ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ: ಟ್ರಯಲ್ ಪ್ರಕ್ರಿಯೆ ಮುಗಿಸದ ವ್ಯಾಕ್ಸಿನ್‌ ಬಳಕೆಯೇ ಕಾರಣ ಎಂದ ಕಾಂಗ್ರೆಸ್‌

ಬೆಂಗಳೂರು, ಏ. 06: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗಲು ಸರ್ಕಾರದ ನಿರ್ಲಕ್ಷ್ಯ ಹಾಗೂ ಸಂಪೂರ್ಣ ಟ್ರಯಲ್ ಪ್ರಕ್ರಿಯೆ ಮುಗಿಸದ ವ್ಯಾಕ್ಸಿನ್ ಬಳಕೆ ಮಾಡುತ್ತಿರುವುದೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್,‍ ಕೋವಿಡ್‌ ಟೆಸ್ಟ್‌ಗಳನ್ನು ಕಡಿಮೆ ಮಾಡಿ ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡು ಕುಳಿತಿದ್ದರ ಪರಿಣಾಮವಿದು. ಸಂಪೂರ್ಣ ಟ್ರಯಲ್ ಪ್ರಕ್ರಿಯೆ ಮುಗಿಸದ ವ್ಯಾಕ್ಸಿನ್‌ ಗಳ ಮಾರ್ಕೆಟಿಂಗ್ ಮಾಡುವುದರಲ್ಲಿ ಮುಳುಗಿದ್ದರ ಪರಿಣಾಮವಿದು. ‘ಸೋಂಕಿತ ಸರ್ಕಾರ’ ಕೊರೊನಾ ಹೆಸರಲ್ಲಿ ಭ್ರಷ್ಟಾಚಾರ ನಡೆಸಿದ್ದರ ಪರಿಣಾಮ ಇದು. ಇಂದು ಸೋಂಕು ದಾಖಲೆ ಮಟ್ಟಕ್ಕೇರಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

 ಕಳೆದ ವರ್ಷ ಕೊರೊನಾ ಬಂದಾಗ ಸ್ವಿಮ್ಮಿಂಗ್ ಫೂಲ್‌ ನಲ್ಲಿ ಮೋಜು ಮಾಡುತ್ತಿದ್ದರು. ಈ ಬಾರಿ ಕರೋನಾ ಉಲ್ಬಣಿಸಿದಾಗ ಸಿಡಿಗೆ ತಡೆಯಾಜ್ಞೆ ತರುವುದರಲ್ಲಿ, ಕಂಡವರ ಹೆಂಡತಿಯರ ಲೆಕ್ಕ ಹಾಕುವುದರಲ್ಲಿ ಬ್ಯುಸಿಯಾಗಿದ್ದಾರೆ ಆರೋಗ್ಯ ಸಚಿವ ಸುಧಾಕರ್ ಎಂದು ಲೇವಡಿ ಮಾಡಿರುವ ಕಾಂಗ್ರೆಸ್, ಆಂತರಿಕ ಕಚ್ಚಾಟ, ಸಿಡಿ ಕಳ್ಳಾಟದಲ್ಲಿ ಮುಳುಗಿದ ಬಿಜೆಪಿ ಸರ್ಕಾರ ಸರ್ಕಾರ ಕೊರೊನಾ ನಿರ್ವಹಿಸುವುದರಲ್ಲಿ ಸೋತಿದೆ ಎಂದು ಟೀಕಿಸಿದೆ.

Exit mobile version