ಕೆಲ ಪಕ್ಷಗಳ ‘ರಾಜಕೀಯ ಏಕಸ್ವಾಮ್ಯತೆ’ ದೇಶಕ್ಕೆ ಮಾರಕ : ಹೆಚ್.ಡಿ.ಕುಮಾರಸ್ವಾಮಿ

Politics

Bengaluru : ರಾಷ್ಟ್ರ ರಾಜಕಾರಣದಲ್ಲಿ ಪರ್ಯಾಯ ರಾಜಕೀಯ(Political) ಶಕ್ತಿಯ ಅಗತ್ಯವಿತ್ತು. ಕೆಲ ಪಕ್ಷಗಳ ‘ರಾಜಕೀಯ ಏಕಸ್ವಾಮ್ಯತೆʼ ದೇಶಕ್ಕೆ ಮಾರಕ. ಇದಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಹೊಸ ರಾಜಕೀಯ ಶಕ್ತಿ ಬೇಕಿತ್ತು.

ಬಿ ಆರ್ ಎಸ್ ಒಂದು ʼಪ್ರಬಲ ಪರ್ಯಾಯʼ ಎನ್ನುವುದು ನನ್ನ ಭಾವನೆ.

K Chandrashekar Rao

ಬಿಆರ್ ಎಸ್ ಸ್ಥಾಪನೆಯನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ ಎಂದು ಜೆಡಿಎಸ್‌ ನಾಯಕ (JDS Leader) ಎಚ್.ಡಿ.ಕುಮಾರಸ್ವಾಮಿ (HDK Speaks with KCR) ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಟ್ವೀಟ್‌ (Tweet) ಮಾಡಿರುವ ಅವರು, ಬಿಆರ್‌ಎಸ್ ಸ್ಥಾಪನೆ ಬಗ್ಗೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಿಗಳಾದ ಶ್ರೀ ದೇವೇಗೌಡರು (HD Devegowdru) ಮತ್ತು ನನ್ನ ಜತೆ ಶ್ರೀ ಕೆಸಿಆರ್ ಸಮಾಲೋಚಿಸಿದ್ದರು.

ಇದನ್ನೂ ಓದಿ : https://vijayatimes.com/beauty-tips-for-men/

ಕೆಲ ದಿನಗಳ ಹಿಂದೆ ಸ್ವತಃ ನಾನೇ ಹೈದರಾಬಾದ್ಗೆ ತೆರಳಿ ಚರ್ಚಿಸಿದ್ದೆ. ನಮ್ಮನ್ನು ಪರಿಪೂರ್ಣವಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಅವರು ಈ ದಿಟ್ಟ ಹೆಜ್ಜೆ ಇರಿಸಿದ್ದಾರೆ.

https://youtu.be/tvvmdb8yMSc

2023ರ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಗಳ (Congress-BJP) ಹೊರತಾದ ಸ್ವತಂತ್ರ ಸರಕಾರ ತರಲು ಎರಡೂ ಪಕ್ಷಗಳು ಸದೃಢವಾಗಿ ಕೆಲಸ ಮಾಡಲಿವೆ.

H D Kumaraswamy

ನಮಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಶ್ರೀ ಕೆಸಿಆರ್ (HDK Speaks with KCR) ಭರವಸೆ ನೀಡಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗರದ್ದೇ ಆದ ಸ್ವಾಭಿಮಾನದ ಸರಕಾರದ ಬೇಕು. ಈ ನಿಟ್ಟಿನಲ್ಲಿ ನಾವಿಬ್ಬರೂ ಚರ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ.

2023ರ ಕರ್ನಾಟಕ ಚುನಾವಣೆ, 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ & ಟಿಆರ್‌ಎಸ್‌ (ಬಿಆರ್‌ಎಸ್) ಒಟ್ಟಾಗಿ ಕೆಲಸ ಮಾಡಲಿವೆ.

ಇದನ್ನೂ ಓದಿ : https://vijayatimes.com/bjp-mla-slams-adipurush-film/

ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರದಲ್ಲಿ ʼಬಿಜೆಪಿ-ಕಾಂಗ್ರೆಸ್ ಮುಕ್ತ ರಾಜಕೀಯʼ ಸ್ಥಿತಿ ಇದೆ. ಅದೇ ಸ್ಥಿತಿಯನ್ನು ರಾಜ್ಯದಲ್ಲೂ ತರಲು ನಾನು, ಶ್ರೀ ಕೆಸಿಆರ್ ನಿರ್ಧಾರ ಮಾಡಿದ್ದೇವೆ.

ತೆಲಂಗಾಣ ಮುಖ್ಯಮಂತ್ರಿ ಶ್ರೀ ಕೆ.ಚಂದ್ರಶೇಖರ್ ರಾವ್ ಅವರು ಟಿಆರ್‌ಎಸ್‌ ಪಕ್ಷವನ್ನು ʼಭಾರತ್ ರಾಷ್ಟ್ರ ಸಮಿತಿʼ ಹೆಸರಿನಲ್ಲಿ ರಾಷ್ಟ್ರೀಯ ಪಕ್ಷವಾಗಿ ಘೋಷಣೆ ಮಾಡಿದ ಸಭೆಯಲ್ಲಿ ನಾನೂ ಭಾಗಿಯಾಗಿದ್ದೆ.

ಈ ಸಂದರ್ಭದಲ್ಲಿ ಕೆಸಿಆರ್ ಅವರಿಗೆ ಮನಸಾರೆ ಶುಭ ಹಾರೈಸಿದೆ. ರಾಜ್ಯದಲ್ಲಿಯೂ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.

Exit mobile version