• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹೋಟೆಲ್‌ಗಳಿಗೆ ಲೈಸೆನ್ಸ್ ಶುಲ್ಕದ ಹೊರೆ!

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಹೋಟೆಲ್‌ಗಳಿಗೆ ಲೈಸೆನ್ಸ್ ಶುಲ್ಕದ ಹೊರೆ!
0
SHARES
0
VIEWS
Share on FacebookShare on Twitter

ಬೆಂಗಳೂರು, ಜ. 22: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ನೆಲಕಚ್ಚಿದ್ದ ಉದ್ದಿಮೆಗಳ ನೆರವಿಗೆ ನಿಲ್ಲಬೇಕಾಗಿದ್ದ ಸರ್ಕಾರ, ಉದ್ಯಮಿಗಳಿಂದ ಯಾವುದೇ ದಯೆ-ದಾಕ್ಷಿಣ್ಯವಿಲ್ಲದೆ ಪರವಾನಗಿ ಶುಲ್ಕ ಮತ್ತು ಇತರೆ ತೆರಿಗೆ ವಸೂಲಿಗಿಳಿಯುವ ಮೂಲಕ ಉದ್ಯಮಗಳು ಮತ್ತಷ್ಟು ಅದಃಪತನಕ್ಕಿಳಿಯುವಂತೆ ಮಾಡುತ್ತಿರುವುದು ವಿಪರ್ಯಾಸವೇ ಸರಿ. ಕೋವಿಡ್-19 ಹಿನ್ನೆಲೆಯಲ್ಲಿ ಸುಮಾರು 9 ತಿಂಗಳ ಕಾಲ ಸ್ಥಗಿತಗೊಂಡಿದ್ದ ಎಲ್ಲ ಉದ್ದಿಮೆಗಳ ಆರ್ಥಿಕ ಚಟುವಟಿಕೆಗಳನ್ನು ಸಕ್ರಿಯಗೊಳಿಸಲು ಕೇಂದ್ರ ಸರ್ಕಾರ ಘೋಷಿಸಿರುವ ಆತ್ಮ ನಿರ್ಭರ್ ಈಗ ಪ್ರಶ್ನಾರ್ಹವಾಗಿದೆ.

ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಉದ್ಯಮಗಳ, ಕೈಗಾರಿಕೆಗಳ ನೆರವಿಗೆ ನಿಲ್ಲಬೇಕಾಗಿತ್ತು. ಅವರಿಗೆ ಪೂರಕವಾದ ಪರವಾನಗಿ ನವೀಕರಣ, ಶುಲ್ಕ ಇಳಿಕೆ ಮುಂತಾದವುಗಳಲ್ಲಿ ಸರ್ಕಾರ ಸಹಾಯ ಹಸ್ತ ಚಾಚಬೇಕಿತ್ತು. ಆದರೆ, ಇದಾವುದನ್ನೂ ಸರ್ಕಾರ ಮಾಡುತ್ತಿಲ್ಲ. ಯಥಾರೀತಿ ಶುಲ್ಕ ವಸೂಲಿ ಮಾಡುತ್ತಿದೆ. ಪರವಾನಗಿ ಶುಲ್ಕ ಕಟ್ಟದಿದ್ದರೆ ಉದ್ಯಮಗಳನ್ನು ಪ್ರಾರಂಭ ಮಾಡುವಂತೆಯೂ ಇಲ್ಲ ಎಂಬ ಕಟ್ಟಾಜ್ಞೆ ಹೊರಡಿಸಿದೆ.

 ಎಲ್ಲ ಉದ್ಯಮಗಳಂತೆ ಹೊಟೇಲ್ ಉದ್ಯಮಗಳೂ ಕೂಡ ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದವು. ತ್ರಿ ಸ್ಟಾರ್, ಫೈವ್ ಸ್ಟಾರ್ ಹೊಟೇಲ್‍ಗಳು ಕಳೆದ 10 ತಿಂಗಳಿಂದಲೂ ಸಂಪೂರ್ಣವಾಗಿ ಬಂದ್ ಆಗಿದ್ದವು. ಕೆಲವು ಹೊಟೇಲ್‍ಗಳು ಕೋವಿಡ್ ಕೇಂದ್ರಗಳಾಗಿ ಮಾರ್ಪಟ್ಟಿದ್ದವು. ಲಾಕ್‍ಡೌನ್ ತೆರವಾದ ಹಿನ್ನೆಲೆಯಲ್ಲಿ ಇಂತಹ ಹೊಟೇಲ್‍ಗಳು ಉದ್ಯಮ ಪ್ರಾರಂಭಿಸಲು ಈಗ ಪರವಾನಗಿ ನವೀಕರಣವನ್ನು ಕಡ್ಡಾಯವಾಗಿ ಮಾಡಬೇಕು. ಅದರಲ್ಲೂ ಸಂಪೂರ್ಣ ಶುಲ್ಕವನ್ನು ಕಟ್ಟಬೇಕೆಂದು ಸರ್ಕಾರ ಆದೇಶ ಮಾಡಿದೆ.

