• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಅಯ್ಯೋ..ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ : ಹೆಚ್‍ಡಿಕೆ ಬೇಸರ!

Mohan Shetty by Mohan Shetty
in ರಾಜಕೀಯ, ರಾಜ್ಯ
HDK
0
SHARES
1
VIEWS
Share on FacebookShare on Twitter

2022-23ನೇ ಸಾಲಿನ ನೂತನ ಶೈಕ್ಷಣಿಕ ಪಠ್ಯದಲ್ಲಿ ಆರ್‍ಎಸ್‍ಎಸ್(RSS) ಸಂಸ್ಥಾಪಕ ಹೆಡಗೇವಾರ್ ಅವರ ಭಾಷಣವನ್ನು ಸೇರ್ಪಡೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ದ ಮಾಜಿ ಸಿಎಂ(Former CM) ಎಚ್.ಡಿ ಕುಮಾರಸ್ವಾಮಿ(HD Kumarswamy) ಅವರು ಸರಣಿ ಟ್ವೀಟ್‍ಗಳ ಮೂಲಕ ವಾಗ್ದಾಳಿ ನಡೆಸಿದ್ದಾರೆ.

HD Kumarswamy

“ಪಠ್ಯವನ್ನು ವಿಕೃತಿಗೊಳಿಸುತ್ತಿರುವುದು ಎಂದರೆ, ಕನ್ನಡ ಆಸ್ಮಿತೆಯನ್ನು ಹತ್ತಿಕ್ಕುವ ಪಾತಕ ಯತ್ನ. ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು, ಪ್ರಶ್ನಿಸಬೇಕು. ಹೋರಾಟಕ್ಕೂ ಇಳಿಯಬೇಕು. “ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!!” #ಪಠ್ಯಪುಸ್ತಕ_ಪಕ್ಷಪುಸ್ತಕ “ಬಿಜೆಪಿಗರು ಮತ್ತು ಬ್ರಿಟೀಷರು ಇಬ್ಬರೂ ಒಂದೇ. ಒಡೆದು ಆಳುವುದೇ ಇವರ ನೀತಿ & ಧರ್ಮ. ಬ್ರಿಟೀಷರ ಪರಂಪರೆಯನ್ನು ಬಿಜೆಪಿಗರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲೂ ಮುಂದುವರಿಸಿದ್ದಾರೆ. ಜನರ ಸ್ವಾತಂತ್ರ್ಯವನ್ನು ಸಹಿಸಲು ಅವರಿಗೆ ಆಗುತ್ತಿಲ್ಲ”

ಇದನ್ನೂ ಓದಿ : https://vijayatimes.com/kg-boppaiah-statement/

“ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ, ಚಾರಿತ್ರ್ಯಹೀನತೆಯೇ ಮೈವೇತ್ತ ಬಿಜೆಪಿಗೆ ರಾಜ್ಯದ ಬೆಳವಣಿಗೆಯಲ್ಲಿ ನಂಬಿಕೆ ಇಲ್ಲ. ಹಿಜಾಬ್, ಆಹಾರ, ವ್ಯಾಪಾರ, ಹಲಾಲ್ ಎಲ್ಲಾ ಆಯಿತು. ಈಗ ಪಠ್ಯಕ್ಕೆ ನೇತಾಡುತ್ತಿದೆ. ಅಭಿವೃದ್ಧಿ ಎಂದರೆ ಆ ಪಕ್ಷಕ್ಕೆ ಅಪಥ್ಯ.” “ಭಗತ್ ಸಿಂಗ್ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿ ಗಲ್ಲಿಗೇರಿದರು. ಸಂಘ ಪರಿವಾರಿಗಳು ಅದೇ ಬ್ರಿಟೀಷರಿಗೆ ಪರಿಚಾರಿಕೆ ಮಾಡಿಕೊಂಡು ಸ್ವಾತಂತ್ರ್ಯಕ್ಕಿಂತ ಗುಲಾಮಗಿರಿಯೇ ಲೇಸೆಂದುಕೊಂಡಿದ್ದರು. ಇಂಥವರು, ಭಗತ್‍ಸಿಂಗ್‍ರಂಥ ರಾಷ್ಟ್ರಪ್ರೇಮಿಗಳನ್ನು ಸಹಿಸಿಕೊಳ್ಳುತ್ತಾರೆಯೇ?”

HDK

“ಮಹಾನ್ ರಾಷ್ಟ್ರಪ್ರೇಮಿ, ಬ್ರಿಟೀಷರಿಗೆ ಸಿಂಹಸ್ವಪ್ನ, ಭಾರತಮಾತೆಯ ಹೆಮ್ಮೆಯ ಪುತ್ರ ಸರ್ದಾರ್ ಭಗತ್ ಸಿಂಗ್ ಅವರ ಪಠ್ಯಕ್ಕೆ ಕೊಕ್ ಕೊಟ್ಟು, ಆರೆಸ್ಸೆಸ್ ಸಂಸ್ಥಾಪಕ ಹೆಡಗೇವಾರ್ ಕುರಿತ ಮಾಹಿತಿಯನ್ನು ಪಠ್ಯಕ್ಕೆ ತುರುಕುತ್ತಿರುವ ಬಿಜೆಪಿ ಮತ್ತವರ ಪಟಾಲಂ ವಿಕೃತಿಗೆ ಇದು ಪ್ರಮುಖ ಕಾರಣ.” ಬಿಜೆಪಿಯ ಈ ಬುಡಮೇಲು ಕೃತ್ಯಗಳ ಬಗ್ಗೆ ನನಗೆ ಅಚ್ಚರಿಯೇನೂ ಇಲ್ಲ. ನನ್ನ ಜತೆ ಮೈತ್ರಿ ಸರಕಾರ ಮಾಡಿದಾಗ ಅವರ ಬೇಳೆ ಬೇಯಲಿಲ್ಲ.

ಪಠ್ಯವನ್ನು ವಿಕೃತಿಗೊಳಿಸುತ್ತಿರುವುದು ಎಂದರೆ, ಕನ್ನಡ ಆಸ್ಮಿತೆಯನ್ನು ಹತ್ತಿಕ್ಕುವ ಪಾತಕ ಯತ್ನ. ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು, ಪ್ರಶ್ನಿಸಬೇಕು. ಹೋರಾಟಕ್ಕೂ ಇಳಿಯಬೇಕು.
"ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!!" 7/7#ಪಠ್ಯಪುಸ್ತಕ_ಪಕ್ಷಪುಸ್ತಕ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 17, 2022

‘ಆಪರೇಷನ್ ಕಮಲʼದ ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದ ‘ಸ್ವಘೋಷಿತ ಡೋಂಗಿ ರಾಷ್ಟ್ರಭಕ್ತರುʼ ಇನ್ನೇನು ಮಾಡಲು ಸಾಧ್ಯ?

Tags: bjpJDSKarnatakapoliticalpolitics

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
bill
ರಾಜ್ಯ

ಇಂಧನ ಹೊಂದಾಣಿಕೆ ಶುಲ್ಕ ನೆಪ, ಡಬಲ್ ಆಯ್ತು ಕರೆಂಟ್ ಬಿಲ್ ; ಹಲವೆಡೆ ಪ್ರತಿಭಟನೆ

June 10, 2023
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.