ಹಂಸಲೇಖ ವಿರುದ್ದ ಮತ್ತೊಂದು ದೂರು ದಾಖಲು

ಬೆಂಗಳೂರು ನ 18 :  ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಅಖಿಲ ಭಾರತ ಬ್ರಾಹ್ಮಣ ಸಮಾಜದ ಉಪಾಧ್ಯಕ್ಷ ಕೃಷ್ಣ ದೂರು ದಾಖಲಿಸಿದ್ದಾರೆ. ಪೇಜಾವರ ಶ್ರೀಗಳ ವಿರುದ್ಧ ಮಾತನಾಡಿದಕ್ಕೆ  ಪೊಲೀಸ್ ಕಮೀಷನರ್​ಗೆ ದೂರು ನೀಡಿದ್ದಾರೆ.

ಪೇಜಾವರ ಶ್ರೀಗಳ ವಿರುದ್ಧ ಸಂಗೀತ ನಿರ್ದೇಶಕ ಹಂಸಲೇಖ ಮಾತನಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆನ್ನೆ ಹನುಮಂತ ನಗರದಲ್ಲಿ ಹಂಸಲೇಖ ವಿರುದ್ಧ ದೂರು ದಾಖಲಾಗಿತ್ತು. ಇಂದು ಅಖಿಲ ಭಾರತ ಬ್ರಾಹ್ಮಣ ಸಮಾಜದ ಉಪಾಧ್ಯಕ್ಷ ಕೃಷ್ಣ ಎಂಬುವವರು  ಪೊಲೀಸ್ ಕಮೀಷನರ್​ಗೆ ದೂರು ನೀಡಿದ್ದಾರೆ. ನಾಲ್ಕು ಗೋಡೆ ಮುಂದೆ ಶ್ರೀಗಳ ಕ್ಷಮೆ ಕೇಳಿದ್ರೆ ಸಾಕಾಗೋದಿಲ್ಲ. ವಿದ್ಯಾಪೀಠ ಸರ್ಕಲ್ ಬಳಿ ಇರುವ ಶ್ರೀಗಳ ಬೃಂದಾವನದ ಮುಂದೆ ಬಂದು ಹಂಸಲೇಖ ಕ್ಷಮೆ ಕೇಳ್ಬೇಕು. ಎಲ್ಲಿ ಅಪಮಾನ ಆಗಿದ್ಯೋ ಅಲ್ಲಿಯೇ ಕ್ಷಮೇ ಕೇಳಬೇಕು. ಇಲ್ಲದಿದ್ದರೆ ರಸ್ತೆಗಿಳಿದು ಪ್ರತಿಭಟನೆ ಮಾಡೋದಾಗಿ ಎಚ್ಚರಿಕೆ ನೀಡಿದ್ದಾರೆ.

Exit mobile version