ಪೊಲೀಸರ ವಾಟ್ಸ್ಆ್ಯಪ್ ನೋಟಿಸ್ಗೆ (high court orders to whatsApp notices) ಬ್ರೇಕ್: ಹೈಕೋರ್ಟ್ ಆದೇಶ
ಆರೋಪಿಗಳಿಗೆ ನೋಟಿಸ್ ಕಡ್ಡಾಯವಾಗಿ ಭೌತಿಕವಾಗಿ ನೀಡಬೇಕು; ತನಿಖೆಗೆ ಸಹಕರಿಸದಿದ್ದರೆ ಬಂಧನ
ಎಫ್ಐಆರ್ ಅಥವಾ ನೋಟಿಸ್ ಡಿಜಿಟಲ್ ಮೂಲಕ ನೀಡಲು ಅಧಿಕಾರವಿಲ್ಲ ಎಂದ ನ್ಯಾಯಾಲಯ
Bengaluru : ಪೊಲೀಸರು ಆರೋಪಿಗಳಿಗೆ ನೋಟಿಸ್ ಅಥವಾ ಎಫ್ಐಆರ್ ಪ್ರತಿಯನ್ನು (high court orders to whatsApp notices) ವಾಟ್ಸ್ಆ್ಯಪ್ ಅಥವಾ ಇತರೆ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಕಳುಹಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ನೋಟಿಸ್ ಅನ್ನು ಕಡ್ಡಾಯವಾಗಿ ಭೌತಿಕವಾಗಿ ಆರೋಪಿಗೆ ತಲುಪಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಇತ್ತೀಚಿನ ಒಂದು ಪ್ರಕರಣ ವಿಚಾರಣೆ ವೇಳೆ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದ್ದು, ಇದು ರಾಜ್ಯದ ಪೊಲೀಸ್ ಇಲಾಖೆಗೆ ಮಹತ್ವದ ಮಾರ್ಗಸೂಚಿಯಾಗಿದೆ.

ನ್ಯಾಯಾಲಯದ ಪ್ರಕಾರ, ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆ ವಿಧಿಸಬಹುದಾದ ಪ್ರಕರಣಗಳಲ್ಲಿ ಆರೋಪಿಯನ್ನು ಬಂಧಿಸುವ ಮೊದಲು ನೋಟಿಸ್ ನೀಡುವುದು ಕಡ್ಡಾಯ.
ಆದರೆ ಕೆಲವೊಮ್ಮೆ ಆರೋಪಿಗಳು ಉದ್ದೇಶಪೂರ್ವಕವಾಗಿ ನೋಟಿಸ್ (Notice) ಸ್ವೀಕರಿಸದೆ ತನಿಖೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವ ಸಂದರ್ಭಗಳು ಕಂಡುಬರುತ್ತವೆ.
ಇಂತಹ ಸಂದರ್ಭಗಳಲ್ಲಿ ಪೊಲೀಸರು ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಬಹುದು ಎಂದು ನ್ಯಾಯಾಲಯ ತಿಳಿಸಿದೆ.
ಅಂದರೆ, ಆರೋಪಿಯು ತನಿಖೆಗೆ ಸಹಕರಿಸದಿದ್ದರೆ ಬಂಧನಕ್ಕೂ (high court orders to whatsApp notices) ಅವಕಾಶವಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಈ ಪ್ರಕರಣದಲ್ಲಿ ಹಣ ವಂಚನೆ ಆರೋಪ ಎದುರಿಸುತ್ತಿದ್ದ ವ್ಯಕ್ತಿಯೊಬ್ಬರು ತನ್ನ ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸಲು ಹೈಕೋರ್ಟ್ ಮೆಟ್ಟಿಲೇರಿದ್ದರು.
