• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮಹಾರಾಷ್ಟ್ರದಲ್ಲಿ ಭಾರಿ ಮಳೆ, ಕೊಯ್ನಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆ – ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ

Shwetha Mohan by Shwetha Mohan
in ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌
ಮಹಾರಾಷ್ಟ್ರದಲ್ಲಿ ಭಾರಿ ಮಳೆ, ಕೊಯ್ನಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆ – ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ
0
SHARES
58
VIEWS
Share on FacebookShare on Twitter
  • ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಪ್ರಮಾಣ ಹೆಚ್ಚಳ
  • ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಭೀತಿ,ಸೇತುವೆಗಳ ಮುಳುಗಡೆ,ಸಂಚಾರಕ್ಕೆ ತೊಂದರೆ
  • ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತ

Belagavi: ಮಹಾರಾಷ್ಟ್ರದ(Maharashtra) ವಿವಿಧ ಜಲಾಶಯಗಳು ಮಳೆನೀರಿನಿಂದ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ, ಕೊಯ್ನಾ ಅಣೆಕಟ್ಟಿನಿಂದ(Koyna Dam)

ನೀರು ಬಿಡುಗಡೆ ಪ್ರಮಾಣವನ್ನು ಮತ್ತೊಮ್ಮೆ ಹೆಚ್ಚಿಸಲಾಗಿದೆ. ಪ್ರಸ್ತುತ ಸುಮಾರು 1 ಲಕ್ಷ ಕ್ಯೂಸೆಕ್ ನೀರು ಕೊಯ್ನಾದಿಂದ ಹೊರಬಿಡಲಾಗಿದೆ.

ಇದರ ಪರಿಣಾಮವಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ(Chikodi) ತಾಲೂಕಿನ ಕೃಷ್ಣಾ ಹಾಗೂ ಉಪನದಿಗಳಲ್ಲಿ ನೀರಿನ ಮಟ್ಟ ತೀವ್ರ ಏರಿಕೆಯಾಗುತ್ತಿದೆ.

ಘಟ್ಟ ಪ್ರದೇಶಗಳಲ್ಲಿ ಮಳೆಯ ಅಬ್ಬರ ಕ್ಷಣಕ್ಷಣಕ್ಕೂ ಜೋರಾಗುತ್ತಿದ್ದು, ಕೃಷ್ಣಾ ನದಿತೀರ(Krishna River) ಗ್ರಾಮಗಳಿಗೆ ಪ್ರವಾಹದ(flood) ಅಪಾಯ ಹೆಚ್ಚಾಗುವ ಭೀತಿ ವ್ಯಕ್ತವಾಗಿದೆ.

ವಿಶೇಷವಾಗಿ ಕೃಷ್ಣಾ, ದೂದಗಂಗಾ ಮತ್ತು ವೇದಗಂಗಾ ನದಿಗಳ ತೀರದಲ್ಲಿ ನೀರಿನ ಹರಿವು ಗಟ್ಟಿಯಾಗಿ ಹೆಚ್ಚಾಗುತ್ತಿದೆ. ಸ್ಥಳೀಯರು ಎಚ್ಚರಿಕೆಯಿಂದ ಇರಬೇಕೆಂದು ಆಡಳಿತವು ಸೂಚನೆ ನೀಡಿದೆ.

Heavy rains in Maharashtra
ಮಳೆಯು ಹೆಚ್ಚಾಗಿರುವ ಕಾರಣದಿಂದಾಗಿ ಮಹಾರಾಷ್ಟ್ರದ ಇತರ ಜಲಾಶಯಗಳೂ ಸಹ ನೀರು ಬಿಡುಗಡೆ ಮಾಡುತ್ತಿವೆ. ವಾರಣಾ ಅಣೆಕಟ್ಟಿನಿಂದ(Warana Dam) 36 ಸಾವಿರ ಕ್ಯೂಸೆಕ್,

ರಾಧಾನಗರಿ ಜಲಾಶಯದಿಂದ(Radhanagari Dam) 15 ಸಾವಿರ ಕ್ಯೂಸೆಕ್, ಹಾಗೆಯೇ ಕಾಳಮ್ಮವಾಡಿ ಅಣೆಕಟ್ಟಿನಿಂದ(Kalammavadi Dam) 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಆಗುತ್ತಿದೆ.

ಈ ಎಲ್ಲ ಜಲಾಶಯಗಳಿಂದ ಹೊರಹೊಮ್ಮುವ ನೀರು ನೇರವಾಗಿ ಕರ್ನಾಟಕದ ನದಿಗಳಿಗೆ(rivers of Karnataka) ಸೇರುವುದರಿಂದ ನಾಳೆ ಹೊತ್ತಿಗೆ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ನಿರೀಕ್ಷೆಯಿದೆ.

