ಕಾಂಗ್ರೆಸ್ ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ: OPS ಜಾರಿಗೆ ಎಚ್ಡಿಕೆ ಆಗ್ರಹ

ರಾಜ್ಯ ಕಾಂಗ್ರೆಸ್ ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಗೌರವಾನ್ವಿತ (HDK slams congress government) ಸುಪ್ರಿಂ ಕೋರ್ಟ್ ಆದೇಶವನ್ನು ಕೇಂದ್ರ

ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ ಹಳೆ ಪಿಂಚಣಿ ಯೋಜನೆ (OPS)

ಬಗ್ಗೆ ಅರೆಬರೆ, ತರಾತುರಿ ಆದೇಶ ಹೊರಡಿಸಿದೆಯೇ ಹೊರತು,

ಸರಕಾರಿ ನೌಕರರ ಮೇಲೆ ಪ್ರೀತಿ ಉಕ್ಕಿ ಅಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (H D

Kumarswamy) ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸುದಿರ್ಘ ಟ್ವೀಟ್ ಮಾಡಿರುವ ಅವರು, ಸುಪ್ರೀಂ ಕೋರ್ಟ್ (Supreme Court) ಆದೇಶದ ಮೇರೆಗೆ

ಕೇಂದ್ರ ಸರಕಾರವು 1-4-2006ಕ್ಕೂ ಮೊದಲು ಅಧಿಸೂಚನೆಯಾಗಿ ನೇಮಕಗೊಂಡವರಿಗೆ

OPS ಕೊಟ್ಟಿದೆ. ನಂತರ ಎಲ್ಲಾ ರಾಜ್ಯಗಳು ಈ ಆದೇಶ ಜಾರಿ ಮಾಡುತ್ತಿವೆ. ಕರ್ನಾಟಕದಲ್ಲೂ ಆಗಿದೆ ಅಷ್ಟೇ. ಇದರಲ್ಲಿ

ಸರಕಾರದ ಘನಂದಾರಿ ಸಾಧನೆ ಏನೂ ಇಲ್ಲ. ಮೇ ತಿಂಗಳಲ್ಲಿಯೇ OPS ಜಾರಿ

ಮಾಡುವ ಭರವಸೆ ನೀಡಿದ್ದರು ಸಿದ್ದರಾಮಯ್ಯ. 2023 ಮೇ 20ರಂದು ಪ್ರಮಾಣ ಸ್ವೀಕರಿಸಿದ ಅವರು, ಸರಕಾರ ಬಂದ

ಎರಡೇ ದಿನಕ್ಕೆ ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದಿತ್ತು. ಅವರು ಚುನಾವಣಾ ಫಸಲು

ತೆಗೆಯಲು ಹತ್ತು ತಿಂಗಳು ಹೊಂಚು ಹಾಕಿ ಕೂತರು. ಇದು ಚುನಾವಣೆ ಗಿಮಿಕ್ ಅಷ್ಟೇ, ಅನುಮಾನವೇ ಇಲ್ಲ. 2006

ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಗೊಂಡ 13,000

ನೌಕರರು ಹಳೆ ಪಿಂಚಣಿ (Employees Old Pension Plan) ವ್ಯಾಪ್ತಿಗೆ ಬರುತ್ತಾರೆ ಎಂದು ಈ ಆದೇಶ ಹೇಳುತ್ತದೆ.

ಈ ಗ್ಯಾರಂಟಿ ಸರಕಾರಕ್ಕೆ ಈ ನಿರ್ಧಾರ (HDK slams congress government) ತೆಗೆದುಕೊಳ್ಳುವುದಕ್ಕೆ

10 ತಿಂಗಳೇ ಬೇಕಾಯಿತು!

ಮಾತೆತ್ತಿದರೆ ಮೋದಿ (Modi) ಅವರನ್ನು ನಿಂದಿಸುವ ಸಿದ್ದರಾಮಯ್ಯ (Siddaramaiah) ಅವರದ್ದು ಕೆಲಸದಲ್ಲಿ ಆಮೆವೇಗ ಎನ್ನುವುದಕ್ಕೆ ಇದೇ ಸಾಕ್ಷಿ ಎಂದಿದ್ದಾರೆ.

ಇನ್ನೊಂದು ಟ್ವೀಟ್ನಲ್ಲಿ, ಎರಡು ನಾಲಿಗೆಯ ಕಾಂಗ್ರೆಸ್ ನವರು ನುಡಿದಂತೆ ನಡೆದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಾರೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಎಷ್ಟು ನೌಕರರಿಗೆ OPS

ನೀಡುವುದಾಗಿ ಭರವಸೆ ನೀಡಿತ್ತು? ಆದರೆ, ಸರಕಾರದ ಆದೇಶದಿಂದ 13,000 ನೌಕರರಿಗೆ ಮಾತ್ರ OPS ಭಾಗ್ಯ ಕೊಡುತ್ತಿದೆ. ಉಳಿದವರು ಅಭಾಗ್ಯವಂತರೇ? ಹೋಗಲಿ, OPSಗೆ ಅರ್ಹ ನೌಕರರು

ಎಷ್ಟಿದ್ದಾರೆ? ಸರಕಾರಕ್ಕೆ ಮಾಹಿತಿ ಇದೆಯಾ? ಹೇಳುವುದು ಒಂದು, ಮಾಡುವುದು ಇನ್ನೊಂದು ಎನ್ನುವ ತನ್ನ ಪರಂಪರಾಗತ ವರ್ತನೆಯನ್ನು ಕಾಂಗ್ರೆಸ್ ಇನ್ನಾದರೂ ಬದಲಿಸಿಕೊಳ್ಳಬೇಕು.

ಪ್ರಣಾಳಿಕೆ ಮತ್ತು ಬಜೆಟ್ ನಲ್ಲಿ ಭರವಸೆ ನೀಡಿದಂತೆ ಸರಕಾರಿ ನೌಕರರಿಗೆ OPS ಕೊಡಲೇಬೇಕು. ಅದನ್ನು ಬಿಟ್ಟು ನೌಕರರ ಕಣ್ಣಿಗೆ ಮಣ್ಣೆರಚುವುದು ಸರಿಯಲ್ಲ. ನೌಕರರ ಬದುಕನ್ನು ಚುನಾವಣೆ

ಸರಕನ್ನಾಗಿ ಮಾಡಿಕೊಳ್ಳುವುದು ಹೇಯ ಎಂದು ಟೀಕಿಸಿದ್ದಾರೆ.

ಇದನ್ನು ಓದಿ: ನಾಡಿನೆಲ್ಲೆಡೆ 75ನೇ ಗಣರಾಜ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಗೆಹ್ಲೋಟ್‌

Exit mobile version