SIR, ಬೆಲೆ ಏರಿಕೆ, ನಿರುದ್ಯೋಗಕ್ಕೆ ವಿರುದ್ಧ (INDIA alliance meeting against Modi government) ಧ್ವನಿ ಎತ್ತಿದ INDIA ಮೈತ್ರಿಕೂಟ
ಜನಸಾಮಾನ್ಯರ ಸಮಸ್ಯೆಗಳನ್ನು ಮುಂದಿಟ್ಟು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ನಿರ್ಧಾರ
ಒಗ್ಗಟ್ಟೇ ನಮ್ಮ ಶಕ್ತಿ: ಪ್ರತಿಪಕ್ಷ ನಾಯಕರಿಗೆ ಖರ್ಗೆ ಸಂದೇಶ, ಕೇಂದ್ರ ಸರ್ಕಾರವನ್ನು ಎದುರಿಸಲು ಕಾರ್ಯತಂತ್ರ ರೂಪಿಸಿದ ಸಭೆ
New Delhi: ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಹೋರಾಟವನ್ನು ಮತ್ತಷ್ಟು (INDIA alliance meeting against Modi government) ತೀವ್ರಗೊಳಿಸಲು INDIA ಮೈತ್ರಿಕೂಟ ಸಜ್ಜಾಗಿದ್ದು, ಭಿನ್ನಾಭಿಪ್ರಾಯಗಳ ನಡುವೆಯೂ ಪ್ರತಿಪಕ್ಷಗಳ ಒಗ್ಗಟ್ಟನ್ನು ಬಲಪಡಿಸುವ ಪ್ರಯತ್ನಕ್ಕೆ ವೇದಿಕೆ ಸಿದ್ಧವಾಗಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸುಮಾರು 23 ಪ್ರತಿಪಕ್ಷಗಳ ನಾಯಕರು ಭಾಗವಹಿಸಿ, ಮುಂದಿನ ದಿನಗಳಲ್ಲಿ ಅನುಸರಿಸಬೇಕಾದ ರಾಜಕೀಯ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) , ದೇಶ ಎದುರಿಸುತ್ತಿರುವ ವಿವಿಧ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಪ್ರತಿಪಕ್ಷಗಳ ಒಗ್ಗಟ್ಟು ಅತ್ಯಗತ್ಯ ಎಂದು ಒತ್ತಿ ಹೇಳಿದರು.
ಮೂರು ವರ್ಷಗಳ ಹಿಂದೆ ಸ್ಥಾಪನೆಯಾದ INDIA ಮೈತ್ರಿಕೂಟವು ಸಂಸತ್ತಿನೊಳಗೂ ಹೊರಗೂ ತನ್ನ ಪ್ರಭಾವವನ್ನು ಸಾಬೀತುಪಡಿಸಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಖರ್ಗೆ, ಇತ್ತೀಚಿನ ದಿನಗಳಲ್ಲಿ ಪ್ರತಿಪಕ್ಷಗಳು ಹಲವು ಪ್ರಮುಖ ವಿಚಾರಗಳಲ್ಲಿ ಒಗ್ಗಟ್ಟಿನ ಹೋರಾಟ ನಡೆಸಿರುವುದನ್ನು ನೆನಪಿಸಿದರು.
ವಿಶೇಷವಾಗಿ ಲೋಕಸಭೆಯಲ್ಲಿ ಕ್ಷೇತ್ರ ಪುನರ್ವಿಂಗಡಣೆ ಸಂಬಂಧಿತ ವಿಚಾರದಲ್ಲಿ ಎಲ್ಲ ಪಕ್ಷಗಳು ಒಂದೇ ಧ್ವನಿಯಲ್ಲಿ ಸರ್ಕಾರವನ್ನು ಪ್ರಶ್ನಿಸಿದ್ದವು ಎಂದು ಹೇಳಿದರು.
ಇದೇ ಮನೋಭಾವವನ್ನು ಮುಂದುವರಿಸಿಕೊಂಡು ದೇಶದ ಜನತಾಂತ್ರಿಕ ಮೌಲ್ಯಗಳು ಹಾಗೂ ಸಂವಿಧಾನದ ರಕ್ಷಣೆಗೆ ಪ್ರತಿಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಅವರು ಕರೆ ನೀಡಿದರು.
ಪ್ರಸ್ತುತ ದೇಶದಲ್ಲಿ ರಾಜಕೀಯ ಮತ್ತು ಆಡಳಿತಾತ್ಮಕ ಸವಾಲುಗಳು (INDIA alliance meeting against Modi government) ಹೆಚ್ಚುತ್ತಿದ್ದು, ಬಲಿಷ್ಠ ಹಾಗೂ ಜವಾಬ್ದಾರಿಯುತ ಪ್ರತಿಪಕ್ಷದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.
