• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೊರೊನಾಗೆ ಬಲಿಯಾದವರ ಕುಟುಂಬಗಳಿಗೆ ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ; ಸುಪ್ರೀಂ ನಿರ್ದೇಶನ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಕೊರೊನಾಗೆ ಬಲಿಯಾದವರ ಕುಟುಂಬಗಳಿಗೆ ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ; ಸುಪ್ರೀಂ ನಿರ್ದೇಶನ
0
SHARES
0
VIEWS
Share on FacebookShare on Twitter

ನವದೆಹಲಿ, ಜೂ. 30: ಕೋವಿಡ್-19 ಮಹಾಮಾರಿಗೆ ಬಲಿಯಾದವರ ಕುಟುಂಬಗಳಿಗೆ ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ ಕೊಡಲು ಮಾರ್ಗಸೂಚಿ ರಚಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಮಾರ್ಗ ಸೂಚಿ ರಚಿಸಲು ರಾಷ್ಟ್ರೀಯ ವಿಪತ್ತು ನಿರ್​ವಹಣಾ ಪ್ರಾಧಿಕಾರಕ್ಕೆ ಆರು ವಾರ, ಅಂದರೆ ಸುಮಾರು ಒಂದೂವರೆ ತಿಂಗಳಷ್ಟು ಕಾಲಾವಧಿಯನ್ನು ಕೋರ್ಟ್ ನೀಡಿದೆ. ಕೋವಿಡ್​ನಿಂದ ಮೃತಪಟ್ಟ ಪ್ರತೀ ವ್ಯಕ್ತಿಯ ಕುಟುಂಬಕ್ಕೆ 4 ಲಕ್ಷ ರೂ ಪರಿಹಾರ ಒದಗಿಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ನ್ಯಾ| ಅಶೋಕ್ ಭೂಷಣ್ ನೇತೃತ್ವದ ತ್ರಿಸದಸ್ಯ ಸುಪ್ರೀಂ ನ್ಯಾಯಪೀಠ ಇಂದು ಈ ಆದೇಶ ಹೊರಡಿಸಿದೆ.

ಆದರೆ, ಕೋವಿಡ್​ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಒದಗಿಸಲು ಇರುವ ತೊಂದರೆಗಳ ಬಗ್ಗೆ ಕೇಂದ್ರ ಸರ್ಕಾರ ಕೂಡ ಕೋರ್ಟ್ ಬಳಿ ಹೇಳಿಕೊಂಡಿದೆ. ಇದು ವಿಪತ್ತು ಪರಿಹಾರ ನಿಧಿಯ ಹಣವನ್ನು ನೈಸರ್ಗಿಕ ವಿಕೋಪಗಳಿಗೆ ಮಾತ್ರ ಬಳಕೆ ಆಗಬೇಕೆಂಬ ಕಾನೂನು ಇದೆ. ಆದರೆ, ಕೋವಿಡ್ ಸಂತ್ರಸ್ತರಿಗೆ ಇದೇ ನಿಧಿಯಿಂದ ಪರಿಹಾರ ಒದಗಿಸಲು ಈ ಕಾನೂನಿನಲ್ಲಿ ಅವಕಾಶ ಇಲ್ಲ ಎಂಬುದು ಕೇಂದ್ರ ಸರ್ಕಾರದ ವಾದ.

“ಕೋವಿಡ್-19ನಿಂದ ಮೃತ ಪಟ್ಟ ಪ್ರತಿಯೊಬ್ಬ ವ್ಯಕ್ತಿಗೂ 4 ಲಕ್ಷ ರೂ ಪರಿಹಾರ ಒದಗಿಸಿದರೆ ಎಸ್​ಡಿಆರ್​ಎಫ್​ನಲ್ಲಿರುವ ಎಲ್ಲಾ ಹಣವೂ ಖಾಲಿಯಾಗಿ ಹೋಗುತ್ತದೆ. ಇನ್ನೂ ಹೆಚ್ಚುವರಿ ವೆಚ್ಚವೂ ಆಗಬಹುದು” ಎಂದು ಕೇಂದ್ರ ಸರಕಾರ ತನ್ನ ಅಸಹಾಯಕತೆ ತೋರ್ಪಡಿಸಿದೆ. ಅಲ್ಲದೇ, ಕೋವಿಡ್ ಸಂತ್ರಸ್ತರಿಗೆ ಮಾತ್ರ ಪರಿಹಾರ ನೀಡಿದರೆ, ಬೇರೆ ರೋಗಗಳಿಂದ ಮೃತಪಟ್ಟವರ ಕುಟುಂಬಕ್ಕೆ ಇದು ಅನ್ಯಾಯ ಎನಿಸಬಹುದು ಎಂಬ ವಾದವನ್ನೂ ಅದು ಮುಂದಿಟ್ಟಿದೆ. ಈ ಸಂಬಂಧ ಸರ್ವೋಚ್ಚ ನ್ಯಾಯಾಲಯಕ್ಕೆ ಕೇಂದ್ರವು 183 ಪುಟಗಳ ಅಫಿಡವಿಟ್ ಸಲ್ಲಿಕೆ ಮಾಡಿದೆ.

