- ಬಜೆಟ್ 2026: ಪಿಎಂ ಕಿಸಾನ್ ಯೋಜನೆ (increase in pm kisan yojana) ರೈತರ ಪಾಲಿಗೆ ವರವಾಗಲಿದೆಯೇ ?
- 2026ರ ಕೇಂದ್ರ ಬಜೆಟ್ನಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಮೊತ್ತ ಹೆಚ್ಚಾಗುವ ಸಾಧ್ಯತೆ ಬಗ್ಗೆ ತಜ್ಞರ ಅಂದಾಜು
- ಹೆಚ್ಚುತ್ತಿರುವ ಕೃಷಿ ವೆಚ್ಚಗಳ ನಡುವೆಯೇ ಪಿಎಂ ಕಿಸಾನ್ ನೆರವು ಹೆಚ್ಚುವ ನಿರೀಕ್ಷೆ
New delhi: ಭಾರತದ ಕೃಷಿ ಕ್ಷೇತ್ರದ ಬೆನ್ನೆಲುಬಾಗಿರುವ ರೈತರ ಕಲ್ಯಾಣಕ್ಕಾಗಿ (increase in pm kisan yojana) ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಮುಖ ಯೋಜನೆಗಳಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆ ಅಗ್ರಸ್ಥಾನದಲ್ಲಿದೆ.
ಸಣ್ಣ ಮತ್ತು ಅತಿ ಸಣ್ಣ ರೈತರು ಕೃಷಿಗೆ ಬೇಕಾದ ಮೂಲಭೂತ ಅಗತ್ಯಗಳನ್ನು ಪೂರೈಸಿಕೊಳ್ಳಲು ಎದುರಿಸುವ ಆರ್ಥಿಕ ಸಮಸ್ಯೆಗಳನ್ನು ತಗ್ಗಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ.
ದೇಶದ ವಿವಿಧ ಭಾಗಗಳಲ್ಲಿ ಕೃಷಿ ವೆಚ್ಚಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಈ ಸಂದರ್ಭದಲ್ಲಿ, ವರ್ಷಕ್ಕೆ ನೇರವಾಗಿ ಹಣಕಾಸು ನೆರವು ನೀಡುವ ಯೋಜನೆ ರೈತರಿಗೆ ಒಂದು ಭರವಸೆಯ ದೀಪವಾಗುತ್ತಿದೆ.

ಯಾವುದೇ ಮಧ್ಯವರ್ತಿಗಳಿಲ್ಲದೆ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ (increase in pm kisan yojana) ಆಗುವುದರಿಂದ ಪಾರದರ್ಶಕತೆ ಹೆಚ್ಚಿದ್ದು, ಸರ್ಕಾರದ ಮೇಲಿನ ವಿಶ್ವಾಸವೂ ಬಲಗೊಂಡಿದೆ.
2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತರಿಗೆ ವರ್ಷಕ್ಕೆ ಒಟ್ಟು 6,000 ರೂಪಾಯಿಗಳನ್ನು ಮೂರು ಸಮಾನ ಕಂತುಗಳಲ್ಲಿ ನೀಡಲಾಗುತ್ತಿದೆ.
ಪ್ರತಿ ನಾಲ್ಕು ತಿಂಗಳಿಗೆ ಒಮ್ಮೆ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತಿದ್ದು, ಬೀಜ, ರಸಗೊಬ್ಬರ, ಕೀಟನಾಶಕಗಳು ಹಾಗೂ ಇತರೆ ಕೃಷಿ ಉಪಕರಣಗಳ ಖರೀದಿಗೆ ಇದು ಸಹಾಯಕರವಾಗಿದೆ.
ಆರಂಭದಲ್ಲಿ ಸೀಮಿತ ಸಂಖ್ಯೆಯ ರೈತರಿಗೆ ಮಾತ್ರ ಈ ಯೋಜನೆ ಅನ್ವಯವಾಗಿದ್ದರೂ, ಹಂತ ಹಂತವಾಗಿ ವ್ಯಾಪ್ತಿಯನ್ನು ವಿಸ್ತರಿಸಲಾಗಿದ್ದು, ಇಂದು ಕೋಟ್ಯಂತರ ರೈತರು ಇದರ ಲಾಭ ಪಡೆಯುತ್ತಿದ್ದಾರೆ.
ಇದರಿಂದ ಕೃಷಿ ಆರಂಭದ ಹಂತದಲ್ಲೇ ಸಾಲದ ಅವಶ್ಯಕತೆ ಕಡಿಮೆಯಾಗಿದ್ದು, ರೈತರ ಆರ್ಥಿಕ ಒತ್ತಡವೂ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ.
ಪ್ರಸ್ತುತ ದೇಶದಾದ್ಯಂತ ರೈತರು ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣಕ್ಕಾಗಿ ನಿರೀಕ್ಷೆಯಿಂದ ಕಾಯುತ್ತಿದ್ದಾರೆ.
ಪ್ರತಿ ಕಂತು ಬಿಡುಗಡೆಯಾಗುವಾಗ ಸರ್ಕಾರ ಸಾವಿರಾರು ಕೋಟಿ ರೂಪಾಯಿಗಳನ್ನು ನೇರ ಲಾಭಾಂಶ ವರ್ಗಾವಣೆ (DBT) ಮೂಲಕ ಬಿಡುಗಡೆ ಮಾಡುತ್ತದೆ.
