• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

“ಭಾರತ ಸಿಂಧೂರಿ” ಹೆಸರಿನಲ್ಲಿ ಬೆಳ್ಳಿತೆರೆಗೆ ಬರಲಿದೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಬಯೋಪಿಕ್

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
“ಭಾರತ ಸಿಂಧೂರಿ” ಹೆಸರಿನಲ್ಲಿ ಬೆಳ್ಳಿತೆರೆಗೆ ಬರಲಿದೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಬಯೋಪಿಕ್
0
SHARES
0
VIEWS
Share on FacebookShare on Twitter

ಮಂಡ್ಯ, ಜೂ. 09: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಕಾರ್ಯಕ್ಷಮತೆ ಆಧಾರಿತ ಸಿನಿಮಾ ಸದ್ದಿಲ್ಲದೇ ಸೆಟ್ಟೇರಲು ತಯಾರಿ ನಡೆದಿದೆ.

ಕಳೆದ ಕೆಲವು ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ಐಎಎಸ್ ಅಧಿಕಾರಿ ಶಿಲ್ಪಾನಾಗ್ ಅವರ ಜೊತೆಗಿನ ತಿಕ್ಕಾಟದ ನಂತರ ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ ಈ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ನಡುವಿನ ಹಗ್ಗಜಗ್ಗಾಟದ ಸುದ್ದಿ ರಾಜ್ಯಮಟ್ಟದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಆದರೆ ಈ ಎಲ್ಲಾ ಬೆಳವಣಿಗೆ ತಣ್ಣಗಾಗುತ್ತಿದ್ದಂತೆ ರೋಹಿಣಿ ಸಿಂಧೂರಿ ಅವರ ಆಡಳಿತ ವೈಖರಿಯನ್ನೇ ಕಥಾ ವಸ್ತುವಾಗಿ ರೂಪಿಸಿರುವ ‘ಭಾರತ ಸಿಂಧೂರಿ’ ಶೀರ್ಷಿಕೆಯೊಂದಿಗೆ ಬಯೋಪಿಕ್ ಸಿನಿಮಾಗೆ ಪೂರ್ವ ತಯಾರಿ ನಡೆದಿದೆ.

ತಮ್ಮ ಡೋಂಟ್ ಕೇರ್ ಆ್ಯಟಿಟ್ಯೂಡ್ ಮೂಲಕವೇ
ರಾಜ್ಯದ ದಕ್ಷ ಐಎಎಸ್ ಅಧಿಕಾರಿ ಎಂದೇ ಹೆಸರಾಗಿರುವ ರೋಹಿಣಿ ಸಿಂಧೂರಿ ಅವರ ಕಾಯಕ ಆಧಾರಿತ ಈ ಸಿನಿಮಾ ನಿರ್ಮಾಣಕ್ಕೆ ಈಗಾಗಲೇ ಸಿದ್ಧತೆ ನಡೆದಿದೆ. ಲಾಕ್ ಡೌನ್ ಬಳಿಕ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ಹೆಚ್ಚಾಗಿದೆ.

ಮಹಿಳಾ ಪ್ರಧಾನ ಚಿತ್ರಕ್ಕೆ ಮಂಡ್ಯದ ಹುಡುಗಿ ಅಕ್ಷತಾ ಪಾಂಡುಪುರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಚಿತ್ರತಂಡ ತಿಳಿಸಿದೆ. ಈ ಸಂಬಂಧ ಈಗಾಗಲೇ ಸಿನಿಮಾದ ಟೈಟಲ್ ನೋಂದಣಿಯಾಗಿದೆ. ಕಸಾಪ ಚುನಾವಣೆ ಮತ್ತು ಲಾಕ್ ಡೌನ್ ನಂತರ ಸಿನಿಮಾ ಸೆಟ್ಟೇರಲಿದೆ.

ಈ ಸಿನಿಮಾದ ಕಥೆ, ಚಿತ್ರಕಥೆ, ಸಾಹಿತ್ಯ, ರಚನೆ ಹಾಗೂ ನಿರ್ದೇಶನವನ್ನು ಮಂಡ್ಯದವರೇ ಆದ ಕವಿ, ಪತ್ರಕರ್ತ, ಸಂಘಟಕ ಎಸ್. ಕೃಷ್ಣಸ್ವರ್ಣಸಂದ್ರ ಮಾಡಲಿದ್ದಾರೆ. ಈಗಾಗಲೇ ನಾಡಿನ ಹಲವಾರು ದಕ್ಷ ಹಾಗೂ ಪ್ರಾಮಾಣಿಕ ಐಎಎಸ್ , ಐಪಿಎಸ್ ಅಧಿಕಾರಿಗಳಿಗೆ ಫ್ಯಾನ್ ಫಾಲೋವರ್ಸ್ ಇರೋದು ಕಂಡಿದ್ದೇವೆ ಈ ಕಾರಣಕ್ಕೆ ಇಂಥ ಅಧಿಕಾರಿಗಳ ಜೀವನ ಆಧಾರಿತ ಸಿನಿಮಾಗಳು ತಯಾರಾಗಿ ಅವು ಗಲ್ಲಾ ಪೆಟ್ಟಿಗೆಯಲ್ಲೂ ಯಶಸ್ವಿಯಾದ ಇತಿಹಾಸವಿದೆ.

ಈ ಸಾಲಿನಲ್ಲಿ ಇದೀಗ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸೇರ್ಪಡೆ. ಸೋಷಿಯಲ್ ಮೀಡಿಯಾದಲ್ಲಿ ಅಪಾರ ಫಾಲೋವರ್ಸ್ ಹೊಂದಿರುವ ಸಿಂಧೂರಿ ಅವರ ಕಾಯಕ ಆಧಾರಿತ ‘ ಭಾರತಸಿಂಧೂರಿ’ ಸಿನಿಮಾ ಸೆಟ್ಟಿರುತ್ತಿರುವ ಸುದ್ದಿ ಬಂದಿದೆ.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.