“ಕೋವಿಡ್ ಸಂತ್ರಸ್ತರಿಗೆ ಪರಿಹಾರ ನೀಡಲು ಎಸ್​ಡಿಆರ್​ಎಫ್​ನ ಎಲ್ಲಾ ಹಣವನ್ನೂ ವ್ಯಯಿಸಿದಲ್ಲಿ ರಾಜ್ಯ ಸರ್ಕಾರಗಳ ಬಳಿ ಬೇರೆ ಅಗತ್ಯಗಳಿಗೆ ಹಣ ಇಲ್ಲದಂತಾಗುತ್ತದೆ. ಕೋವಿಡ್ ವಿರುದ್ಧ ಹೋರಾಟಕ್ಕೆ, ವೈದ್ಯಕೀಯ ಸರಬರಾಜು ಇತ್ಯಾದಿ ಅಗ್ಯಗಳ ಪೂರೈಕೆಗೆ, ಅಥವಾ ಚಂಡಮಾರುತ, ನೆರೆ, ಬರ ಇತ್ಯಾದಿ ಪ್ರಕೃತಿ ವಿಕೋಪಗಳನ್ನ ಎದುರಿಸಲು ಹಣದ ಕೊರತೆ ಎದುರಾಗುತ್ತದೆ. ಆದ್ದರಿಂದ ಕೋವಿಡ್​ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಒದಗಿಸಲು ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಮಾಡಿಕೊಂಡ ಕೋರಿಕೆ ಈಡೇರಿಸಲು ರಾಜ್ಯ ಸರ್ಕಾರಗಳಿಂದ ಸಾಧ್ಯವಾಗದೇ ಹೋಗಬಹುದು” ಎಂದು ತನ್ನ ಅಫಿಡವಿಟ್​ನಲ್ಲಿ ಕೇಂದ್ರ ತಿಳಿಸಿದೆ.

ಇದೇ ವೇಳೆ, ಕಾರ್ಯಾಂಗದ ನೀತಿಗಳ ಬಗ್ಗೆ ನ್ಯಾಯಾಂಗ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ ಎಂಬ ವಿಚಾರವನ್ನೂ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ನೆನಪಿಸಿದೆ. ಈ ಹಿಂದೆ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಕೇಂದ್ರ ಉಲ್ಲೇಖಿಸಿ ನ್ಯಾಯಾಲಯದ ಪರಿಮಿತಿಯನ್ನು ಎತ್ತಿ ತೋರಿಸಲು ಪ್ರಯತ್ನಿಸಿದೆ.

ಆದರೆ, ಕೇಂದ್ರದ ವಾದದ ಮಧ್ಯೆಯೂ ಸುಪ್ರೀಂ ನ್ಯಾಯಪೀಠವು ಕೋವಿಡ್ ಸಂತ್ರಸ್ತರಿಗೆ ಪರಿಹಾರ ಒದಗಿಸುವ ಸಂಬಂಧ ಮಾರ್ಗಸೂಚಿ ನೀಡಬೇಕೆಂದು ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಆರು ವಾರಗಳ ಕಾಲಾವಕಾಶ ನೀಡಿದೆ. ಸೋಮವಾರ ಈ ಅರ್ಜಿಯ ಮುಂದಿನ ವಿಚಾರಣೆಯನ್ನು ನ್ಯಾಯಪೀಠ ನಡೆಸಲಿದೆ.ಇನ್ನು, ಆಸ್ಪತ್ರೆಗಳಲ್ಲಿ ಕೋವಿಡ್ ರೋಗದಿಂದ ಮೃತಪಟ್ಟಿರುವುದನ್ನು ಮಾತ್ರ ಅಧಿಕೃತವಾಗಿ ಕೋವಿಡ್ ಸಾವುಗಳೆಂದು ಪರಿಗಣಿಸಲಾಗುತ್ತದೆ. ಆದರೆ, ಆಸ್ಪತ್ರೆಯಿಂದ ಆಚೆ ಮನೆ, ರಸ್ತೆ ಹೀಗೆ ಯಾವುದೇ ಸ್ಥಳದಲ್ಲಾದರೂ ಕೋವಿಡ್ ರೋಗಿಗಳು ಮೃತಪಟ್ಟರೆ ಅದನ್ನ ಅಧಿಕೃತ ಲೆಕ್ಕಕ್ಕೆ ಸೇರಿಸಬೇಕೆಂದು ಸುಪ್ರೀಂ ಹೇಳಿದೆ.

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

May 31, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.