Bengaluru: ಲೋಕಸಭಾ ಚುನಾವಣೆಯ ನಂತರ ನನ್ನ ವಿರುದ್ದವೂ ಸದ್ದಿಲ್ಲದೇ ಸಂಚು ನಡೆಸುತ್ತಿದೆ. ಕೇಂದ್ರ ಸರ್ಕಾರದಲ್ಲಿ ನಾನು ಕ್ಯಾಬಿನೆಟ್ (Cabinet) ಮಂತ್ರಿಯಾಗಿರುವುದು ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ನನ್ನನ್ನೂ ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ. ನನ್ನ ವಿರುದ್ಧ ಏನೇನು ನಡೆಯುತ್ತಿದೆ ಅನ್ನೋದು ಗೊತ್ತಿದೆ. ರಾಜ್ಯ ಸರ್ಕಾರ ನನ್ನ ಬಿಡದಿ ಜಮೀನಿನ ದಾಖಲೆ ಹುಡಿಕುತ್ತಿದ್ದಾರೆ. ಇದಕ್ಕಾಗಿ ಎಲ್ಲರೂ ಒಟ್ಟಾಗಿ ಸೇರಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H D Kumaraswamy) ಅವರು ಸ್ಪೋಟಕ ಹೇಳಿಕೆ ನೀಡಿದ್ದಾರೆ.
![](https://sp-ao.shortpixel.ai/client/to_webp,q_glossy,ret_img,w_1024,h_614/https://vijayatimes.com/wp-content/uploads/2024/06/1600x960_1027698-darshan-1024x614.jpg)
ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆಗಳ ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿದ ಹೆಚ್.ಡಿ ಕುಮಾರಸ್ವಾಮಿ ಅವರು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನು ರಾಜಭವನದಲ್ಲಿ ಸೌಹಾರ್ದಯುತ ಭೇಟಿಯಾಗಿ ಮಾತುಕತೆ ನಡೆಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಲ್ಲಿ ನಾನು ಕ್ಯಾಬಿನೆಟ್ ಮಂತ್ರಿ ಆಗಗಿರುವುದು ಅವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿಯೇ ಏನಾದರೂ ಮಾಡಿ ನನ್ನನ್ನು ಜೈಲಿಗೆ (Jail) ಹಾಕಿಸಬೇಕು ಎಂದು ಓಡಾಡುತ್ತಿದ್ದಾರೆ. ಅದಕ್ಕಾಗಿ ನನ್ನ ಬಿಡದಿ ಜಮೀನು ದಾಖಲೆ ಹುಡುಕುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದರು.
![Politics](https://sp-ao.shortpixel.ai/client/to_webp,q_glossy,ret_img,w_1024,h_576/https://vijayatimes.com/wp-content/uploads/2024/06/ayodhya-2024-02-12T145908.997-1024x576.webp)
ದರ್ಶನ್ ಕೊಲೆ ಪ್ರಕರಣ ಬಗ್ಗೆ ಯಾಕೆ ಮಾತಾಡಬೇಕು :
ಇದೇ ವೇಳೆ ನಟ ದರ್ಶನ್ (Darshan) ಮೇಲೆ ಕೇಳಿ ಬಂದಿರುವ ಕೊಲೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ದರ್ಶನ್ ಕೊಲೆ ಪ್ರಕರಣದ ಕುರಿತು ನಾನು ಚರ್ಚೆ ಮಾಡಲು ಹೋಗುವುದಿಲ್ಲ. ಈ ರೀತಿಯ ಅನೇಕ ಘಟನೆಗಳು ರಾಜ್ಯದಲ್ಲಿ ಪ್ರತಿದಿನ ನಡೆಯುತ್ತಲೇ ಇವೆ. ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಪರಾಧಿಗಳಲ್ಲಿ ಭಯ ಹೊರಟು ಹೋಗಿದೆ. ಅದಕ್ಕೆಲ್ಲಾ ಕಾರಣವೆಂದರೆ ಈ ಸರ್ಕಾರದ ಆಡಳಿತ. ನಾನು ಕೇವಲ ಈ ಒಂದು ಘಟನೆಯನ್ನು ಯಾಕೆ ಮಾತಾಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.
ಪೊಲೀಸರೇ ಹಣದ ವ್ಯಾಮೋಹಕ್ಕೆ ಬಲಿಯಾಗಿದ್ದಾರೆ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ವೈಯಕ್ತಿಕ ಕಾರಣಕ್ಕೆ ಕೊಲೆ ಮಾಡುವುದು ಸುಲಭವಾಗಿದೆ. ಇದಕ್ಕೆ ರಾಜ್ಯ ಸರ್ಕಾರದ ನಡೆಯೇ ಕಾರಣ. ರಾಜ್ಯದ ಪೊಲೀಸ್ ಅಧಿಕಾರಿಗಳು ಅಪರಾಧಿಗಳು ನೀಡುವ ಹಣದ ವ್ಯಾಮೋಹಕ್ಕೆ ಬಲಿಯಾಗಿದ್ದಾರೆ. ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಆರೋಪಿಯನ್ನು ಬಂಧಿಸಿದ ನಂತರ ಪೊಲೀಸ್ ಠಾಣೆಗೆ ಶಾಮಿಯಾನ ಹಾಕುವ ಘಟನೆ ರಾಜ್ಯದ ಇತಿಹಾದಲ್ಲಿ ಆಗಿರಲಿಲ್ಲ. ಯಥಾ ರಾಜಾ ತಥಾ ಪ್ರಜೆ ರೀತಿ ಈ ರಾಜ್ಯ ಸರ್ಕಾರದ ನಡವಳಿಕೆ ಆಗಿದೆ ಎಂದು ಲೇವಡಿ ಮಾಡಿದ್ದಾರೆ.