ಪಾಕ್‌ ವಿರುದ್ದ ಭಾರತ ಸೋತ ಹಿನ್ನಲೆ, ಅಭಿಮಾನಿ ಹೃದಯಾಘಾತದಿಂದ ಸಾವು

ಮಡಿಕೇರಿ: ಟಿ20 ವಿಶ್ವಕಪ್ ನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಹೀನಾಯವಾಗಿ ಸೋಲನುಭವಿಸಿತ್ತು. ಟೀಂ ಇಂಡಿಯಾದ ಸೋಲಿನಿಂದ ಆಘಾತಕ್ಕೊಳಗಾದ ಕೊಡಗಿನ ಕ್ರಿಕೆಟ್ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ ಗ್ರಾಮದ ಉದಯ್ (55) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಾಲೇಜು ದಿನಗಳಲ್ಲಿ ಕ್ರಿಕೆಟ್ ಆಟಗಾರರಾಗಿದ್ದ ಉದಯ್ ಅವರು ನಿನ್ನೆ ರಾತ್ರಿ ಭಾರತ ಮತ್ತು ಪಾಕ್ ಪಂದ್ಯವನ್ನು ನೋಡುತ್ತಿದ್ದು. ಭಾರತ ತಂಡ ಸೋಲನುಭವಿಸಿದ 10 ನಿಮಿಷಗಳಲ್ಲಿ ಉದಯ್ ಅವರಿಗೆ ಹೃದಯಾಘಾತವಾಗಿದೆ.

ತಕ್ಷಣವೇ ಕುಟುಂಬಸ್ಥರು ಅವರನ್ನು ಸೋಮವಾರಪೇಟೆಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಉದಯ್ ಅವರು ಮೃತಪಟ್ಟಿದ್ದಾರೆ.

Exit mobile version