ರಾಜ್ಯದಲ್ಲಿ 60% ಕಮಿಷನ್ (60% commission) ಆರೋಪ ಇದೀಗ ರಾಜಕೀಯ ವಾಕ್ಸಮರಕ್ಕೆ (Political Discourse) ಕಾರಣವಾಗಿದ್ದು, ಕಮಿಷನ್ ತೆಗೆದುಕೊಂಡಿದ್ದರೆ (Commission is taken) ದಾಖಲೆ ಬಿಡುಗಡೆ ಮಾಡಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸವಾಲಿಗೆ ಪ್ರತಿ ಸವಾಲಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಗುತ್ತಿಗೆದಾರರ ಬಾಕಿ ಹಣದ ಪಟ್ಟಿ ರಿಲೀಸ್ (Money list release) ಮಾಡಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ (Social media) ಬರೆದುಕೊಂಡಿರುವ ಅವರು, ದಾಖಲೆ ಕೊಡಿ.. ದಾಖಲೆ ಕೊಡಿ ಎನ್ನುತ್ತಿದ್ದೀರಿ.. ಇಲ್ನೋಡಿ ಸನ್ಮಾನ್ಯ ಸಿದ್ದರಾಮಯ್ಯನವರೇ.. (Siddaramaiah..) ನಿಮ್ಮ ಖೊಟ್ಟಿ ಗ್ಯಾರಂಟಿ ಸರಕಾರದ ಲೂಟಿ (Looting by the government) ಸಾಕ್ಷಿಗುಡ್ಡೆ. ಪತ್ರಿಕೆಯವರೇ ನಿಮ್ಮ ಸಾಕ್ಷಿಗುಡ್ಡೆಯ ಸಾಕ್ಷಾತ್ಕಾರ ಮಾಡಿಸಿದ್ದಾರೆ. ನಿಮ್ಮ ಸರಕಾರ ಗುತ್ತಿಗೆದಾರರನ್ನು (Government contractors) ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ ಸಾಕ್ಷಿಗುಡ್ಡೆ ಸಾಕ್ಷ್ಯ ಸಾಲದೇ ಮುಖ್ಯಮಂತ್ರಿಗಳೇ..? ಚೆಂಬು ಹಾಕಿ ಹಂಡೆ ಹೊಡೆದರು ಎನ್ನುವಂತೆ ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ (Give crores of crores of loot) ಮಾಡುತ್ತಿದ್ದೀರಿ ಎಂದು ಟೀಕಿಸಿದ್ದಾರೆ.

ಗುತ್ತಿಗೆದಾರರ ₹32,000 ಕೋಟಿಯಷ್ಟು ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು (Your percentage is black) ಕೂಡ ಬಿದ್ದಿದೆ! ಸಾಲಸೋಲ ಮಾಡಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ದಯಾಮರಣಕ್ಕೆ ಅರ್ಜಿ ಬರೆಯುತ್ತಿದ್ದಾರೆ. ಗುತ್ತಿಗೆದಾರರ ಬಿಲ್ ಬಾಕಿ ಪಟ್ಟಿ (Bill Pending List) ನೋಡಿ..
•ಜಲ ಸಂಪನ್ಮೂಲ: ₹14,600 ಕೋಟಿ
•ಲೋಕೋಪಯೋಗಿ: ₹10,000 ಕೋಟಿ
•ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್: ₹3,100 ಕೋಟಿ
•ಸಣ್ಣ ನೀರಾವರಿ: ₹2,800 ಕೋಟಿ
•ಇತರೆ ಇಲಾಖೆ: ₹1,500 ಕೋಟಿ
ಒಟ್ಟು: ₹32,000 ಕೋಟಿ ಭಂಡತನ ಏಕೆ? ಆಗಿರುವ ತಪ್ಪು ಸರಿಪಡಿಸಿಕೊಳ್ಳಿ. ವಿನಾಕಾರಣ ಸಮರ್ಥನೆ ಲಾಯಕ್ಕಲ್ಲ. ಗುತ್ತಿಗೆದಾರರ ಬದುಕು ಉಳಿಸಿ ರಾಜ್ಯದ ಅಭಿವೃದ್ಧಿ (State development) ಕಡೆಗೆ ಗಮನ ಹರಿಸಿ. ಇದ್ದಿದ್ದನ್ನು ಇದ್ದಹಾಗೆ ಹೇಳಿದ್ದೇನೆ. ನೀವೂ, ನಿಮ್ಮ ಸಂಪುಟ ನನ್ನ ಮೇಲೆ ವಾಗ್ಯುದ್ಧಕ್ಕಿಳಿದರೆ ಉಪಯೋಗವೇನು? ಗುತ್ತಿಗೆದಾರರ ಬಾಕಿ ಪಾವತಿಗಿಂತ ನನ್ನನ್ನು ಟಾರ್ಗೆಟ್ ಮಾಡುವುದು (Targeting) ಮುಖ್ಯವಲ್ಲ ಎಂದು ಟೀಕಿಸಿದ್ದಾರೆ.