ಇದು ಗ್ರಾಮೀಣ ಆರ್ಥಿಕತೆಯಲ್ಲಿ ಹಣದ ಹರಿವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ವಿಶೇಷವಾಗಿ ಕೃಷಿ ಹಂಗಾಮಿನ ಸಮಯದಲ್ಲಿ ಈ ಹಣ ರೈತರಿಗೆ ದೊಡ್ಡ ನೆರವಾಗುತ್ತದೆ.
ಹೀಗಾಗಿ ಮುಂದಿನ ಕಂತು ಯಾವಾಗ ಜಮಾ ಆಗಲಿದೆ ಎಂಬ ಪ್ರಶ್ನೆ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಸರ್ಕಾರದಿಂದ ಅಧಿಕೃತ ಘೋಷಣೆ ಹೊರಬೀಳುವವರೆಗೂ ರೈತ ಸಮುದಾಯ ಕಾತರದಿಂದ ಕಾಯುತ್ತಿದೆ.
ಪ್ರತಿ ವರ್ಷ ಕೇಂದ್ರ ಸರ್ಕಾರ ಮಂಡಿಸುವ ಬಜೆಟ್ನಲ್ಲಿ ಪಿಎಂ ಕಿಸಾನ್ ಯೋಜನೆಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.
2024-25ನೇ ಆರ್ಥಿಕ ವರ್ಷದಲ್ಲಿ ಆರಂಭದಲ್ಲಿ ಸುಮಾರು 60,000 ಕೋಟಿ ರೂಪಾಯಿಗಳನ್ನು ಈ ಯೋಜನೆಗೆ ಮೀಸಲಿಡಲಾಗಿದ್ದು,
ನಂತರ ಅಗತ್ಯದ ಮೇರೆಗೆ ಈ ಮೊತ್ತವನ್ನು ಹೆಚ್ಚಿಸಿ 63,500 ಕೋಟಿ ರೂಪಾಯಿಗಳಿಗೆ ತಲುಪಿಸಲಾಗಿದೆ.
2023-24ನೇ ಸಾಲಿನಲ್ಲಿ ಮಾತ್ರವೇ ಈ ಯೋಜನೆಗೆ 61,440 ಕೋಟಿಗೂ ಹೆಚ್ಚು ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಕಳೆದ ಕೆಲವು
ವರ್ಷಗಳಲ್ಲಿ ಬಜೆಟ್ ಮೊತ್ತದಲ್ಲಿ ನಿರಂತರ ಏರಿಕೆ ಕಂಡುಬರುತ್ತಿದ್ದು, ಇದು ಸರ್ಕಾರ ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಮಹತ್ವವನ್ನು ಸ್ಪಷ್ಟಪಡಿಸುತ್ತದೆ.
ಲಾಭಾಂಶ ಪಡೆಯುವ ರೈತರ ಸಂಖ್ಯೆ ಹೆಚ್ಚುತ್ತಿರುವುದರಿಂದ, ಸರ್ಕಾರದ ಮೇಲಿನ ಆರ್ಥಿಕ ಒತ್ತಡವೂ ಹೆಚ್ಚಾಗುತ್ತಿದೆ ಎಂಬುದು ಗಮನಾರ್ಹ.
ಇದೀಗ ಎಲ್ಲರ ಗಮನ 2026ರ ಕೇಂದ್ರ ಬಜೆಟ್ನತ್ತ ಹರಿದಿದೆ. ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದು, ಈ ಬಾರಿ ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಒತ್ತು ಸಿಗುವ ನಿರೀಕ್ಷೆ ಇದೆ.
ವರ್ಷಕ್ಕೆ ನೀಡಲಾಗುತ್ತಿರುವ 6,000 ರೂಪಾಯಿಗಳ ನೆರವನ್ನು ಹೆಚ್ಚಿಸಬೇಕು ಎಂಬ ಬೇಡಿಕೆ ರೈತ ಸಂಘಟನೆಗಳಿಂದ ಬಹುಕಾಲದಿಂದ ಕೇಳಿಬರುತ್ತಿದೆ.
ಉತ್ಪಾದನಾ ವೆಚ್ಚಗಳು ದಿನೇದಿನೇ ಏರುತ್ತಿರುವ ಹಿನ್ನೆಲೆಯಲ್ಲಿ ಈ ಮೊತ್ತ ಸಾಕಾಗುತ್ತಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.
ಸರ್ಕಾರ ಈ ಮೊತ್ತವನ್ನು ಹೆಚ್ಚಿಸುವ ನಿರ್ಧಾರ ಕೈಗೊಂಡರೆ, ಅದು ಕೋಟ್ಯಂತರ ರೈತರಿಗೆ ದೊಡ್ಡ ಶಕ್ತಿಯಾಗುವುದರ ಜೊತೆಗೆ ಗ್ರಾಮೀಣ ಆರ್ಥಿಕತೆಯ ಚಟುವಟಿಕೆಗಳಿಗೆ ಮತ್ತಷ್ಟು ವೇಗ ನೀಡುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ಬಜೆಟ್ನಲ್ಲಿ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳತ್ತ ರೈತ ಸಮುದಾಯ ಭಾರೀ ನಿರೀಕ್ಷೆಯೊಂದಿಗೆ ಕಾಯುತ್ತಿದೆ.
ಇದನ್ನು ಓದಿ : https://vijayatimes.com/illegal-shed-clearance-kogilu-layout/