಭಂಗ ಅನುಭವಿಸಿದ ನಂತರ ಕಾಂಗ್ರೆಸ್ನ (Congress) ಹಲವು ಪ್ರಮುಖ ನಾಯಕರು ಪಕ್ಷ ತೊರೆಯಲಿದ್ದಾರೆ.
ಇಡೀ ಬೆಂಗಳೂರೇ (Bengaluru) ನನ್ನ ಕಪಿಮುಷ್ಠಿಯಲ್ಲಿದೆ ಎಂದು ಹಾರಾಡುತ್ತಿರುವ ಡಿಕೆ ಶಿವಕುಮಾರ್ಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ. ಕರ್ನಾಟಕ (Karnataka) ದಿಂದ ವಿವಿಧ ರಾಜ್ಯಗಳ ಚುನಾವಣೆಗೆ ಹಣ ರವಾನೆಯಾಗಿದೆ ಎಂಬ ಆರೋಪದ ಬಗ್ಗೆ ಸಾಕ್ಷ್ಯಾಧಾರ ನೀಡಲು ನಾನು ಸಿದ್ಧನಿದ್ದೇನೆಂದು ಸವಾಲು ಹಾಕಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಬೆಂಬಲದೊಂದಿಗೆ ಪ್ರಧಾನಿಯಾಗಿದ್ದ ಅವಧಿಯನ್ನು ಸ್ಮರಿಸಿದ ಅವರು, ಆಗಲೂ ಕಾಂಗ್ರೆಸ್ ನನ್ನ ವಿರುದ್ಧ ಪಿತೂರಿ ನಡೆಸಿತ್ತು. ಕೊಟ್ಟ ಬೆಂಬಲ ಹಿಂಪಡೆದು ನನ್ನನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಿತ್ತು ಎಂದು ವಾಗ್ದಾಳಿ ನಡೆಸಿದರು. ಬಳಿಕ I.N.D.I.A ಬಣದಲ್ಲಿ ಯಾವುದೇ ನಾಯಕನಿಗೆ ಪ್ರಧಾನಿಯಾಗುವ ಸಾಮರ್ಥ್ಯವಿಲ್ಲ.
ಅತಿ ಬುದ್ಧಿವಂತ ಎನಿಸಿಕೊಂಡ ಶಿವಕುಮಾರ್ ಅವರು ಮತದಾರರನ್ನು ಗೊಂದಲಕ್ಕೀಡು ಮಾಡಲು ಬೆಂಗಳೂರು (Bengaluru) ಗ್ರಾಮಾಂತರ ಕ್ಷೇತ್ರದಲ್ಲಿ ನನ್ನ ಅಳಿಯ ಡಾ.ಸಿ.ಎನ್.ಮಂಜುನಾಥ್ (Dr. C.N Manjunath) ವಿರುದ್ಧ ಒಂದೇ ಹೆಸರಿನ ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಅವರು ಮಾಡಿದ ಮೋಸಕ್ಕೆ ತಕ್ಕ ಶಿಕ್ಷೆ ಆಗಲಿದೆ ಸಂಸತ್ ಚುನಾವಣೆಯ ನಂತರ ರಾಜ್ಯ ಸರ್ಕಾರ ತಾನಾಗಿಯೇ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.