ಸಿಎಲ್-6, ಸಿಎಲ್-6ಎ ಸನ್ನದ್ದುದಾರರು 12 ತಿಂಗಳ ಸಂಪೂರ್ಣ ಪರವಾನಗಿ ಶುಲ್ಕವನ್ನು ಕಟ್ಟಬೇಕಾಗಿದೆ. ಇಲ್ಲದಿದ್ದರೆ ತಮ್ಮ ಹೊಟೇಲ್ ಉದ್ಯಮಗಳನ್ನು ಪ್ರಾರಂಭಿಸುವಂತಿಲ್ಲ. ಪರವಾನಗಿ ಪಡೆಯದಿದ್ದರೆ ಕೆಎಸ್‍ಬಿಎಲ್‍ನಿಂದ ಮದ್ಯವನ್ನು ಖರೀದಿಸುವಂತಿಲ್ಲ. ಕೋವಿಡ್-19 ನಿಮಿತ್ತ ಹಲವು ಹೊಟೇಲ್‍ಗಳನ್ನು ಕ್ವಾರಂಟೈನ್ ಕೇಂದ್ರಗಳನ್ನಾಗಿ ಮಾರ್ಪಾಡು ಮಾಡಲಾಗಿತ್ತು. ಆಸ್ಪತ್ರೆಯವರಿಗೆ ಹೊಟೇಲ್ ಕೊಠಡಿಗಳನ್ನು ಉಪಯೋಗಿಸಲು ನೀಡಲಾಗಿತ್ತು. ಹಾಗಾಗಿ ಯಾವುದೇ ಅಬಕಾರಿ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗಿರಲಿಲ್ಲ.

2020-21ನೆ ಸಾಲಿಗೆ ಬಾಕಿ ಇರುವ ಸನ್ನದ್ದುಶುಲ್ಕ ಪಾವತಿಸಲು ವಿನಾಯಿತಿ ನೀಡಬೇಕೆಂದು ಹಲವು ಹೊಟೇಲ್‍ಗಳವರು ಮನವಿ ಮಾಡಿದರೂ ಸರ್ಕಾರ ಇದಕ್ಕೆ ಕ್ಯಾರೆ ಎಂದಿಲ್ಲ. ಲಾಕ್‍ಡೌನ್ ಸಂದರ್ಭದಲ್ಲಿ ಹೊಟೇಲ್ ಸ್ಥಗಿತಗೊಳಿಸಿದ ಅವಧಿ, ಕ್ವಾರಂಟೈನ್ ಕೇಂದ್ರವಾಗಿ

ಈಗಾಗಲೇ ಕೆಲವರು ಆರು ತಿಂಗಳ ಪರವಾನಗಿ ಶುಲ್ಕ ಕಟ್ಟಿದ್ದಾರೆ. ಕೆಲವರು ವ್ಯಾಪಾರ-ವಹಿವಾಟು ಇಲ್ಲದೆ ಲೈಸೆನ್ಸ್ ಶುಲ್ಕ ಕಟ್ಟಲೂ ಆಗದೆ ಪರದಾಡುತ್ತಿದ್ದಾರೆ. ಹೊಟೇಲ್‍ಗಳನ್ನು ಕೋವಿಡ್ ಸೆಂಟರ್‍ಗಳಿಗೆ ನೀಡಿದವರಿಗೆ ವಿನಾಯಿತಿ ನೀಡಬೇಕೆಂದು ಹಲವರು ಸರ್ಕಾರಕ್ಕೆ ಮನವಿ ಕೂಡ ಮಾಡಿದ್ದಾರೆ. ಬೆಂಗಳೂರು ನಗರದಲ್ಲಿ ಸಾವಿರಾರು ಇಂತಹ ಹೊಟೇಲ್‍ಗಳಿವೆ. 20 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳಿದ್ದಾರೆ. ಇವರನ್ನು ನಂಬಿ ಒಂದು ಲಕ್ಷ ಕುಟುಂಬಗಳಿವೆ. ಕೆಲವರು ಸಾಲ ಮಾಡಿ ಹೊಟೇಲ್ ಪ್ರಾರಂಭಿಸಿದವರು ಸಾಲ ಕಟ್ಟಲಾಗದೆ ಪರದಾಡುತ್ತಿದ್ದಾರೆ. ಇಂತಹವರು ಕನಿಷ್ಟ ಲೈಸೆನ್ಸ್ ಶುಲ್ಕದಲ್ಲಾದರೂ ವಿನಾಯಿತಿ ನೀಡಿ ಎಂದು ಮನವಿ ಮಾಡುತ್ತಿದ್ದಾರೆ.