ಪ್ರಸ್ತುತ ಕೃಷ್ಣಾ ನದಿಗೆ 99 ಸಾವಿರ ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಆದರೆ ಜಲಾಶಯಗಳಿಂದ ಸೇರುವ ನೀರು ಸೇರಿ ಹೋದರೆ,

ಈ ಪ್ರಮಾಣ 1 ಲಕ್ಷ 75 ಸಾವಿರ ಕ್ಯೂಸೆಕ್‌ಗೂ ಮೀರಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಮಳೆಯ ಪ್ರಮಾಣ ನಿರಂತರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಸರ್ಕಾರವು(Government of Maharashtra) ನೀರು ಬಿಡುಗಡೆ ಪ್ರಮಾಣವನ್ನು ಹಂತ ಹಂತವಾಗಿ ಹೆಚ್ಚಿಸುತ್ತಿದೆ.

ಕರ್ನಾಟಕದ ಆಲಮಟ್ಟಿ ಜಲಾಶಯದಿಂದ(Almatti Dam) ಈಗಾಗಲೇ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಪ್ರವಾಹದ ಹೊಡೆತವನ್ನು ನಿಯಂತ್ರಿಸಲು ಎರಡೂ ರಾಜ್ಯಗಳ ನೀರಾವರಿ ಇಲಾಖೆಯ(Irrigation Department) ಅಧಿಕಾರಿಗಳು ಪರಸ್ಪರ ಸಂಪರ್ಕದಲ್ಲಿದ್ದಾರೆ.

ಇದರಿಂದ ನದಿಪಾತ್ರದ ಹಲವಾರು ಗ್ರಾಮಗಳು ಹಾಗೂ ತೀರ ಪ್ರದೇಶದ ಕೃಷಿ ಜಮೀನುಗಳು(Agricultural lands) ಸಂಪೂರ್ಣವಾಗಿ ಜಲಾವೃತಗೊಂಡಿವೆ.

ಹೊಲಗಳಲ್ಲಿ ಬೆಳೆಗಳು ನೀರಿನಲ್ಲಿ ಮುಳುಗುತ್ತಿರುವುದರಿಂದ ರೈತರಿಗೆ ಭಾರೀ ನಷ್ಟ ಉಂಟಾಗುವ ಭೀತಿ ಇದೆ. ಅಲ್ಲದೆ, ಗ್ರಾಮಗಳನ್ನು ಸಂಪರ್ಕಿಸುವ ಅನೇಕ ಸೇತುವೆಗಳು ನೀರಿನ ಪ್ರವಾಹದಲ್ಲಿ ಮುಳುಗಿ ಸಂಚಾರಕ್ಕೆ ಅಡಚಣೆಯಾಗಿದೆ.

ಸ್ಥಳೀಯ ಆಡಳಿತ ಈಗಾಗಲೇ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದ್ದು, ಅಗತ್ಯವಿದ್ದರೆ ತಕ್ಷಣ ಸ್ಥಳಾಂತರವಾಗುವಂತೆ ಸೂಚಿಸಿದೆ. ತುರ್ತು ಪರಿಸ್ಥಿತಿಗೆ ತಕ್ಕಂತೆ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಅಂತೆಯೇ, ಸುರಿಯುತ್ತಿರುವ ಭಾರಿ ಮಳೆ ರಾಜ್ಯದ ಜನಜೀವನವನ್ನು ಅಸ್ತವ್ಯಸ್ತಗೊಳಿಸುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ, ಸೇತುವೆಗಳು ನೀರಿನಲ್ಲಿ ಮುಳುಗಿದ ಪರಿಣಾಮ ಜನರ ಸಂಚಾರ ಸ್ಥಗಿತಗೊಂಡಿದೆ.

ಇದನ್ನು ಓದಿ : ಭೀಕರ ಮಳೆಗೆ ನಡುಗಿದ ಮುಂಬೈ, ಕೇವಲ 6 ಗಂಟೆಗಳಲ್ಲಿ 200 ಮಿಲಿ ಮೀಟರ್ ದಾಖಲೆಯ​ ಮಳೆ

ವಿದ್ಯುತ್ ಸರಬರಾಜು ವ್ಯತ್ಯಯ, ಬೆಳೆ ನಾಶ, ಮನೆಗಳಿಗೆ ನೀರು ನುಗ್ಗುವಂತಹ ಸಮಸ್ಯೆಗಳು ಹೆಚ್ಚಾಗಿವೆ.ಸ್ಥಳೀಯ ಆಡಳಿತವು ಎಲ್ಲಾ ತುರ್ತು ಕ್ರಮಗಳನ್ನು ಕೈಗೊಂಡಿದ್ದರೂ, ಜನರು ಹೆಚ್ಚಿನ ಜಾಗೃತಿಯಿಂದ ಇರಬೇಕಾಗಿ ಮನವಿ ಮಾಡಿದೆ.

Tags: BelagavifloodGovernment of MaharashtraHeavy rain alertKoyna DamKrishna Rivermaharashtra

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.