ಭಾರತ ತಂಡಕ್ಕೆ ರೋಹಿತ್ ನೂತನ ಸಾರಥಿ

ಮುಂಬೈ ನ 10 : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಂಗಳವಾರ ನ್ಯೂಜಿಲ್ಯಾಂಡ್ ವಿರುದ್ದದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದು, ಟೀಂ ಇಂಡಿಯಾ ಟಿ-20 ತಂಡದ ಹೊಸ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಿದೆ.

ಉಪನಾಯಕನ ಜವಾಬ್ದಾರಿ ಕೆಎಲ್ ರಾಹುಲ್ ಅವರಿಗೆ ವಹಿಸಲಾಗಿದೆ. 16 ಸದಸ್ಯರನ್ನು ಒಳಗೊಂಡಿರುವ ಈ ತಂಡದಲ್ಲಿ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ಇನ್ನು ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ವೆಂಕಟೇಶ್ ಅಯ್ಯರ್ ಹಾಗೂ ಅವೇಶ್ ಖಾನ್ ಅವರು ಸ್ಥಾನ ಪಡೆದಿದ್ದಾರೆ. ಹಾಗೆಯೇ ಯುಜುವೇಂದ್ರ ಚಹಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅದೇ ರೀತಿ ವಿಕೆಟ್ ಕೀಪರ್​ಗಳಾಗಿ ರಿಷಭ್ ಪಂತ್ ಹಾಗೂ ಇಶಾನ್ ಕಿಶನ್ ತಂಡದಲ್ಲಿದ್ದಾರೆ.

ಭಾರತ ತಂಡ ಇಂತಿದೆ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಅಶ್ವಿನ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್

Exit mobile version