Bengaluru: ಬೆಂಗಳೂರು (Bengaluru) ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಆಯ್ಕೆ ಪಟ್ಟಿ ಪ್ರಕಟವಾಗಿದೆ. ಈ ಬಾರಿ ಇಸ್ರೋ (ISRO) ಅಧ್ಯಕ್ಷ ಸೋಮನಾಥ್ ಮತ್ತು ರಾಜ್ಯಸಭಾ ಸದಸ್ಯರಾದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ (H D Devegowda) ಅವರನ್ನು ಆಯ್ಕೆ ಮಾಡಲಾಗಿದೆ ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಈ ಇಬ್ಬರು ಗಣ್ಯರ ಹೆಸರನ್ನು ಬೆಂಗಳೂರು ವಿಶ್ವವಿದ್ಯಾಲಯದ ಆಯ್ಕೆ ಸಮಿತಿಯು ಶಿಫಾರಸು ಮಾಡಿತ್ತು. ಇದಕ್ಕೆ ಕರ್ನಾಟಕದ #Karnataka ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಈ ಮೂಲಕ ಇಬ್ಬರ ಹೆಸರು ಅಂತಿಮಗೊಂಡಿದ್ದು, ಇನ್ನು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವದಂದು ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತಿದೆ.
ಸೆಪ್ಟೆಂಬರ್ (September) 29ಕ್ಕೆ ನಿಗದಿಯಾಗಿರುವ ಕರ್ನಾಟಕ ಬಂದ್ನ (Karnataka Bandh) ಕಾರಣಕ್ಕಾಗಿ ಘಟಿಕೋತ್ಸವವನ್ನು ವಿಶ್ವವಿದ್ಯಾಲಯವು ಮುಂದೂಡಲಾಗಿದ್ದು, ಶೀಘ್ರದಲ್ಲಿಯೇ ಹೊಸ ದಿನಾಂಕ ನಿಗದಿ ಮಾಡಿ ಘಟಿಕೋತ್ಸವ ನಡೆಸಲಾಗುವುದು ಎಂದು ವಿಶ್ವವಿದ್ಯಾಲಯದ ಮೂಲಗಳು ತಿಳಿಸಿವೆ.
ಮಾಜಿ ಪ್ರಧಾನಿ ದೇವೇಗೌಡ (ಹಿರಿಯ ರಾಜಕಾರಣಿ)
ಜೆಡಿಎಸ್ನ (JDS) ಸ್ಥಾಪಕರಾದ ಮಾಜಿ ಪ್ರಧಾನಿ ದೇವೇಗೌಡ ಅವರು ತಮ್ಮ 90ನೇ ವಯಸ್ಸಿನಲ್ಲಿ ಸಕ್ರಿಯ ರಾಜಕಾರಣದಲ್ಲಿದ್ದು, ಕರ್ನಾಟಕದಿಂದ ರಾಜ್ಯ ಸಭಾ ಸದಸ್ಯರಾಗಿದ್ದಾರೆ. ಇಂದಿಗೂ ಕನ್ನಡಿಗರ ಪರ ಸಂಸತ್ತಿನಲ್ಲಿ ಧ್ವನಿ ಎತ್ತುತ್ತಿರುವ ಇವರು ಕರ್ನಾಟಕ ಕಂಡ ಏಕೈಕ ಪ್ರಧಾನಿ ಎಂಬ ಹೆಗ್ಗಳಿಕೆ ಭಾಜನರಾಗಿದ್ದಾರೆ. ಸದ್ಯ ಅವರ ರಾಜಕೀಯ ಸಾಧನೆ ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.
ಇಸ್ರೋ ಅಧ್ಯಕ್ಷ ಸೋಮನಾಥ್:
ಭಾರತ ಹೊಸ ದಾಖಲೆಯೊಂದನ್ನು ಸೃಷ್ಟಿಸಿದ್ದು, ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಮಹಾತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ 3 (Chandrayaan-3) ಯಶಸ್ವಿಯಾಗಿದೆ. ಆಗಸ್ಟ್ 23ರಂದು ಸಂಜೆ ಚಂದಿರನ ಅಂಗಳಕ್ಕೆ ವಿಕ್ರಮ್ ಲ್ಯಾಂಡರ್ (Vikram Landar) ಇಳಿದಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆ ಭಾರತದ ಪಾಲಾಗಿತ್ತು. ಈ ಎಲ್ಲಾ ಸಾಧನೆ ಮಾಡಿದ ತಂಡದ ನಾಯಕ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ (S Somanath) ಆಗಿದ್ದರು ಹಾಗಾಗಿ ಈ ಬಾರಿಯ ಗೌರವ ಡಾಕ್ಟರೇಟ್ಗೆ ಅವರನ್ನೇ ಆಯ್ಕೆ ಮಾಡಲಾಗಿದೆ.
ಭವ್ಯಶ್ರೀ ಆರ್.ಜೆ