Hassan: ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಅಬ್ಬರದ ಪ್ರಚಾರದ ನಡುವೆ ಇದು ನನ್ನ ಮೂರನೇ ಜನ್ಮ. ಜನರ ಸೇವೆ ಮಾಡುವ ಸೌಭಾಗ್ಯವನ್ನು ದೇವರು ನನಗೆ ಮತ್ತೊಮ್ಮೆ ಅವಕಾಶ ನೀಡಿದ್ದಾನೆ. ಎಂದು ಹೆಚ್ ಡಿ ಕುಮಾರಸ್ವಾಮಿ (H.D Kumaraswamy) ಸಿಎಂ ಆಗುವ ಬಗ್ಗೆ ಮಾರ್ಮಿಕವಾಗಿ ಹೇಳಿಕೆ ನೀಡಿದ್ದು, ಸದ್ಯ ರಾಜಕೀಯ ವಲಯದಲ್ಲಿ ಗುಸು ಗುಸು ಶುರುವಾಗಿದೆ.
ಈಗಾಗಲೇ ದುರಹಂಕಾರದಲ್ಲಿ ಜೆಡಿಎಸ್ (JDS) ಎಲ್ಲಿದೆ ಎನ್ನುವ ಮಾತುಗಳನ್ನು ಇವರು ಆಡುತ್ತಿದ್ದಾರೆ. ಸಹವಾಸ ಮಾಡಿದಕ್ಕೆ ಈಗ ಜೆಡಿಎಸ್ ಕೆಟ್ಟ ದಿನಗಳನ್ನು ನೋಡುತ್ತಿದೆ. ಐದು ವರ್ಷ ಅಧಿಕಾರ ಮಾಡಿ ಅಂತ ಕೊಟ್ಟು ಬುಡ ಸಮೇತ ತೆಗೆಯೋಕೆ ಹೊರಟರಲ್ಲ, ಅದಕ್ಕೆ ಮರು ಜೀವ ಕೊಡುವುದಕ್ಕೆ ಪ್ರಯತ್ನ ಮಾಡುತ್ತಿದ್ದೇನೆ.ಪಕ್ಕದಲ್ಲಿಯೇ ಕೂತು ಹಳ್ಳ ತೋಡಿದ್ರಲ್ಲ, ಎಲ್ಲಾ ನೆನಪಿದೆ ನನಗೆ ಸರಿಯಾದ ಪಾಠ ಕಲಿಸದೇ ಬಿಡುವುದಿಲ್ಲ ಎಂದಿದ್ದಾರೆ.
ಇನ್ನೊಂದು ವರ್ಷದೊಳಗೆ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಏನ್ ಆಗುತ್ತೆ ಅಂತ ಕಾದು ನೋಡಿ. ರಾಜಕೀಯ ಎಂದರೆ ಅದು ಹರಿಯುವ ನೀರು. ಯಾವಾಗ ಏನೇನಾಗುತ್ತದೆಯೋ ನಮಗೂ ಗೊತ್ತಾಗಲ್ಲ. ಅವರಿಗೂ ಗೊತ್ತಾಗೋದಿಲ್ಲ. ಸಚಿವರೇ ಹೇಳುತ್ತಿದ್ದಾರೆ, ಕಾಂಗ್ರೆಸ್ (Congress) ನಾಯಕರೇ ದಿನ ಬೆಳಗಾದರೆ ಹೇಳುತ್ತಿದ್ದಾರಲ್ಲ, ನೀವು ಅವರನ್ನೇ ಕೇಳಿ ಎಂದು ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ದ ಟೀಕಾ ಪ್ರಹಾರ ನಡೆಸಿದ್ದಾರೆ.ಜೆಡಿಎಸ್ ಒಂದು ಸ್ಥಾನ ಗೆಲ್ಲಲ್ಲ ಎಂಬ ಡಿ.ಕೆ.ಶಿವಕುಮಾರ್ (D.K Shivakumar) ಹೇಳಿಕೆ ಕುರಿತು ಉತ್ತರಿಸಿ, ಅವರು ಭವಿಷ್ಯ ಹೇಳುವುದರಲ್ಲಿ ಎಕ್ಸಪರ್ಟ್ ಆಗಿದ್ದಾರೆ.
ಅವರು ಭವಿಷ್ಯ ಹೇಳಿರಬಹುದು. ನಾವೂ ರೀಸರ್ಚ್ ಮಾಡಿದ್ದೇವೆ .ಈ ರಾಜ್ಯದಲ್ಲಿ ಕಾಂಗ್ರೆಸ್ ತೆಗೆಯಲು ಏನು ಮಾಡಬೇಕೊ ಜನ ಅದನ್ನೇ ಮಾಡುತ್ತಾರೆ. ಹಿಂದೆ ಹೋದ ಕಡೆ ಜನ ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಎಂದು ಕೂಗುತ್ತಿದ್ದರು. ಅದು ಜನರ ಆಶೀರ್ವಾದ. ಈಗ ಕೇಂದ್ರದ ಮಂತ್ರಿ ಆಗುತ್ತಾರೆ ಎಂದು ಕೂಗುತ್ತಿದ್ದಾರೆ. ಅದಕ್ಕೆ ನಾನು ಋಣಿ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.