• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಹಿಂದಿಗೆ ರಿಮೇಕ್ ಆಗುತ್ತಿದೆ ಪ್ರಭಾಸ್ ನಟನೆಯ ಛತ್ರಪತಿ ಚಿತ್ರ

Sharadhi by Sharadhi
in ಮನರಂಜನೆ
ಹಿಂದಿಗೆ ರಿಮೇಕ್ ಆಗುತ್ತಿದೆ ಪ್ರಭಾಸ್ ನಟನೆಯ ಛತ್ರಪತಿ ಚಿತ್ರ
0
SHARES
0
VIEWS
Share on FacebookShare on Twitter

ಟಾಲಿವುಡ್​ನಲ್ಲಿ ಪ್ರಖ್ಯಾತಿಯನ್ನು ಪಡೆದಿರುವ ತೆಲುಗು ನಟ ಬೆಲಂಕೊಂಡ ಸಾಯಿ ಶ್ರೀನಿವಾಸ್​ ಇದೀಗ ಬಾಲಿವುಡ್​ ಚಿತ್ರರಂಗಕ್ಕೆ ಪದಾರ್ಪಣೆ ಮಾಡುವ ತಯಾರಿಯನ್ನು ನಡೆಸಿದ್ದಾರೆ. ಈಗಾಗಲೇ ಪ್ರಭಾಸ್​ ನಟನೆಯ ಸೌತ್​ ಇಂಡಸ್ಟ್ರಿಯ ಸೂಪರ್ ಹಿಟ್ ಸಿನಿಮಾ ‘ಛತ್ರಪತಿ’ ಚಿತ್ರವನ್ನೇ ಹಿಂದಿಯಲ್ಲಿ ರಿಮೇಕ್​ ಮಾಡಲಾಗುತ್ತಿದ್ದು, ಬೆಲಂಕೊಂಡ ಸಾಯಿ ಶ್ರೀನಿವಾಸ್ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

ಅದ್ದೂರಿ ವೆಚ್ಚದಲ್ಲಿ ಪೆನ್ ಸ್ಟುಡಿಯೋಸ್ ಬ್ಯಾನರ್​ನಲ್ಲಿ ಸಿದ್ಧವಾಗಲಿರುವ ಈ ಚಿತ್ರವನ್ನು ಡಾ. ಜಯಂತಿ ಲಾಲ್ಗಡ ಬಂಡವಾಳ ಹೂಡುತ್ತಿದ್ದಾರೆ. ವಿಶೇಷ ಏನೆಂದರೆ, ಬೆಲಂಕೊಂಡ ಶ್ರೀನಿವಾಸ ಅವರ ಮೊದಲ ಸಿನಿಮಾ ಅಲ್ಲುಡು ಸೀನು ಸಿನಿಮಾ ನಿರ್ದೇಶನ ಮಾಡಿದ್ದ ವಿ. ವಿ. ವಿನಾಯಕ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಇವರಿಗೂ ಇದು ಮೊದಲ ಬಾಲಿವುಡ್ ಸಿನಿಮಾವಾಗಿದೆ.

ಛತ್ರಪತಿ ಸಿನಿಮಾವನ್ನು ಮೂಲವನ್ನು ರಾಜಮೌಳಿ ನಿರ್ದೇಶನ ಮಾಡಿದ್ದು, ಪ್ರಭಾಸ್, ಶ್ರೀಸರಣ್ ಸೇರಿ ಸಾಕಷ್ಟು ಮಂದಿ ಸ್ಟಾರ್ ಕಲಾವಿದರು ನಟಿಸಿದ್ದರು. ಇದೀಗ ಅದೇ ಚಿತ್ರವನ್ನು ವಿ. ವಿ ವಿನಾಯಕ್ ಬಾಲಿವುಡ್​ನಲ್ಲಿ ನಿರ್ದೇಶನ ಮಾಡಲಿದ್ದು, ಈಗಿನ ಕಾಲಘಟ್ಟಕ್ಕೆ ತಕ್ಕಂತೆ ಒಂದಷ್ಟು ಬದಲಾವಣೆಯನ್ನೂ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಪ್ರೀ ಪ್ರೊಡಕ್ಷನ್ ಕೆಲಸ ಶುರುವಾಗಿದ್ದು, ಶೀಘ್ರದಲ್ಲಿ ಸಿನಿಮಾ ಕುರಿತ ಹೆಚ್ಚಿನ ಮಾಹಿತಿಯನ್ನು ತಂಡ ನೀಡಲಿದೆ.