ಪೊಲೀಸರು ತನಗೆ ಸರಿಯಾದ ನೋಟಿಸ್ ನೀಡದೇ ಬಂಧಿಸಿದ್ದಾರೆ ಎಂದು ಅವರು ವಾದಿಸಿದ್ದರು. ಆದರೆ ವಿಚಾರಣೆ ವೇಳೆ ಪೊಲೀಸರು ಆರೋಪಿಗೆ ನೋಟಿಸ್ ನೀಡಲು
ಹಲವು ಬಾರಿ ಪ್ರಯತ್ನಿಸಿದರೂ ಅವರು ಸುಮಾರು 40 ದಿನಗಳ ಕಾಲ ತಲೆಮರೆಸಿಕೊಂಡು ತನಿಖೆಗೆ ಸಹಕರಿಸಿಲ್ಲ ಎಂಬುದು ದಾಖಲೆಗಳಿಂದ ಸಾಬೀತಾಯಿತು.
ಈ ಕಾರಣದಿಂದ ಪೊಲೀಸರು ಬಂಧನ ಮಾಡಿದ ಕ್ರಮ ಕಾನೂನುಬದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ.
ನ್ಯಾಯಪೀಠವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸಂಬಂಧಿತ ವಿಧಿಗಳನ್ನು ಉಲ್ಲೇಖಿಸಿ, ನೋಟಿಸ್ ಅನ್ನು ವಾಟ್ಸ್ಆ್ಯಪ್ (Whatsapp) ಅಥವಾ ಇತರ
ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಕಳುಹಿಸುವುದಕ್ಕೆ ಪೊಲೀಸರಿಗೆ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿದೆ.
ನೋಟಿಸ್ ಅನ್ನು ಭೌತಿಕವಾಗಿ ನೀಡುವುದು ಕಡ್ಡಾಯವಾಗಿದ್ದು, ಆರೋಪಿ ನೋಟಿಸ್ ಸ್ವೀಕರಿಸಲು ನಿರಾಕರಿಸಿದರೆ ಅಥವಾ ತನಿಖೆಗೆ ಸಹಕರಿಸದಿದ್ದರೆ ಪೊಲೀಸರಿಗೆ ಬಂಧನ ಮಾಡುವ ಅಧಿಕಾರವಿದೆ ಎಂದು ಹೇಳಿದೆ.
ಇದರಿಂದ ನೋಟಿಸ್ ನೀಡುವ ಪ್ರಕ್ರಿಯೆ ಮತ್ತು ಬಂಧನ ಕ್ರಮದ ಬಗ್ಗೆ ಸ್ಪಷ್ಟ ಮಾರ್ಗಸೂಚಿ ದೊರೆತಿದೆ.
ಒಟ್ಟಿನಲ್ಲಿ, ಈ ತೀರ್ಪು ಪೊಲೀಸ್ ಇಲಾಖೆಗೆ ಮಹತ್ವದ ಮಾರ್ಗದರ್ಶನ ನೀಡಿದ್ದು, ಮುಂದಿನ ದಿನಗಳಲ್ಲಿ ನೋಟಿಸ್ ನೀಡುವ ಪ್ರಕ್ರಿಯೆ ಹೆಚ್ಚು ಕಾನೂನುಬದ್ಧವಾಗಿ
ನಡೆಯುವ ಸಾಧ್ಯತೆ ಇದೆ. ಜೊತೆಗೆ ಆರೋಪಿಗಳು ತನಿಖೆಗೆ ಸಹಕರಿಸುವುದು ಅಗತ್ಯ ಎಂಬ ಸಂದೇಶವನ್ನೂ ನ್ಯಾಯಾಲಯ ನೀಡಿದೆ.
ಈ ತೀರ್ಪು ಭವಿಷ್ಯದಲ್ಲಿ ಇಂತಹ ಪ್ರಕರಣಗಳಿಗೆ ಮಾದರಿಯಾಗಿ ಪರಿಣಮಿಸಬಹುದು ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಇದನ್ನು ಓದಿ : https://vijayatimes.com/new-rules-for-upi-payments/