ಈ ವೇಳೆ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಖರ್ಗೆ ತೀವ್ರವಾಗಿ ಟೀಕಿಸಿದರು. ಈ ಪ್ರಕ್ರಿಯೆಯಿಂದ ಲಕ್ಷಾಂತರ ಮತದಾರರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುವ ಅಪಾಯ ಎದುರಿಸುತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಜೊತೆಗೆ ಸಂವಿಧಾನದ ಮೂಲಭೂತ ಮೌಲ್ಯಗಳ ಮೇಲೆ ನಿರಂತರ ದಾಳಿ ನಡೆಯುತ್ತಿದೆ ಎಂದು ಆರೋಪಿಸಿದರು. ಕೇಂದ್ರ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಗಳಿಗೆ
ಬಳಸಿಕೊಳ್ಳಲಾಗುತ್ತಿದೆ ಹಾಗೂ ಬಿಜೆಪಿ (BJP) ಆಡಳಿತವಿಲ್ಲದ ರಾಜ್ಯಗಳ ವಿರುದ್ಧ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ ಎಂದು ಅವರು ಟೀಕಿಸಿದರು.
ಈ ಬೆಳವಣಿಗೆಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿವೆ ಎಂದು ಹೇಳಿದರು.
ದೇಶದ ಆರ್ಥಿಕ ಪರಿಸ್ಥಿತಿಯ ಕುರಿತೂ ಖರ್ಗೆ ಕಳವಳ ವ್ಯಕ್ತಪಡಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಅವರು ಹೇಳಿದರು.
ಯುವಕರಿಗೆ ಸಾಕಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿಲ್ಲ ಹಾಗೂ ಹೊಸ ಹೂಡಿಕೆಗಳು ನಿರೀಕ್ಷಿತ ಮಟ್ಟದಲ್ಲಿ ಬರುತ್ತಿಲ್ಲ ಎಂಬುದು ಆತಂಕಕಾರಿ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (MSME) ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಆರ್ಥಿಕ ಅಸಮಾನತೆ ಹೆಚ್ಚುತ್ತಿರುವುದು ಚಿಂತಾಜನಕ ಸಂಗತಿ ಎಂದು ಹೇಳಿದರು.
ಅಲ್ಲದೆ, ನೀಟ್ ಮತ್ತು ಸಿಬಿಎಸ್ಇ (CBSE) ಪರೀಕ್ಷೆಗಳ ನಿರ್ವಹಣೆಯಲ್ಲಿ ಪದೇಪದೇ ಎದುರಾಗುತ್ತಿರುವ ಸಮಸ್ಯೆಗಳು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತಿವೆ ಎಂದು ಟೀಕಿಸಿದರು.
ಸಭೆಯಲ್ಲಿ ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿ (Sonia Gandhi) ಮತ್ತು ರಾಹುಲ್ ಗಾಂಧಿ ಸೇರಿದಂತೆ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಆರ್ಜೆಡಿ ನಾಯಕ ತೇಜಸ್ವಿ ಯಾದವ್ (Tejaswi Yadav) , ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ (Mehbooba Mufti) ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಿದ್ದರು.
ಆದರೆ, ಡಿಎಂಕೆ ಮತ್ತು ಎಎಪಿ ಸಭೆಗೆ ಗೈರಾಗಿರುವುದು ಮೈತ್ರಿಕೂಟದೊಳಗಿನ ಭಿನ್ನಾಭಿಪ್ರಾಯಗಳ ಬಗ್ಗೆ ಚರ್ಚೆಗೆ ಕಾರಣವಾಯಿತು. ಆದಾಗ್ಯೂ, ಸಭೆಯ ಅಂತ್ಯದಲ್ಲಿ
ಎಲ್ಲಾ ಮಿತ್ರಪಕ್ಷಗಳ ಅಭಿಪ್ರಾಯಗಳನ್ನು ಪರಿಗಣಿಸಿ ಮುಂದಿನ ರಾಜಕೀಯ ಕಾರ್ಯತಂತ್ರ ರೂಪಿಸಲಾಗುವುದು ಎಂದು ಖರ್ಗೆ ಸ್ಪಷ್ಟಪಡಿಸಿದರು.
ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಮನ್ವಯಿತ ಹೋರಾಟ ನಡೆಸುವ ಮೂಲಕ INDIA ಮೈತ್ರಿಕೂಟ ತನ್ನ ರಾಜಕೀಯ ಬಲವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.
ಇದನ್ನು ಓದಿ : https://vijayatimes.com/mutual-fund-new-schemes/