ಸರ್ಕಾರದ ಈ ಹೊರೆಯ ಜತೆ ಬಿಬಿಎಂಪಿ, ಬಿಡಬ್ಲ್ಯೂಎಸ್‍ಎಸ್‍ಬಿ, ಬೆಸ್ಕಾಂ, ಇನ್ನಿತರ ತೆರಿಗೆ ಹೊರೆಗಳು ಕೂಡ ಹೆಚ್ಚಾಗಿವೆ. ಈ ಎಲ್ಲ ಶುಲ್ಕದ ಬರೆಗಳ ಜತೆ ಉದ್ದಿಮೆಗಳನ್ನು ನಡೆಸಬೇಕೆ ಎಂದು ಹಲವರು ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ ಆರೇಳು ತಿಂಗಳಿನಿಂದ ಯಾವುದೇ ಬಾರ್ ಅಂಡ್ ರೆಸ್ಟೋರೆಂಟ್‍ನ ವ್ಯವಹಾರ ನಡೆದಿಲ್ಲ. ಸಿಎಲ್-6ಎನಲ್ಲೂ ಕೂಡ ಅಬಕಾರಿ ವ್ಯವಹಾರಗಳು ನಡೆದಿಲ್ಲವಾದರೂ ಸರ್ಕಾರ ಪರವಾನಗಿ ಶುಲ್ಕ ಕಟ್ಟಲು ಹೇಳಿದೆ.

ತಿಂಗಳಿಗೆ 75 ಸಾವಿರದಿಂದ ಒಂದು ಲಕ್ಷದವರೆಗೆ ಪರವಾನಗಿ ಶುಲ್ಕ ಕಟ್ಟಬೇಕು. ಲಾಕ್‍ಡೌನ್ ಅವಧಿಯಲ್ಲಿ ವಿನಾಯಿತಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಆದರೆ, ನಮ್ಮ ಮನವಿಯನ್ನು ಈವರೆಗೆ ಪುರಸ್ಕರಿಸಿಲ್ಲ. ಈಗ ಬಂದಿರುವ ಹೊಸ ಸಚಿವರ ಮುಂದೆ ನಮ್ಮ ಮನವಿ ಸಲ್ಲಿಸುತ್ತೇವೆ ಎಂದು ಹೊಟೇಲ್‍ಗಳ ಸಂಘದ ಅಧ್ಯಕ್ಷ ಬಿ.ಸಿ.ರಾವ್ ಹೇಳಿದ್ದಾರೆ.

Related News

ತಮ್ಮ ಬೆಂಬಲಿಗನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ ; ವೀಡಿಯೊ ವೈರಲ್!
ರಾಜಕೀಯ

ತಮ್ಮ ಬೆಂಬಲಿಗನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ ; ವೀಡಿಯೊ ವೈರಲ್!

March 27, 2023
ಕಾಂಗ್ರೆಸ್‌ ಪಟ್ಟಿ ರಿಲೀಸ್‌: ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್‌ ನೀಡಿದೆ ಗೊತ್ತಾ..?
ರಾಜಕೀಯ

ಕಾಂಗ್ರೆಸ್‌ ಪಟ್ಟಿ ರಿಲೀಸ್‌: ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್‌ ನೀಡಿದೆ ಗೊತ್ತಾ..?

March 27, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.