- ಓವಲ್ನಲ್ಲಿ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ
- ಐದು ಪಂದ್ಯಗಳ ಟೆಸ್ಟ್ ಸರಣಿ ಡ್ರಾದಲ್ಲಿ ಕೊನೆಗೊಂಡಿದೆ (Huge win for India)
- ಕೊನೆಯ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ತನ್ನದಾಗಿಸಿಕೊಂಡಿದೆ
ದಿ ಓವಲ್ನಲ್ಲಿ ನಡೆದ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಡ್ ತಂಡವನ್ನು 6 ರನ್ಗಳ ಅಂತರದಿಂದ ಸೋಲಿಸುವುದರಲ್ಲಿ ಭಾರತ ಯಶಸ್ವಿಯಾಗಿದೆ.
ಮೊಹಮದ್ದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಬೌಲಿಂಗ್ ದರ್ಬಾರ್ ಗೆ, ಟೀಮ್ ಇಂಡಿಯಾಕ್ಕೆ ಭರ್ಜರಿ ಗೆಲವು ತಂದುಕೊಟ್ಟಿದೆ.

ಮೊಹಮ್ಮದ್ ಸಿರಾಜ್ ಅವರ ಅಬ್ಬರದ ಆಟದಿಂದ ಭಾರತವು ಅದ್ಭುತ ಗೆಲುವು ಸಾಧಿಸಿತು. ಇಂಗ್ಲೆಂಡ್ ತಂಡವನ್ನು ಅಚ್ಚರಿಗೊಳಿಸಿ ಐದು ಟೆಸ್ಟ್ಗಳ ಸರಣಿಯನ್ನು 2-2 ಅಂತರದಿಂದ ಸಮಬಲ ಸಾದಿಸಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಓವಲ್ನಲ್ಲಿ ನಡೆಯಿತು.
ಈ ರಣ ರೋಮಾಂಚಕ ಪಂದ್ಯದಲ್ಲಿ, ಇಂಗ್ಲೆಂಡ್ಗೆ ಗೆಲ್ಲಲು 35 ರನ್ ಮತ್ತು ಭಾರತಕ್ಕೆ 4 ವಿಕೆಟ್ಗಳು ಬೇಕಾಗಿದ್ದವು. ಭಾರತ ತಂಡ ಕೊನೆಯ ದಿನ ಕೆಲವೇ ಕೆಲವು ಓವರ್ಗಳಲ್ಲಿ ಇಂಗ್ಲೆಂಡ್ ಅನ್ನು ಆಲೌಟ್ ಮಾಡಿ ಭರ್ಜರಿ ಗೆಲುವು ಸಾದಿಸಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿ ಕೊನೆಗೊಂಡಿದ್ದೆ ಒಂದು ರೋಚಕ, ಓವಲ್ನಲ್ಲಿ ನಡೆದ ಸರಣಿಯ ಕೊನೆಯ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯವಾಗಿದೆ.
ಕೊನೆಯ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ, ರಣ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಇಂಗ್ಲೆಂಡ್ ಗೆಲ್ಲಲು ಕೊನೆಯ ದಿನದಲ್ಲಿ 35 ರನ್ ಬೇಕಾಗಿತ್ತು,
ಇತ್ತ ಟೀಂ ಇಂಡಿಯಾ ಗೆಲ್ಲಲು 4 ವಿಕೆಟ್ಗಳ ಅವಶ್ಯಕತೆ ಇತ್ತು. ಐದನೇ ದಿನದಾಟ ಆರಂಭವಾದ ಕೆಲವೇ ಕೆಲವು ಓವರ್ಗಳಲ್ಲಿ ಇಂಗ್ಲೆಂಡ್ ತಂಡವನ್ನು ಆಲೌಟ್ ಮಾಡುವ ಮೂಲಕ ಟೀಂ ಇಂಡಿಯಾ 6 ರನ್ಗಳ ವೀರೋಚಿತ ಗೆಲುವು ಸಾಧಿಸಿದೆ.
ಇದನ್ನು ಓದಿ: ಪ್ಯಾರಿಸ್ ಡೈಮಂಡ್ ಲೀಗ್ ನಲ್ಲಿ ಬಂಗಾರ ಗೆದ್ದ ನೀರಜ್ ಚೋಪ್ರಾ: ಜೂನಿಯರ್ ವೆಬರ್ ಗೆ ಸೋಲು!
ಟೀಂ ಇಂಡಿಯಾದ ಈ ಗೆಲುವಿನ ಖುಷಿಗೆ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ನೇರ ಕಾರಣರಾಗಿದ್ದಾರೆ . ಎರಡನೇ ಇನ್ನಿಂಗ್ಸ್ನಲ್ಲಿ ಮಾರಕ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್ 5 ವಿಕೆಟ್ಗಳ ಗೊಂಚಲು ಪಡೆದರೆ, ಇತ್ತ ಪ್ರಸಿದ್ಧ್ 4 ವಿಕೆಟ್ ಪಡೆದರು. ಉಳಿದ 1 ವಿಕೆಟ್ ಆಕಾಶ್ ದೀಪ್ ಪಡೆದುಕೊಂಡರು. (Huge win for India)