ರಾಜ್ಯದ ಹಲವೆಡೆಗಳಲ್ಲಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಬೆಂಗಳೂರು, ಫೆ. 06: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತರು ಕರೆ ನೀಡಿರುವ ಹೆದ್ದಾರಿ ಬಂದ್ ಪ್ರತಿಭಟನೆ ರಾಜ್ಯಾದ್ಯಂತ ನಡೆದಿದೆ. ರೈತರು ಹೆದ್ದಾರಿಗೆ ಲಗ್ಗೆಯಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರಗಳಲ್ಲಿ ರಸ್ತೆಗಳನ್ನು ತಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ.

ಬೆಂಗಳೂರಿನ ದೇವನಹಳ್ಳಿ, ಯಲಹಂಕ, ನೈಸ್ ರಸ್ತೆ, ಮೈಸೂರು ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿರುವ ರೈತರು ರಸ್ತೆ ತಡೆ ನಡೆಸಿದ್ದಾರೆ. ರಸ್ತೆ ತಡೆಯಿಂದಾಗಿ ವಾಹನ ಸಂಚಾರಕ್ಕೆ ಅಡ್ದಿಯಾಗಿದ್ದು, ರಸ್ತೆಗಳಲ್ಲಿ ಸಾವಿರಾರು ವಾಹನಗಳು ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌ ಉಂಟಾಯಿತು.

ಕೋಲಾರ-ಬಂಗಾರಪೇಟೆ ಹೆದ್ದಾರಿ, ದಾವಣಗೆರೆ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ, ಬೆಂಗಳೂರು-ಮೈಸೂರು, ಬಿಡದಿ-ಮಂಡ್ಯ ರಾಜ್ಯ ಹೆದ್ದಾರಿ ರಾಯಚೂರು ಅಸ್ಕಿಹಾಲ್, ತುಮಕೂರು, ಕೊಪ್ಪಳ ಬಳಿ ರಸ್ತೆ ತಡೆ ನಡೆಸಿದ್ದಾರೆ. ಇನ್ನು ಹಂಚಾಳ ಗೇಟ್ ಬಳಿ ರಾಜ್ಯ ಹೆದ್ದಾರಿಯಲ್ಲಿ ಮುಳ್ಳು ತಂತಿ ಹಾಕಿ ರೈತರು ರಸ್ತೆ ತಡೆ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

Exit mobile version