ರಿಮೇಕ್ ಸಿನಿಮಾ ಮಾಡುವುದರಲ್ಲಿ ಸಿದ್ಧ ಹಸ್ತರಾಗಿರುವ ನಿರ್ದೇಶಕ ವಿನಾಯಕ, ತಮಿಳಿನ ಕೈದಿ ಚಿತ್ರವನ್ನು ತೆಲುಗಿನಲ್ಲಿ ಕೈದಿ ನಂ. 150 ಸಿನಿಮಾ ಮಾಡುವ ಮೂಲಕ ಮೆಗಾಸ್ಟಾರ್ ಚಿರಂಜೀವಿಯವರನ್ನು ಮರಳಿ ಚಿತ್ರರಂಗಕ್ಕೆ ಕರೆತಂದಿದ್ದರು. ಇದೀಗ ಛತ್ರಪತಿ ಸಿನಿಮಾ ಮೂಲಕ ಬಾಲಿವುಡ್​ಗೆ  ಹೊರಟಿದ್ದಾರೆ.

 ‘ಬಾಲಿವುಡ್​ಗೆ ಪದಾರ್ಪಣೆ ಮಾಡುವುದಕ್ಕೆ ಇದು ಹೇಳಿಮಾಡಿಸಿದ ಕಥೆ. ಪೆನ್ ಸ್ಟುಡಿಯೋಸ್ ಅವರ ಜತೆ ಕೈ ಜೋಡಿಸುತ್ತಿರುವುದು ಒಂದೊಳ್ಳೆ ಅವಕಾಶ. ನನ್ನ ಸಿನಿಮಾ ಕರಿಯರ್​ನ ಮೊದಲ ನಿರ್ದೇಶರ ಜತೆ ಈ ಸಿನಿಮಾ ಮಾಡುತ್ತಿರುವುದು ಖುಷಿಯ ವಿಚಾರ. ಪ್ರಭಾಸ್​ ನಿಭಾಯಿಸಿದ ಪಾತ್ರವನ್ನು ತೆರೆಮೇಲೆ ತರುವುದೂ ಅಷ್ಟೇ ದೊಡ್ಡ ಜವಾಬ್ದಾರಿ. ಅದನ್ನೂ ಅಷ್ಟೇ ಸಲೀಸಾಗಿ ನಿಭಾಯಿಸಲಿದ್ದೇನೆ’ ಎಂಬುದಾಗಿ ನಾಯಕ ಬೆಲಂಕೊಂಡ ಸಾಯಿ ಶ್ರೀನಿವಾಸ್ ಈ ಚಿತ್ರದ ಕುರಿತಾಗಿ ಮಾಡಿದ್ದಾರೆ.

Related News

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ
Sports

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ

May 26, 2023
ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​
ಪ್ರಮುಖ ಸುದ್ದಿ

ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​

May 26, 2023
ತೆಲುಗು ಖ್ಯಾತ ನಟ ಪ್ರತಿದಿನ ರಾತ್ರಿ ಡೇಟಿಂಗ್​ಗೆ ಬರುವಂತೆ ಹಿಂಸೆ ಕೊಟ್ಟಿದ್ದರು : ಹನ್ಸಿಕಾ ಮೋಟ್ವಾನಿ
ಪ್ರಮುಖ ಸುದ್ದಿ

ತೆಲುಗು ಖ್ಯಾತ ನಟ ಪ್ರತಿದಿನ ರಾತ್ರಿ ಡೇಟಿಂಗ್​ಗೆ ಬರುವಂತೆ ಹಿಂಸೆ ಕೊಟ್ಟಿದ್ದರು : ಹನ್ಸಿಕಾ ಮೋಟ್ವಾನಿ

May 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.