ಹಿಂದೂಗಳ ಭಾವನೆಗಳಿಗೆ ಧಕ್ಕೆ: ಬಿಗ್‌ಬಿ ವಿರುದ್ಧ ಎಫ್ಐಆರ್

ಮುಂಬೈ, ನ.03: ಕರ್ಮವೀರ್‌ ಎಂಬ ವಿಶೇಷ ಸಂಚಿಕೆಯಲ್ಲಿ ಬಿಗ್​ ಬಿ ಕೇಳಿದ ಪ್ರಶ್ನೆಯೊಂದಕ್ಕೆ ಎಫ್​ಐಆರ್​ ದಾಖಲಾಗಿದೆ. ಕೆಬಿಸಿ ನಿರೂಪಕ ಬಿಗ್‌ ಬಿ ಅಮಿತಾಭ್‌ ಬಚ್ಚನ್‌ ಹಾಗೂ ಸೋನಿ ಟಿವಿ ಕಾರ್ಯಕ್ರಮದ ಮೇಕರ್ಸ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ.

ಕೌನ್​ ಬನೇಗಾ ಕರೋಡ್​ಪತಿ ಕಾರ್ಯಕ್ರಮದಲ್ಲಿ ಶುಕ್ರವಾರ ನಟ ಅನುಪ್ ಸೋನಿ ಮತ್ತು ಸಾಮಾಜಿಕ ಕಾರ್ಯಕರ್ತ ಬೆಜ್ವಾಡಾ ವಿಲ್ಸನ್ ಎಂಬುವರು ಹಾಟ್​ ಸೀಟ್​ನಲ್ಲಿ ಕುಳಿತಿದ್ದರು. ಬಿಗ್​ ಬಿ ಅಮಿತಾಭ್ ಬಚ್ಚನ್ 6,40,000 ರೂಪಾಯಿಗೆ ಪ್ರಶ್ನೆಯೊಂದನ್ನು ಕೇಳಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿಯನ್ನು ಎಬ್ಬಿಸಿದೆ.

927 ಡಿಸೆಂಬರ್ 25ರಂದು ಡಾ.ಬಿ.ಆರ್.ಅಂಬೇಡ್ಕರ್ಹಾಗೂ ಅವರ ಅನುಯಾಯಿಗಳು ಯಾವ ಗ್ರಂಥದ ಪ್ರತಿಗಳನ್ನು ಸುಟ್ಟು ಹಾಕಿದರು?

ಆಯ್ಕೆಗಳು: ಎ. ವಿಷ್ಣುಪುರಾಣ, ಬಿ. ಭಗವದ್ಗೀತೆ, ಸಿ. ಋಗ್ವೇದದಡಿ, ಡಿ. ಮನುಸ್ಮೃತಿ


ಸ್ಪರ್ಧಿಗಳು ಆಯ್ಕೆ ಡಿ. ಮನುಸ್ಮೃತಿಯನ್ನು ಉತ್ತರವಾಗಿ ಹೇಳಿದ್ದರು. ಇದು ಸರಿ ಉತ್ತರವೆಂದು ಘೋಷಿಸಿದ ಅಮಿತಾಭ್​ ಬಚ್ಚನ್, ವಿವರಣೆಯಾಗಿ ಡಾ.ಬಿ.ಆರ್.ಅಂಬೇಡ್ಕರ್​ ಅವರು ಪ್ರಾಚೀನ ಹಿಂದೂ ಧರ್ಮ ಗ್ರಂಥದ ಪ್ರತಿಗಳನ್ನು ಖಂಡಿಸಿ ಸುಟ್ಟುಹಾಕಿದರು ಎಂದು ವಿವರಣೆ ನೀಡಿದ್ದಾರೆ.

ಇದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ನೆಟ್ಟಿಗರು ಟ್ವಿಟ್ಟರ್​ನಲ್ಲಿ ಕಾರ್ಯಕ್ರಮದ​ ವಿರುದ್ಧ ಕಿಡಿಕಾರಿದ್ದಾರೆ. ಹಾಗೆಯೇ ಸಿನಿಮಾ ನಿರ್ಮಾಪಕ ವಿವೇಕ್​ ಅಗ್ನಿಹೋತ್ರಿ ತಮ್ಮ ಟ್ವಿಟರ್​​ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

ಅದರ ಜತೆಗೆ ಹಿಂದು ಜನ ಜಾಗರಣಾ ಸಮಿತಿಯು ಅಮಿತಾಭ್‌ ಬಚ್ಚನ್‌ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.

Exit mobile version