ದಾಳಿಯಿಂದ ನೊಂದಿದ್ದ ಮುಸ್ಲಿಂ ಕಲ್ಲಂಗಡಿ ವ್ಯಾಪಾರಿಗೆ ಹೆಚ್‍ಡಿಕೆ ಆರ್ಥಿಕ ನೆರವು!

kumarswamy

ಧಾರವಾಡದ(Dharwad) ಪ್ರಸಿದ್ದ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ಕಲ್ಲಂಗಡಿ(Watermelon) ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಿಗೆ ವ್ಯಾಪಾರ ಮಾಡದಂತೆ ಬೆದರಿಕೆ ಹಾಕಿ, ಕಲ್ಲಂಗಡಿಗಳನ್ನು ರಸ್ತೆಗೆ ಎಸೆದು ಧ್ವಂಸ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ದಾಳಿಯಿಂದ ನೊಂದಿದ್ದ ಮುಸ್ಲಿಂ ವ್ಯಾಪಾರಿಗೆ ಎಚ್.ಡಿ. ಕುಮಾರಸ್ವಾಮಿಯವರು(HD Kumarswamy) ಆರ್ಥಿಕ ಸಹಾಯ ಮಾಡಿದ್ದಾರೆ.


ಇನ್ನು ಇತ್ತೀಚೆಗೆ ರಾಜ್ಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನಗಳ ಆವರಣದಲ್ಲಿ ವ್ಯಾಪಾರ ನಡೆಸದಂತೆ ನಿರ್ಬಂಧ ವಿಧಿಸಬೇಕೆಂದು ಅನೇಕ ಹಿಂದೂ ಸಂಘಟನೆಗಳು ಅಭಿಯಾನ ನಡೆಸಿದ್ದವು. ಈ ಹಿಂದಿನ ಕಾಂಗ್ರೆಸ್(Congress) ಸರ್ಕಾರ ದೇವಸ್ಥಾನಗಳ ಸುತ್ತಮುತ್ತ ಮುಸ್ಲಿಮರು ವ್ಯಾಪಾರ ನಡೆಸದಂತೆ ನಿರ್ಬಂಧ ವಿಧಿಸಿ ಕಾನೂನು ರೂಪಿಸಿತ್ತು. ಹೀಗಾಗಿ ಆ ಕಾನೂನನ್ನು ಜಾರಿಗೊಳಿಸುವಂತೆ ಒತ್ತಾಯ ಕೇಳಿಬಂದಿತ್ತು.
ಇನ್ನು ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದ ಮೊದಲ ದಾಳಿ ಇದಾಗಿದೆ. ಇದೊಂದು ಅಮಾನುಷ ಕೃತ್ಯವಾಗಿದ್ದು, ಅದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕುವುದನ್ನು ಕೂಡಾ ನಾನು ಒಪ್ಪಲಾರೆ. ಈ ರೀತಿಯ ಕೃತ್ಯ ಎಸಗುವ ಗೂಂಡಾಗಳ ಮೇಲೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿಯವರು ಸರ್ಕಾರವನ್ನು ಒತ್ತಾಯಿಸಿದ್ದರು. ಇದರ ನಡುವೆ ದಾಳಿಯಿಂದ ಆರ್ಥಿಕ ನಷ್ಟ ಅನುಭವಿಸಿದ್ದ ನಬಿಸಾಬ್‍ಗೆ ಕುಮಾರಸ್ವಾಮಿಯವರು ತಮ್ಮ ಆಪ್ತರ ಮೂಲಕ 10,000 ರೂಪಾಯಿ ಆರ್ಥಿಕ ನೆರವು ನೀಡಿದ್ದಾರೆ. ಇನ್ನು ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನದ ಆವರಣದಲ್ಲಿ ಅನುಮತಿ ನೀಡುವ ಕುರಿತು ಮುಂದಿನ ತಿಂಗಳು ನಿರ್ಧಾರ ಕೈಗೊಳ್ಳಲು ದೇವಸ್ಥಾನ ಆಡಳಿತ ಮಂಡಳಿ ನಿರ್ಧರಿಸಿತ್ತು.

ಅಂತಿಮ ನಿರ್ಧಾರ ಕೈಗೊಳ್ಳುವುದಕ್ಕೂ ಮುಂಚೆಯೇ ಈ ದಾಳಿ ನಡೆದಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಇನ್ನು ಈ ಘಟನೆಯನ್ನು ಸಚಿವ ಮಾಧುಸ್ವಾಮಿ ಖಂಡಿಸಿದ್ದಾರೆ. ಬಡ ವ್ಯಾಪಾರಿಗಳ ಮೇಲೆ ಈ ರೀತಿಯ ದಾಳಿಗಳನ್ನು ನಡೆಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Exit mobile version